AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ಕೋವಿಡ್​​-19 ಕಾಲರ್ ಟ್ಯೂನ್ ತೆರವು; ಕೊನೆಗೂ ಮುಕ್ತಿ ಸಿಕ್ತು ಎಂದ ನೆಟ್ಟಿಗರು

ಸರ್ಕಾರದ ಈ ನಿರ್ಧಾರದಿಂದ ಯಾರಿಗೆ ಖುಷಿ ಯಾಗಿದೆಯೋ ಇಲ್ಲವೋ, ಆದರೆ, ನೆಟ್ಟಿಗರಿಗಂತ್ತು ಸಖಕ್ ಖುಷಿಯಾದಂತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಫೋಸ್ಟ್​ಗಳು ಹರಿದಾಡುತ್ತಿವೆ.

ಶೀಘ್ರದಲ್ಲೇ ಕೋವಿಡ್​​-19 ಕಾಲರ್ ಟ್ಯೂನ್ ತೆರವು; ಕೊನೆಗೂ ಮುಕ್ತಿ ಸಿಕ್ತು ಎಂದ ನೆಟ್ಟಿಗರು
ಕಾಲರ್ ಟ್ಯೂನ್ ಫೋಸ್ಟ್
TV9 Web
| Edited By: |

Updated on: Mar 29, 2022 | 9:23 AM

Share

ಮಹಾಮಾರಿ ಕೋವಿಡ್ (Covid-19)​ ರೋಗದಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿತ್ತು. ಎಂದೂ ಕೇಳದ ಮತ್ತು ಕಾಣದ ಸಾಕಷ್ಟು ಸಾವು ನೋವುಗಳು ಸಂಭವಿಸಿವೆ. ಸದ್ಯ ಇಡೀ ಜಗತ್ತು ಮಹಾಮಾರಿಯಿಂದ ಸುಧಾರಿಸಿಕೊಂಡಿದೆ. ಕೋವಿಡ್ -19 ಪ್ರಕರಣಗಳಲ್ಲಿ ಸ್ಥಿರವಾದ ಇಳಿಕೆ ಕಂಡಿದ್ದು, ಇದರ ಮಧ್ಯೆ, ಕೊರೊನಾ ವೈರಸ್ ಜಾಗೃತಿ ಮತ್ತು ಮುನ್ನೆಚ್ಚರಿಕೆಗಳ ಕುರಿತು ಕಾಲರ್ ಟ್ಯೂನ್​ನ್ನು ನಿಲ್ಲಿಸಲು ಆರೋಗ್ಯ ಸಚಿವಾಲಯ ನಿರ್ಧರಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್​ಐ ತಿಳಿಸಿದೆ. ಕೋವಿಡ್-19 ಕಾಲರ್ ಟ್ಯೂನ್​ನ್ನು ಎರಡು ವರ್ಷಗಳ ಹಿಂದೆ ಸಾಂಕ್ರಾಮಿಕ ರೋಗವು ದೇಶವನ್ನು ಆವರಿಸಿದಾಗ ಪ್ರಾರಂಭಿಸಲಾಯಿತು. ಭಾರ್ತಿ ಏರ್‌ಟೆಲ್, ಬಿಎಸ್‌ಎನ್‌ಎಲ್, ರಿಲಯನ್ಸ್ ಜಿಯೋ ಮತ್ತು ವೊಡಾಫೋನ್-ಐಡಿಯಾ ಸೇರಿದಂತೆ ಆಪರೇಟರ್‌ಗಳು ತಮ್ಮ ಕಾಲರ್ ಟ್ಯೂನ್‌ಗಳನ್ನು ಮಾರ್ಚ್ 2020 ರಲ್ಲಿ ಸರ್ಕಾರದ ನಿರ್ದೇಶನದ ಮೇರೆಗೆ ಬದಲಾಯಿಸಿದ್ದಾರೆ.

ಆರಂಭದಲ್ಲಿ, COVID-19 ನಲ್ಲಿನ ಕಾಲರ್ ಟ್ಯೂನ್ ಜನರು ಕೆಮ್ಮುವುದು, ಸೀನುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ನಂತರ ಕೊರೊನಾವೈರಸ್‌ನಿಂದ ರಕ್ಷಿಸಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ಸಲಹೆಯೊಂದಿಗೆ ಪ್ರಾರಂಭವಾಗುತ್ತಿತ್ತು. ಆದರೆ ಈ ವರ್ಷದ ಜನವರಿಯಲ್ಲಿ, ಜನರು ಲಸಿಕೆ ಹಾಕುವಂತೆ ಒತ್ತಾಯಿಸುವ ಸಂದೇಶವನ್ನಾಗಿ ಬದಲಾಯಿಸಲಾಯಿತು. ಸರ್ಕಾರದ ಈ ನಿರ್ಧಾರದಿಂದ ಯಾರಿಗೆ ಖುಷಿ ಯಾಗಿದೆಯೋ ಇಲ್ಲವೋ, ಆದರೆ, ನೆಟ್ಟಿಗರಿಗಂತ್ತು ಸಖಕ್ ಖುಷಿಯಾದಂತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಫೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದು, ಕೊನೆಗೂ ಕಿವಿಗಳಿಗೆ ಮುಕ್ತಿ ನೀಡಲಾಯಿತು ಎನ್ನುವ ತಮಾಷೆ ಫೋಸ್ಟ್​ಗಳು ಹರಿದಾಡುತ್ತಿವೆ.

ಸೋಮವಾರ ಭಾರತದಲ್ಲಿ 1,270 ಹೊಸ COVID-19 ಪ್ರಕರಣಗಳನ್ನು ವರದಿ ಆಗಿವೆ. ಇದು ಏಪ್ರಿಲ್ 2020 ರಿಂದ ಕಡಿಮೆಯಾಗಿದೆ. ಕರೋನ ವೈರಸ್ ಪ್ರಕರಣಗಳು ಪ್ರತಿ ತಿಂಗಳು ಕಡಿಮೆಯಾಗುತ್ತಿವೆ.

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು