AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತಡೇಗೆ ಮೊಬೈಲ್​ ಗಿಪ್ಟ್​ ನೀಡಿದ ಮಗ: ಖುಷಿಯಿಂದ ಕಣ್ಣೀರಾದ ತಾಯಿಯ ವಿಡಿಯೋ ವೈರಲ್​

ಮಗ ತನ್ನ ಹುಟ್ಟುಹಬ್ಬಕ್ಕೆ ಉಡುಗೊರೆಯಾಗಿ ನೀಡಿದ ಮೊಬೈಲ್​ ನೋಡಿ ತಾಯಿಯೊಬ್ಬಳು ಸಂತಸಪಟ್ಟ ಕ್ಷಣದ ವಿಡಿಯೋ ವೈರಲ್​ ಆಗಿದೆ. 

ಬರ್ತಡೇಗೆ ಮೊಬೈಲ್​ ಗಿಪ್ಟ್​ ನೀಡಿದ ಮಗ: ಖುಷಿಯಿಂದ ಕಣ್ಣೀರಾದ ತಾಯಿಯ ವಿಡಿಯೋ ವೈರಲ್​
ವಿಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Edited By: |

Updated on: Jan 10, 2022 | 5:49 PM

Share

ಸದಾ ಕಾಲ ಮಕ್ಕಳ ನಗುವಿನಲ್ಲಿಯೇ ತಂದೆ ತಾಯಿಗಳು ಖುಷಿ ಕಾಣುತ್ತಾರೆ. ಅದೇ ರೀತಿ ಮಕ್ಕಳಿಂದ ಸಿಗುವ ಸಣ್ಣ ಖುಷಿಯನ್ನೂ ಬೆಟ್ಟದಷ್ಟು ಅನುಭವಿಸುತ್ತಾರೆ. ಮಕ್ಕಳ ಏಳಿಗೆಗಾಗಿ ಸದಾ ಶ್ರಮಿಸುವ ಜೀವಕ್ಕೆ ಒಂದು ಸಣ್ಣ ಉಡುಗೊರೆಯೂ ಅಷ್ಟೇ ಮುಖ್ಯವೆನಿಸುತ್ತದೆ. ಇಲ್ಲೊಂದು ತಾಯಿ  ಮಗನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ನೆಟ್ಟಿಗರ ಮನ ಸೆಳೆದಿದೆ. ಮಗ ತನ್ನ ಹುಟ್ಟುಹಬ್ಬಕ್ಕೆ ಉಡುಗೊರೆಯಾಗಿ ನೀಡಿದ ಮೊಬೈಲ್​ ನೋಡಿ ತಾಯಿಯೊಬ್ಬಳು ಸಂತಸಪಟ್ಟ ಕ್ಷಣದ ವಿಡಿಯೋ ವೈರಲ್​ ಆಗಿದೆ. 

ವಿಡಿಯೋದಲ್ಲಿ ಮೊದಲು ಮಹಿಳೆಯೊಬ್ಬಳು ತನ್ನ ಮಗನಿಂದ ಉಡುಗೊರೆಯ ಚೀಲವನ್ನು ತೆಗೆದುಕೊಳ್ಳುತ್ತಾಳೆ. ನಂತರ ಅದನ್ನು ತೆಗೆದ ತಕ್ಷಣ ಇನ್ನೊಂದು ಪುಟ್ಟ ಬ್ಯಾಗ್​ ಸಿಗುತ್ತದೆ. ಅದನ್ನು ಓಪನ್​ ಮಾಡಿದಾಗ ಅದರಲ್ಲಿದ್ದ ವೊಬೈಲ್​ ನೋಡಿ ಆಕೆಯ ಸಂತಸ ಮುಗಿಲುಮುಟ್ಟಿತ್ತು. ಈ ವಿಡಿಯೋವನ್ನು ವಿಘ್ನೇಶ್​ ಎನ್ನುವ ವ್ಯಕ್ತಿ  ಹಂಚಿಕೊಂಡಿದ್ದಾರೆ. ವಿಡಿಯೋಕ್ಕೆ, 8800 ರೂ. ಗಳ ಮೊಬೈಲ್​ ನೋಡಿ ಅಮ್ಮನ ಪ್ರತಿಕ್ರಿಯೆ ಮಾತ್ರ ಬೆಲೆಕಟ್ಟಲು ಸಾಧ್ಯವಾಗದ ರೀತಿಯಿದೆ ಎಂದು ತಮಿಳಿನಲ್ಲಿ ಕ್ಯಾಪ್ಷನ್​ ನೀಡಲಾಗಿದೆ.

ವಿಡಿಯೋ ಹಂಚಿಕೊಂಡ ಬಳಿಕ ಈ ವರೆಗೆ 7 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದ್ದು, ಸಾವಿರಾರು ಮಂದಿ ಸಂತಸ ವ್ಯಕ್ತಪಡಿಸಿ ಕಾಮೆಂಟ್​ ಮಾಡಿದ್ದಾರೆ. ಇನ್ನು ನಟ ಆರ್​ ಮಾಧವನ್​ ಕೂಡ ವಿಡಿಯೋ ಹಂಚಿಕೊಂಡು ಖುಷಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಖತ್​ ವೈರಲ್​ ಆಗಿದ್ದು, ಅಮ್ಮನಿಗೆ ಸರ್ಪೈಸ್​ ಗಿಫ್ಟ್​ ನೀಡಿದ ಮಗನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರ: ವಿಡಿಯೋ ವೈರಲ್​

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ