AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ಕೋವಿಡ್​​-19 ಕಾಲರ್ ಟ್ಯೂನ್ ತೆರವು; ಕೊನೆಗೂ ಮುಕ್ತಿ ಸಿಕ್ತು ಎಂದ ನೆಟ್ಟಿಗರು

ಸರ್ಕಾರದ ಈ ನಿರ್ಧಾರದಿಂದ ಯಾರಿಗೆ ಖುಷಿ ಯಾಗಿದೆಯೋ ಇಲ್ಲವೋ, ಆದರೆ, ನೆಟ್ಟಿಗರಿಗಂತ್ತು ಸಖಕ್ ಖುಷಿಯಾದಂತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಫೋಸ್ಟ್​ಗಳು ಹರಿದಾಡುತ್ತಿವೆ.

ಶೀಘ್ರದಲ್ಲೇ ಕೋವಿಡ್​​-19 ಕಾಲರ್ ಟ್ಯೂನ್ ತೆರವು; ಕೊನೆಗೂ ಮುಕ್ತಿ ಸಿಕ್ತು ಎಂದ ನೆಟ್ಟಿಗರು
ಕಾಲರ್ ಟ್ಯೂನ್ ಫೋಸ್ಟ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Mar 29, 2022 | 9:23 AM

Share

ಮಹಾಮಾರಿ ಕೋವಿಡ್ (Covid-19)​ ರೋಗದಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿತ್ತು. ಎಂದೂ ಕೇಳದ ಮತ್ತು ಕಾಣದ ಸಾಕಷ್ಟು ಸಾವು ನೋವುಗಳು ಸಂಭವಿಸಿವೆ. ಸದ್ಯ ಇಡೀ ಜಗತ್ತು ಮಹಾಮಾರಿಯಿಂದ ಸುಧಾರಿಸಿಕೊಂಡಿದೆ. ಕೋವಿಡ್ -19 ಪ್ರಕರಣಗಳಲ್ಲಿ ಸ್ಥಿರವಾದ ಇಳಿಕೆ ಕಂಡಿದ್ದು, ಇದರ ಮಧ್ಯೆ, ಕೊರೊನಾ ವೈರಸ್ ಜಾಗೃತಿ ಮತ್ತು ಮುನ್ನೆಚ್ಚರಿಕೆಗಳ ಕುರಿತು ಕಾಲರ್ ಟ್ಯೂನ್​ನ್ನು ನಿಲ್ಲಿಸಲು ಆರೋಗ್ಯ ಸಚಿವಾಲಯ ನಿರ್ಧರಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್​ಐ ತಿಳಿಸಿದೆ. ಕೋವಿಡ್-19 ಕಾಲರ್ ಟ್ಯೂನ್​ನ್ನು ಎರಡು ವರ್ಷಗಳ ಹಿಂದೆ ಸಾಂಕ್ರಾಮಿಕ ರೋಗವು ದೇಶವನ್ನು ಆವರಿಸಿದಾಗ ಪ್ರಾರಂಭಿಸಲಾಯಿತು. ಭಾರ್ತಿ ಏರ್‌ಟೆಲ್, ಬಿಎಸ್‌ಎನ್‌ಎಲ್, ರಿಲಯನ್ಸ್ ಜಿಯೋ ಮತ್ತು ವೊಡಾಫೋನ್-ಐಡಿಯಾ ಸೇರಿದಂತೆ ಆಪರೇಟರ್‌ಗಳು ತಮ್ಮ ಕಾಲರ್ ಟ್ಯೂನ್‌ಗಳನ್ನು ಮಾರ್ಚ್ 2020 ರಲ್ಲಿ ಸರ್ಕಾರದ ನಿರ್ದೇಶನದ ಮೇರೆಗೆ ಬದಲಾಯಿಸಿದ್ದಾರೆ.

ಆರಂಭದಲ್ಲಿ, COVID-19 ನಲ್ಲಿನ ಕಾಲರ್ ಟ್ಯೂನ್ ಜನರು ಕೆಮ್ಮುವುದು, ಸೀನುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ನಂತರ ಕೊರೊನಾವೈರಸ್‌ನಿಂದ ರಕ್ಷಿಸಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ಸಲಹೆಯೊಂದಿಗೆ ಪ್ರಾರಂಭವಾಗುತ್ತಿತ್ತು. ಆದರೆ ಈ ವರ್ಷದ ಜನವರಿಯಲ್ಲಿ, ಜನರು ಲಸಿಕೆ ಹಾಕುವಂತೆ ಒತ್ತಾಯಿಸುವ ಸಂದೇಶವನ್ನಾಗಿ ಬದಲಾಯಿಸಲಾಯಿತು. ಸರ್ಕಾರದ ಈ ನಿರ್ಧಾರದಿಂದ ಯಾರಿಗೆ ಖುಷಿ ಯಾಗಿದೆಯೋ ಇಲ್ಲವೋ, ಆದರೆ, ನೆಟ್ಟಿಗರಿಗಂತ್ತು ಸಖಕ್ ಖುಷಿಯಾದಂತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಫೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದು, ಕೊನೆಗೂ ಕಿವಿಗಳಿಗೆ ಮುಕ್ತಿ ನೀಡಲಾಯಿತು ಎನ್ನುವ ತಮಾಷೆ ಫೋಸ್ಟ್​ಗಳು ಹರಿದಾಡುತ್ತಿವೆ.

ಸೋಮವಾರ ಭಾರತದಲ್ಲಿ 1,270 ಹೊಸ COVID-19 ಪ್ರಕರಣಗಳನ್ನು ವರದಿ ಆಗಿವೆ. ಇದು ಏಪ್ರಿಲ್ 2020 ರಿಂದ ಕಡಿಮೆಯಾಗಿದೆ. ಕರೋನ ವೈರಸ್ ಪ್ರಕರಣಗಳು ಪ್ರತಿ ತಿಂಗಳು ಕಡಿಮೆಯಾಗುತ್ತಿವೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?