AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬಾಲ್ಯದ ಭರವಸೆ ಈಡೇರಿಸಿದ ಮಗ; ಮೊದಲ ಬಾರಿಗೆ ತಾಯಿಯನ್ನು ಹೆಲಿಕಾಪ್ಟರ್ ಹತ್ತಿಸಿದ ಯುವಕ

ತಂದೆ ತಾಯಂದಿರು ತಮ್ಮ ಮಕ್ಕಳನ್ನು ಸಣ್ಣ ಕೊರತೆ ಬಾರದಂತೆ ನೋಡಿಕೊಳ್ಳುತ್ತಾರೆ. ಇತ್ತ ಮಕ್ಕಳು ಕೂಡ ಬೆಳೆಯುತ್ತಾ ಹೋದಂತೆ ತಂದೆ ತಾಯಿಯ ಆಸೆ ಕನಸುಗಳನ್ನು ಈಡೇರಿಸುತ್ತಾರೆ. ಆದರೆ ಇಲ್ಲೊಬ್ಬ ಯುವಕನು ತನ್ನ ಬಾಲ್ಯದಲ್ಲಿ ತಾಯಿಗೆ ನೀಡಿದ್ದ ಭರವಸೆಯನ್ನು ದೊಡ್ಡವನಾದ ಮೇಲೆ ಈಡೇರಿಸಿದ್ದಾನೆ. ಈ ಹೃದಯ ಸ್ಪರ್ಶಿ ಕ್ಷಣದ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರ ಗಮನ ಸೆಳೆಯುತ್ತಿದೆ.

Video: ಬಾಲ್ಯದ ಭರವಸೆ ಈಡೇರಿಸಿದ ಮಗ; ಮೊದಲ ಬಾರಿಗೆ ತಾಯಿಯನ್ನು ಹೆಲಿಕಾಪ್ಟರ್ ಹತ್ತಿಸಿದ ಯುವಕ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jul 05, 2026 | 4:42 PM

Share

ಸಾಮಾನ್ಯವಾಗಿ ಈ ಮಕ್ಕಳು ಸಣ್ಣ ವಯಸ್ಸಿನಲ್ಲಿ ಹೆತ್ತವರ ಮುಂದೆ ನಾವು ದೊಡ್ಡವರು ಆದ ಮೇಲೆ ಹಾಗೆ ಆಗುತ್ತೇವೆ, ಹೀಗೆ ಆಗುತ್ತೇವೆ. ನಿಮ್ಮನ್ನು ಊರು ಸುತ್ತಿಸುತ್ತೇವೆ ಹೀಗೆ ಹೇಳುವುದನ್ನು ಕೇಳಿರುತ್ತೀರಿ. ಆದರೆ ಇಲ್ಲೊಬ್ಬ ಯುವಕನು ಕೊನೆಯ ತನ್ನ ತಾಯಿಗೆ (mother) ಬಾಲ್ಯದಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಿ, ಹೆತ್ತಮ್ಮನ ಮೊಗದಲ್ಲಿ ನಗು ಮೂಡಿಸಿದ್ದಾನೆ. ತಾನು ಬಾಲ್ಯದಲ್ಲಿ ಹೇಳಿದ್ದಂತೆ ಅಮ್ಮನನ್ನು ಮೊದಲ ಬಾರಿಗೆ ಹೆಲಿಕಾಪ್ಟರ್ ಹತ್ತಿಸಿ ಆಕಾಶದಲ್ಲಿ ಹಾರಾಡುವಂತೆ ಮಾಡಿದ್ದಾನೆ. ಈ ಹೃದಯ ಸ್ಪರ್ಶಿ ಕ್ಷಣದ ಕ್ಲಿಪಿಂಗ್ ನೆಟ್ಟಿಗರ ಹೃದಯ ಗೆದ್ದಿದೆ.

ಯೋಗೇಶ್ ರಾವತ್ (yogeshrawat04) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ಗೆ ನನ್ನ ಹೆಲಿಕಾಪ್ಟರ್ ಸವಾರಿ ಎಂಬ ಶೀರ್ಷಿಕೆ ನೀಡಲಾಗಿದೆ. ಈ ವಿಡಿಯೋ, ನಾನು ದೊಡ್ಡವನಾದಾಗ ಅವಳನ್ನು ಹೆಲಿಕಾಪ್ಟರ್‌ನಲ್ಲಿ ಕೂರಿಸುತ್ತೇನೆ ಎಂದು ನನ್ನ ಬಾಲ್ಯದಲ್ಲಿ ನನ್ನ ತಾಯಿಗೆ ಭರವಸೆ ನೀಡಿದ್ದೆ, ಆದ್ದರಿಂದ ಇಂದು ಆ ದಿನ ಬಂದಿದೆ. ಆದರೆ, ನನ್ನ ತಾಯಿ ಹೆಲಿಕಾಪ್ಟರ್ ನೋಡಿದ ತಕ್ಷಣ ಭಯಭೀತರಾದರು. ಅಮ್ಮನ ಮುಖದಲ್ಲಿನ ಈ ನಗುವನ್ನು ನೋಡಿ. ಆಕೆ ಹೆಲಿಕಾಪ್ಟರ್‌ನಲ್ಲಿ ಕುಳಿತುಕೊಳ್ಳಲು ಹೆದರುತ್ತಿದ್ದಾರೆ. ಅವಳು ಹಿಂದೆಂದೂ ಈ ರೀತಿಯ ಯಾವುದರಲ್ಲೂ ಕುಳಿತಿರಲಿಲ್ಲ ಎಂದು ಹೇಳಿದ್ದಾನೆ.

ವೈರಲ್ ವಿಡಿಯೋ ಇಲ್ಲಿದೆ

ಅದೇಗೋ ನಾನು ಅಮ್ಮನನ್ನು ಒಳಗೆ ಕೂರಿಸಿ, ಅಮ್ಮ ಎಷ್ಟು ಭಯಪಡುತ್ತಿದ್ದಾಳೆ ಎಂದು ನೋಡಿದೆ. ಅವಳು ನನ್ನ ಕಾಲು ಹಿಡಿದುಕೊಂಡು ಕುಳಿತಿದ್ದಾಳೆ.. ಆದರೆ ನಾನು ಎಲ್ಲಿಗೂ ಹೋಗಲ್ಲಏನೂ ಆಗುವುದಿಲ್ಲ, ನಾನು ನಿಮ್ಮೊಂದಿಗಿದ್ದೇನೆ ಎಂದು ನಾನು  ತನ್ನ ತಾಯಿಗೆ ಧೈರ್ಯ ತುಂಬಿದೆ. ಹೆಲಿಕಾಪ್ಟರ್ ಆರಂಭವಾಗುತ್ತಿದ್ದಂತೆ, ಅಮ್ಮ ಕ್ರಮೇಣ ಆರಾಮದಾಯಕವಾಗಿದ್ದು, ತುಂಬಾ ಸಂತೋಷವಾಗಿದ್ದಾಳೆ. ಈ ವಿಡಿಯೋದ ಕೊನೆಗೆ ರಾವತ್ ತನ್ನ ತಾಯಿ ಬಳಿ ಅನುಭವ ಹೇಗಿತ್ತು ಎಂದು ಕೇಳಿದಾಗ ತುಂಬಾನೇ ಚೆನ್ನಾಗಿತ್ತು ಎಂದು ವಿವರಿಸಿದ್ದಾನೆ.

ಇದನ್ನೂ ಓದಿ: ತನ್ನ ಓದಿಗಾಗಿ ಚಿನ್ನದ ಬಳೆಗಳನ್ನು ಅಡವಿಟ್ಟ ಅಮ್ಮ; ತಾಯಿಯ ತ್ಯಾಗ ನೆನಪಿಸಿಕೊಂಡ ಮಗಳು

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ತಾಯಿಯ ಸಂತೋಷವೇ ಜೀವನದ ದೊಡ್ಡ ಸಾಧನೆ ಎಂದಿದ್ದಾರೆ. ಇನ್ನೊಬ್ಬರು, ನನ್ನನ್ನು ಭಾವುಕನನ್ನಾಗಿ ಮಾಡಿತು, ದೇವರು ಆಶೀರ್ವಾದ ನಿಮ್ಮ ಮೇಲಿರಲಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಇಂತಹ ಮಗನನ್ನು ಪಡೆದ ನೀವೇ ಪುಣ್ಯವಂತರು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಐಫೋನ್ ವಿಷಯ ಎತ್ತಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆದ ಸೋನು ಶ್ರೀನಿವಾಸ ಗೌಡ
ಐಫೋನ್ ವಿಷಯ ಎತ್ತಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆದ ಸೋನು ಶ್ರೀನಿವಾಸ ಗೌಡ