AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳಿಯನ ಬಾಯಿಗೆ ಸಿಗರೇಟ್ ಇಟ್ಟು ಸ್ವಾಗತ ಕೋರಿದ ಅತ್ತೆ-ಮಾವ! ವೈರಲ್ ವಿಡಿಯೋ ಇಲ್ಲಿದೆ

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ನೆಟಿಜನ್‌ಗಳು ವಿಭಿನ್ನ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಕೆಲವರು ಅದನ್ನು ಸಂಪೂರ್ಣವಾಗಿ ಅರ್ಥಹೀನವೆಂದು ಹೇಳುತ್ತಿದ್ದಾರೆ.

ಅಳಿಯನ ಬಾಯಿಗೆ ಸಿಗರೇಟ್ ಇಟ್ಟು ಸ್ವಾಗತ ಕೋರಿದ ಅತ್ತೆ-ಮಾವ! ವೈರಲ್ ವಿಡಿಯೋ ಇಲ್ಲಿದೆ
ಅಳಿಯನ ಬಾಯಿಗೆ ಸಿಗರೇಟ್ ಇಟ್ಟು ಸ್ವಾಗತ ಕೋರಿದ ಅತ್ತೆ-ಮಾವ!
TV9 Web
| Edited By: ಸಾಧು ಶ್ರೀನಾಥ್​|

Updated on:Feb 17, 2023 | 3:14 PM

Share

ಭಾರತವು ಪ್ರಾಚೀನ ಕಾಲದಿಂದಲೂ ಸಂಸ್ಕೃತಿ ಮತ್ತು ಸಂಪ್ರದಾಯಗಳ ದೇಶವಾಗಿದೆ. ಭಾರತದ ವಿವಿಧ ಪ್ರದೇಶಗಳು ವಿಭಿನ್ನ ಸಂದರ್ಭಗಳಲ್ಲಿ ವಿಭಿನ್ನ ಸಂಪ್ರದಾಯಗಳನ್ನು ಹೊಂದಿವೆ. ವಿವಿಧ ಸಮುದಾಯಗಳು ವಿಶೇಷವಾಗಿ ವಿವಾಹಗಳಿಗೆ (Wedding) ಸಂಬಂಧಿಸಿದ ವಿವಿಧ ಪದ್ಧತಿಗಳನ್ನು ಅನುಸರಿಸುತ್ತವೆ. ಇಲ್ಲಿಯೂ ಅಂತಹ ಒಂದು ವಿಚಿತ್ರ ಸಂಪ್ರದಾಯವನ್ನು ಅನುಸರಿಸಲಾಗಿದೆ. ಅತ್ತೆ-ಮಾವ ತಮ್ಮ ವರನಿಗೆ ಬಾಯಲ್ಲಿ ಸಿಗರೇಟ್ (Cigarette) ಇಟ್ಟು, ಅದನ್ನು ಹಚ್ಚಿ ಸ್ವಾಗತಿಸುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಕೆಲವೆಡೆ ಇದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿರುವ ಪದ್ಧತಿ ಎಂದು ಹಲವರು ಸೂಚಿಸಿದರೆ, ಇನ್ನು ಕೆಲವರು ಇಂತಹ ನೀತಿಗಳನ್ನು ಕೂಡಲೇ ನಿಲ್ಲಿಸಬೇಕು ಎಂದಿದ್ದಾರೆ. ಇಷ್ಟೆಲ್ಲಾ ಮಾಡಲು ಅತ್ತೆ ಹೇಗೆ ತಯಾರಾಗಿದ್ದರು ಎಂದು ವಿಡಿಯೋ (Viral Video) ನೋಡುತ್ತಿರುವ ಜನರು ಆಶ್ಚರ್ಯ ಪಡುತ್ತಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ವರನು ಸೋಫಾದಲ್ಲಿ ಕುಳಿತಿದ್ದಾನೆ. ಆಗ ಅತ್ತೆ ಸಿಗರೇಟನ್ನು ಹೊಸ ಅಳಿಯನ ಬಾಯಿಗೆ ನೀಡುತ್ತಾಳೆ. ಆಗ ಮಾವ ವಿನಯ, ಸಂಕೋಚದಿಂದಲೇ ಸಿಗರೇಟು ಹಚ್ಚುತ್ತಾರೆ. ಅದಕ್ಕೆ ಅಳಿಯ ಒಂದು ದಮ್​ ಎಳೆದು, ತಕ್ಷಣ ಅದನ್ನು ತನ್ನ ಮಾವನಿಗೆ ಹಿಂತಿರುಗಿಸುತ್ತಾನೆ. ನಂತರ ಸಂಪ್ರದಾಯದ ಪ್ರಕಾರ ವರ ಇಬ್ಬರಿಗೂ ಸ್ವಲ್ಪ ಹಣ ಕೊಡುತ್ತಾನೆ. ಇದೀಗ ಈ ವಿಡಿಯೋ ವೈರಲ್ ಆಗಿದೆ. ವಿಭಿನ್ನ ಜನರು ಈ ಸಂಪ್ರದಾಯದ ಬಗ್ಗೆ ವಿಭಿನ್ನ ರೀತಿಯಲ್ಲಿ ಮಾತನಾಡುತ್ತಾರೆ. ಘಟನೆಯ ಸ್ಥಳ ತಿಳಿದಿಲ್ಲವಾದರೂ, ಈ ಆಚರಣೆಯು ಗುಜರಾತ್‌ನಲ್ಲಿ ನಡೆದಿರಬಹುದು ಎಂದು ಹಲವರು ಊಹಿಸಿದ್ದಾರೆ.

View this post on Instagram

A post shared by Joohi K Patel (@joohiie)

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ನೆಟಿಜನ್‌ಗಳು ವಿಭಿನ್ನ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಇದು ಸಂಪೂರ್ಣ ಅಸಂಬದ್ಧ ಎಂದು ಕೆಲವರು ಹೇಳುತ್ತಾರೆ. ಧೂಮಪಾನದಿಂದ ಕ್ಯಾನ್ಸರ್ ಬರುತ್ತದೆ, ಅಷ್ಟು ಮಾತ್ರ ಗೊತ್ತಾಗಲ್ಲವಾ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯಲು ಕೆಲವರು ಈ ರೀತಿ ಮಾಡುತ್ತಾರೆ ಎಂದೂ ಕೆಲವರು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:56 pm, Fri, 17 February 23

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು