AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ಕೋವಿಡ್​​-19 ಕಾಲರ್ ಟ್ಯೂನ್ ತೆರವು; ಕೊನೆಗೂ ಮುಕ್ತಿ ಸಿಕ್ತು ಎಂದ ನೆಟ್ಟಿಗರು

ಸರ್ಕಾರದ ಈ ನಿರ್ಧಾರದಿಂದ ಯಾರಿಗೆ ಖುಷಿ ಯಾಗಿದೆಯೋ ಇಲ್ಲವೋ, ಆದರೆ, ನೆಟ್ಟಿಗರಿಗಂತ್ತು ಸಖಕ್ ಖುಷಿಯಾದಂತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಫೋಸ್ಟ್​ಗಳು ಹರಿದಾಡುತ್ತಿವೆ.

ಶೀಘ್ರದಲ್ಲೇ ಕೋವಿಡ್​​-19 ಕಾಲರ್ ಟ್ಯೂನ್ ತೆರವು; ಕೊನೆಗೂ ಮುಕ್ತಿ ಸಿಕ್ತು ಎಂದ ನೆಟ್ಟಿಗರು
ಕಾಲರ್ ಟ್ಯೂನ್ ಫೋಸ್ಟ್
TV9 Web
| Edited By: |

Updated on: Mar 29, 2022 | 9:23 AM

Share

ಮಹಾಮಾರಿ ಕೋವಿಡ್ (Covid-19)​ ರೋಗದಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿತ್ತು. ಎಂದೂ ಕೇಳದ ಮತ್ತು ಕಾಣದ ಸಾಕಷ್ಟು ಸಾವು ನೋವುಗಳು ಸಂಭವಿಸಿವೆ. ಸದ್ಯ ಇಡೀ ಜಗತ್ತು ಮಹಾಮಾರಿಯಿಂದ ಸುಧಾರಿಸಿಕೊಂಡಿದೆ. ಕೋವಿಡ್ -19 ಪ್ರಕರಣಗಳಲ್ಲಿ ಸ್ಥಿರವಾದ ಇಳಿಕೆ ಕಂಡಿದ್ದು, ಇದರ ಮಧ್ಯೆ, ಕೊರೊನಾ ವೈರಸ್ ಜಾಗೃತಿ ಮತ್ತು ಮುನ್ನೆಚ್ಚರಿಕೆಗಳ ಕುರಿತು ಕಾಲರ್ ಟ್ಯೂನ್​ನ್ನು ನಿಲ್ಲಿಸಲು ಆರೋಗ್ಯ ಸಚಿವಾಲಯ ನಿರ್ಧರಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್​ಐ ತಿಳಿಸಿದೆ. ಕೋವಿಡ್-19 ಕಾಲರ್ ಟ್ಯೂನ್​ನ್ನು ಎರಡು ವರ್ಷಗಳ ಹಿಂದೆ ಸಾಂಕ್ರಾಮಿಕ ರೋಗವು ದೇಶವನ್ನು ಆವರಿಸಿದಾಗ ಪ್ರಾರಂಭಿಸಲಾಯಿತು. ಭಾರ್ತಿ ಏರ್‌ಟೆಲ್, ಬಿಎಸ್‌ಎನ್‌ಎಲ್, ರಿಲಯನ್ಸ್ ಜಿಯೋ ಮತ್ತು ವೊಡಾಫೋನ್-ಐಡಿಯಾ ಸೇರಿದಂತೆ ಆಪರೇಟರ್‌ಗಳು ತಮ್ಮ ಕಾಲರ್ ಟ್ಯೂನ್‌ಗಳನ್ನು ಮಾರ್ಚ್ 2020 ರಲ್ಲಿ ಸರ್ಕಾರದ ನಿರ್ದೇಶನದ ಮೇರೆಗೆ ಬದಲಾಯಿಸಿದ್ದಾರೆ.

ಆರಂಭದಲ್ಲಿ, COVID-19 ನಲ್ಲಿನ ಕಾಲರ್ ಟ್ಯೂನ್ ಜನರು ಕೆಮ್ಮುವುದು, ಸೀನುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ನಂತರ ಕೊರೊನಾವೈರಸ್‌ನಿಂದ ರಕ್ಷಿಸಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ಸಲಹೆಯೊಂದಿಗೆ ಪ್ರಾರಂಭವಾಗುತ್ತಿತ್ತು. ಆದರೆ ಈ ವರ್ಷದ ಜನವರಿಯಲ್ಲಿ, ಜನರು ಲಸಿಕೆ ಹಾಕುವಂತೆ ಒತ್ತಾಯಿಸುವ ಸಂದೇಶವನ್ನಾಗಿ ಬದಲಾಯಿಸಲಾಯಿತು. ಸರ್ಕಾರದ ಈ ನಿರ್ಧಾರದಿಂದ ಯಾರಿಗೆ ಖುಷಿ ಯಾಗಿದೆಯೋ ಇಲ್ಲವೋ, ಆದರೆ, ನೆಟ್ಟಿಗರಿಗಂತ್ತು ಸಖಕ್ ಖುಷಿಯಾದಂತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಫೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದು, ಕೊನೆಗೂ ಕಿವಿಗಳಿಗೆ ಮುಕ್ತಿ ನೀಡಲಾಯಿತು ಎನ್ನುವ ತಮಾಷೆ ಫೋಸ್ಟ್​ಗಳು ಹರಿದಾಡುತ್ತಿವೆ.

ಸೋಮವಾರ ಭಾರತದಲ್ಲಿ 1,270 ಹೊಸ COVID-19 ಪ್ರಕರಣಗಳನ್ನು ವರದಿ ಆಗಿವೆ. ಇದು ಏಪ್ರಿಲ್ 2020 ರಿಂದ ಕಡಿಮೆಯಾಗಿದೆ. ಕರೋನ ವೈರಸ್ ಪ್ರಕರಣಗಳು ಪ್ರತಿ ತಿಂಗಳು ಕಡಿಮೆಯಾಗುತ್ತಿವೆ.

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್