ಶೀಘ್ರದಲ್ಲೇ ಕೋವಿಡ್​​-19 ಕಾಲರ್ ಟ್ಯೂನ್ ತೆರವು; ಕೊನೆಗೂ ಮುಕ್ತಿ ಸಿಕ್ತು ಎಂದ ನೆಟ್ಟಿಗರು

ಸರ್ಕಾರದ ಈ ನಿರ್ಧಾರದಿಂದ ಯಾರಿಗೆ ಖುಷಿ ಯಾಗಿದೆಯೋ ಇಲ್ಲವೋ, ಆದರೆ, ನೆಟ್ಟಿಗರಿಗಂತ್ತು ಸಖಕ್ ಖುಷಿಯಾದಂತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಫೋಸ್ಟ್​ಗಳು ಹರಿದಾಡುತ್ತಿವೆ.

ಶೀಘ್ರದಲ್ಲೇ ಕೋವಿಡ್​​-19 ಕಾಲರ್ ಟ್ಯೂನ್ ತೆರವು; ಕೊನೆಗೂ ಮುಕ್ತಿ ಸಿಕ್ತು ಎಂದ ನೆಟ್ಟಿಗರು
ಕಾಲರ್ ಟ್ಯೂನ್ ಫೋಸ್ಟ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Mar 29, 2022 | 9:23 AM

ಮಹಾಮಾರಿ ಕೋವಿಡ್ (Covid-19)​ ರೋಗದಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿತ್ತು. ಎಂದೂ ಕೇಳದ ಮತ್ತು ಕಾಣದ ಸಾಕಷ್ಟು ಸಾವು ನೋವುಗಳು ಸಂಭವಿಸಿವೆ. ಸದ್ಯ ಇಡೀ ಜಗತ್ತು ಮಹಾಮಾರಿಯಿಂದ ಸುಧಾರಿಸಿಕೊಂಡಿದೆ. ಕೋವಿಡ್ -19 ಪ್ರಕರಣಗಳಲ್ಲಿ ಸ್ಥಿರವಾದ ಇಳಿಕೆ ಕಂಡಿದ್ದು, ಇದರ ಮಧ್ಯೆ, ಕೊರೊನಾ ವೈರಸ್ ಜಾಗೃತಿ ಮತ್ತು ಮುನ್ನೆಚ್ಚರಿಕೆಗಳ ಕುರಿತು ಕಾಲರ್ ಟ್ಯೂನ್​ನ್ನು ನಿಲ್ಲಿಸಲು ಆರೋಗ್ಯ ಸಚಿವಾಲಯ ನಿರ್ಧರಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್​ಐ ತಿಳಿಸಿದೆ. ಕೋವಿಡ್-19 ಕಾಲರ್ ಟ್ಯೂನ್​ನ್ನು ಎರಡು ವರ್ಷಗಳ ಹಿಂದೆ ಸಾಂಕ್ರಾಮಿಕ ರೋಗವು ದೇಶವನ್ನು ಆವರಿಸಿದಾಗ ಪ್ರಾರಂಭಿಸಲಾಯಿತು. ಭಾರ್ತಿ ಏರ್‌ಟೆಲ್, ಬಿಎಸ್‌ಎನ್‌ಎಲ್, ರಿಲಯನ್ಸ್ ಜಿಯೋ ಮತ್ತು ವೊಡಾಫೋನ್-ಐಡಿಯಾ ಸೇರಿದಂತೆ ಆಪರೇಟರ್‌ಗಳು ತಮ್ಮ ಕಾಲರ್ ಟ್ಯೂನ್‌ಗಳನ್ನು ಮಾರ್ಚ್ 2020 ರಲ್ಲಿ ಸರ್ಕಾರದ ನಿರ್ದೇಶನದ ಮೇರೆಗೆ ಬದಲಾಯಿಸಿದ್ದಾರೆ.

ಆರಂಭದಲ್ಲಿ, COVID-19 ನಲ್ಲಿನ ಕಾಲರ್ ಟ್ಯೂನ್ ಜನರು ಕೆಮ್ಮುವುದು, ಸೀನುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ನಂತರ ಕೊರೊನಾವೈರಸ್‌ನಿಂದ ರಕ್ಷಿಸಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ಸಲಹೆಯೊಂದಿಗೆ ಪ್ರಾರಂಭವಾಗುತ್ತಿತ್ತು. ಆದರೆ ಈ ವರ್ಷದ ಜನವರಿಯಲ್ಲಿ, ಜನರು ಲಸಿಕೆ ಹಾಕುವಂತೆ ಒತ್ತಾಯಿಸುವ ಸಂದೇಶವನ್ನಾಗಿ ಬದಲಾಯಿಸಲಾಯಿತು. ಸರ್ಕಾರದ ಈ ನಿರ್ಧಾರದಿಂದ ಯಾರಿಗೆ ಖುಷಿ ಯಾಗಿದೆಯೋ ಇಲ್ಲವೋ, ಆದರೆ, ನೆಟ್ಟಿಗರಿಗಂತ್ತು ಸಖಕ್ ಖುಷಿಯಾದಂತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಫೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದು, ಕೊನೆಗೂ ಕಿವಿಗಳಿಗೆ ಮುಕ್ತಿ ನೀಡಲಾಯಿತು ಎನ್ನುವ ತಮಾಷೆ ಫೋಸ್ಟ್​ಗಳು ಹರಿದಾಡುತ್ತಿವೆ.

ಸೋಮವಾರ ಭಾರತದಲ್ಲಿ 1,270 ಹೊಸ COVID-19 ಪ್ರಕರಣಗಳನ್ನು ವರದಿ ಆಗಿವೆ. ಇದು ಏಪ್ರಿಲ್ 2020 ರಿಂದ ಕಡಿಮೆಯಾಗಿದೆ. ಕರೋನ ವೈರಸ್ ಪ್ರಕರಣಗಳು ಪ್ರತಿ ತಿಂಗಳು ಕಡಿಮೆಯಾಗುತ್ತಿವೆ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್