Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ತಂದೆ 25 ವರ್ಷಗಳಿಂದ ವಾಚ್‌ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಹೋಟೆಲ್‌ಗೆ ಊಟಕ್ಕೆ ಕರೆದುಕೊಂಡು ಹೋದ ಮಗ

ಪ್ರತಿಯೊಬ್ಬ ತಂದೆತಾಯಿಗೂ ತಮ್ಮ ಮಕ್ಕಳು ಚೆನ್ನಾಗಿ ಓದಿ ಒಂದೊಳ್ಳೆ ಉದ್ಯೋಗ ಗಿಟ್ಟಿಸಿಕೊಂಡು ವಯಸ್ಸಾದ ಕಾಲದಲ್ಲಿ ತಮ್ಮನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎನ್ನುವುದಿರುತ್ತದೆ. ಇದೀಗ ವೈರಲ್ ಆಗಿರುವ ಪೋಸ್ಟ್ ನಲ್ಲಿ ದೆಹಲಿಯ ವ್ಯಕ್ತಿಯೊಬ್ಬರು, ತನ್ನ ತಂದೆ ವಾಚ್‌ಮನ್‌ ಆಗಿ ಕೆಲಸ ಮಾಡಿದ್ದ ಪಂಚತಾರಾ ಹೋಟೆಲ್‌ಗೆ ಊಟಕ್ಕೆ ಕರೆದೊಯ್ದಿದ್ದು ತಂದೆಯ ಮೊಗದಲ್ಲಿ ನಗು ತರಿಸಿದ್ದಾರೆ. ಈ ಪೋಸ್ಟ್ ಹಂಚಿಕೊಳ್ಳುತ್ತಿದ್ದಂತೆ ಸೋಶಿಯಲ್ ಮೀಡಿಯಾ ಬಳಕೆದಾರರು ಮೆಚ್ಚುಗೆಯ ಪ್ರತಿಕ್ರಿಯೆ ನೀಡಿದ್ದಾರೆ.

Viral: ತಂದೆ 25 ವರ್ಷಗಳಿಂದ ವಾಚ್‌ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಹೋಟೆಲ್‌ಗೆ ಊಟಕ್ಕೆ ಕರೆದುಕೊಂಡು ಹೋದ ಮಗ
ವೈರಲ್​​ ಫೋಟೋ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 25, 2025 | 3:33 PM

ಯಾರೇ ಇರಲಿ, ತನ್ನ ತಂದೆ ತಾಯಿ ಋಣವನ್ನು ತೀರಿಸಲು ಸಾಧ್ಯವೇ ಇಲ್ಲ. ವಯಸ್ಸಾದ ಕಾಲದಲ್ಲಿ ತಂದೆ ತಾಯಿಯನ್ನು ಎಷ್ಟು ಚೆನ್ನಾಗಿ ನೋಡಿಕೊಂಡರೂ ಕಡಿಮೆಯೇ. ಇದೀಗ ದೆಹಲಿ ಮೂಲದ ವ್ಯಕ್ತಿಯೊಬ್ಬರೂ ಮಾಡಿದ ಪೋಸ್ಟ್ ವೊಂದು ವೈರಲ್ ಆಗುತ್ತಿದ್ದು, ಈ ವ್ಯಕ್ತಿಯ ತಂದೆಯು 1995 ರಿಂದ 2000 ರವರೆಗೆ ಐಷಾರಾಮಿ ಹೋಟೆಲ್‌ನಲ್ಲಿ ವಾಚ್ ಮ್ಯಾನ್ ಆಗಿ ಕೆಲಸ ಮಾಡಿದ್ದರು. ಆದರೆ ಇದೀಗ ತಂದೆ ವಾಚ್‌ಮನ್‌ ಆಗಿ ಕೆಲಸ ಮಾಡಿದ್ದ ಪಂಚತಾರಾ ಹೋಟೆಲ್‌ಗೆ ಊಟಕ್ಕೆ ಕರೆದೊಯ್ದಿದ್ದು ಹೃದಯಸ್ಪರ್ಶಿ ಕಥೆಯನ್ನು ಹಂಚಿಕೊಂಡಿದ್ದಾರೆ.

ದೆಹಲಿಯ ಆರ್ಯನ್ ಮಿಶ್ರಾ ಎಂಬುವವರು ತಮ್ಮ ಹೆತ್ತವರೊಂದಿಗೆ ಊಟಕ್ಕೆ ಹೋಗಿದ್ದ ಫೋಟೋವನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ನನ್ನ ತಂದೆ 1995-2000 ರವರೆಗೆ ನವದೆಹಲಿಯ ಐಟಿಸಿಯಲ್ಲಿ ವಾಚ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಅವರನ್ನು ಅದೇ ಸ್ಥಳಕ್ಕೆ ಊಟಕ್ಕೆ ಕರೆದೊಯ್ಯುವ ಅವಕಾಶ ಸಿಕ್ಕಿದೆ ಎಂದು ಬರೆದುಕೊಂಡಿದ್ದಾರೆ. ಸುಮಾರು 25 ವರ್ಷಗಳ ನಂತರ ಆರ್ಯನ್ ಮಿಶ್ರಾ ತನ್ನ ಪೋಷಕರನ್ನು ಆ ಪಂಚತಾರಾ ಹೋಟೆಲ್‌ಗೆ ಊಟಕ್ಕೆ ಕರೆದೊಯ್ದಿದ್ದು, ಈ ಪೋಸ್ಟ್ ನೆಟ್ಟಿಗರ ಮನಸ್ಸು ಗೆದ್ದಿದೆ.

ಇದನ್ನೂ ಓದಿ:  ಇದು ವಿದ್ಯಾದೇಗುಲವೋ ಅಥವಾ ವ್ಯಾಪಾರ ಕೇಂದ್ರವೋ, ಬೆಂಗಳೂರಿನಲ್ಲಿ 3ನೇ ತರಗತಿಗೆ 2.1 ಲಕ್ಷ ಶುಲ್ಕವಂತೆ

ವೈರಲ್​​ ಪೋಸ್ಟ್​​  ಇಲ್ಲಿದೆ ನೋಡಿ:

ಈ ಪೋಸ್ಟ್ ಅರವತ್ತು ಸಾವಿರಕ್ಕೂ ಅಧಿಕ ವೀಕ್ಷಣೆ ಕಂಡಿದ್ದು, ಬಳಕೆದಾರರೊಬ್ಬರು, ‘ನೀವು ಯಾರೆಂದು ನನಗೆ ತಿಳಿದಿಲ್ಲ, ಆದರೆ ಈ ಸುಂದರವಾದ ಕಥೆಗಳನ್ನು ಓದುವಾಗ, ನೋಡಿದಾಗ ಮನಸ್ಸಿಗೆ ಸಂತೋಷವಾಗುತ್ತದೆ ಎಂದಿದ್ದಾರೆ. ಮತ್ತೊಬ್ಬರು, ‘ಇಂತಹ ಮಕ್ಕಳನ್ನು ಪಡೆದ ನೀವೇ ಪುಣ್ಯವಂತರು’ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ‘ ಈ ಹೃದಯಸ್ಪರ್ಶಿ ಪೋಸ್ಟ್ ಮನಸ್ಸಿಗೆ ಹತ್ತಿರವಾಗಿದೆ. ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಿ’ ಎಂದಿದ್ದಾರೆ.

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ