AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ಕೋವಿಡ್​​-19 ಕಾಲರ್ ಟ್ಯೂನ್ ತೆರವು; ಕೊನೆಗೂ ಮುಕ್ತಿ ಸಿಕ್ತು ಎಂದ ನೆಟ್ಟಿಗರು

ಸರ್ಕಾರದ ಈ ನಿರ್ಧಾರದಿಂದ ಯಾರಿಗೆ ಖುಷಿ ಯಾಗಿದೆಯೋ ಇಲ್ಲವೋ, ಆದರೆ, ನೆಟ್ಟಿಗರಿಗಂತ್ತು ಸಖಕ್ ಖುಷಿಯಾದಂತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಫೋಸ್ಟ್​ಗಳು ಹರಿದಾಡುತ್ತಿವೆ.

ಶೀಘ್ರದಲ್ಲೇ ಕೋವಿಡ್​​-19 ಕಾಲರ್ ಟ್ಯೂನ್ ತೆರವು; ಕೊನೆಗೂ ಮುಕ್ತಿ ಸಿಕ್ತು ಎಂದ ನೆಟ್ಟಿಗರು
ಕಾಲರ್ ಟ್ಯೂನ್ ಫೋಸ್ಟ್
TV9 Web
| Edited By: |

Updated on: Mar 29, 2022 | 9:23 AM

Share

ಮಹಾಮಾರಿ ಕೋವಿಡ್ (Covid-19)​ ರೋಗದಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿತ್ತು. ಎಂದೂ ಕೇಳದ ಮತ್ತು ಕಾಣದ ಸಾಕಷ್ಟು ಸಾವು ನೋವುಗಳು ಸಂಭವಿಸಿವೆ. ಸದ್ಯ ಇಡೀ ಜಗತ್ತು ಮಹಾಮಾರಿಯಿಂದ ಸುಧಾರಿಸಿಕೊಂಡಿದೆ. ಕೋವಿಡ್ -19 ಪ್ರಕರಣಗಳಲ್ಲಿ ಸ್ಥಿರವಾದ ಇಳಿಕೆ ಕಂಡಿದ್ದು, ಇದರ ಮಧ್ಯೆ, ಕೊರೊನಾ ವೈರಸ್ ಜಾಗೃತಿ ಮತ್ತು ಮುನ್ನೆಚ್ಚರಿಕೆಗಳ ಕುರಿತು ಕಾಲರ್ ಟ್ಯೂನ್​ನ್ನು ನಿಲ್ಲಿಸಲು ಆರೋಗ್ಯ ಸಚಿವಾಲಯ ನಿರ್ಧರಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್​ಐ ತಿಳಿಸಿದೆ. ಕೋವಿಡ್-19 ಕಾಲರ್ ಟ್ಯೂನ್​ನ್ನು ಎರಡು ವರ್ಷಗಳ ಹಿಂದೆ ಸಾಂಕ್ರಾಮಿಕ ರೋಗವು ದೇಶವನ್ನು ಆವರಿಸಿದಾಗ ಪ್ರಾರಂಭಿಸಲಾಯಿತು. ಭಾರ್ತಿ ಏರ್‌ಟೆಲ್, ಬಿಎಸ್‌ಎನ್‌ಎಲ್, ರಿಲಯನ್ಸ್ ಜಿಯೋ ಮತ್ತು ವೊಡಾಫೋನ್-ಐಡಿಯಾ ಸೇರಿದಂತೆ ಆಪರೇಟರ್‌ಗಳು ತಮ್ಮ ಕಾಲರ್ ಟ್ಯೂನ್‌ಗಳನ್ನು ಮಾರ್ಚ್ 2020 ರಲ್ಲಿ ಸರ್ಕಾರದ ನಿರ್ದೇಶನದ ಮೇರೆಗೆ ಬದಲಾಯಿಸಿದ್ದಾರೆ.

ಆರಂಭದಲ್ಲಿ, COVID-19 ನಲ್ಲಿನ ಕಾಲರ್ ಟ್ಯೂನ್ ಜನರು ಕೆಮ್ಮುವುದು, ಸೀನುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ನಂತರ ಕೊರೊನಾವೈರಸ್‌ನಿಂದ ರಕ್ಷಿಸಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ಸಲಹೆಯೊಂದಿಗೆ ಪ್ರಾರಂಭವಾಗುತ್ತಿತ್ತು. ಆದರೆ ಈ ವರ್ಷದ ಜನವರಿಯಲ್ಲಿ, ಜನರು ಲಸಿಕೆ ಹಾಕುವಂತೆ ಒತ್ತಾಯಿಸುವ ಸಂದೇಶವನ್ನಾಗಿ ಬದಲಾಯಿಸಲಾಯಿತು. ಸರ್ಕಾರದ ಈ ನಿರ್ಧಾರದಿಂದ ಯಾರಿಗೆ ಖುಷಿ ಯಾಗಿದೆಯೋ ಇಲ್ಲವೋ, ಆದರೆ, ನೆಟ್ಟಿಗರಿಗಂತ್ತು ಸಖಕ್ ಖುಷಿಯಾದಂತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಫೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದು, ಕೊನೆಗೂ ಕಿವಿಗಳಿಗೆ ಮುಕ್ತಿ ನೀಡಲಾಯಿತು ಎನ್ನುವ ತಮಾಷೆ ಫೋಸ್ಟ್​ಗಳು ಹರಿದಾಡುತ್ತಿವೆ.

ಸೋಮವಾರ ಭಾರತದಲ್ಲಿ 1,270 ಹೊಸ COVID-19 ಪ್ರಕರಣಗಳನ್ನು ವರದಿ ಆಗಿವೆ. ಇದು ಏಪ್ರಿಲ್ 2020 ರಿಂದ ಕಡಿಮೆಯಾಗಿದೆ. ಕರೋನ ವೈರಸ್ ಪ್ರಕರಣಗಳು ಪ್ರತಿ ತಿಂಗಳು ಕಡಿಮೆಯಾಗುತ್ತಿವೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ