Sign In

By signing in or creating an account, you agree with Associated Broadcasting Company's Terms & Conditions and Privacy Policy.

Guinness World Record : ಗಿನ್ನಿಸ್ ದಾಖಲೆ ಬರೆದ 50,890 ಹರಳುಗಳಿಂದ ವಿನ್ಯಾಸಗೊಳಿಸಲಾದ ವೆಡ್ಡಿಂಗ್ ಗೌನ್

ಇಲ್ಲೊಂದು ಮದುವೆ ಗೌನ್​​​​ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಜೊತೆಗೆ ಈ ಬಟ್ಟೆ ವಿಶೇಷ ವಿನ್ಯಾಸದಿಂದಲೇ ಗಿನ್ನೆಸ್​​ ವಿಶ್ವ ದಾಖಲೆಯನ್ನು ಪಡೆದುಕೊಂಡಿದೆ. ಏನಿದರ ವಿಶೇಷತೆ, ಇಲ್ಲಿದೆ ಸಂಪೂರ್ಣ ವಿವರ. 

Guinness World Record : ಗಿನ್ನಿಸ್ ದಾಖಲೆ ಬರೆದ 50,890 ಹರಳುಗಳಿಂದ ವಿನ್ಯಾಸಗೊಳಿಸಲಾದ ವೆಡ್ಡಿಂಗ್ ಗೌನ್
Guinness World Record wedding gownImage Credit source: guinnessworldrecords/instagram
Follow us
ಅಕ್ಷತಾ ವರ್ಕಾಡಿ
|

Updated on:May 11, 2023 | 12:59 PM

ಮದುವೆ ಪ್ರತಿಯೊಬ್ಬರ ಜೀವನದಲ್ಲಿಯೂ ಒಂದು ವಿಶೇಷ ದಿನ. ಈ ವಿಶೇಷ ದಿನಕ್ಕೆ ಲಕ್ಷಾಂತರ ಹಣ ಸುರಿದು ಸಂಭ್ರಮದಿಂದ ಆಚರಿಸಲಾಗುತ್ತದೆ. ವಧುವಿನ ವಿಚಾರಕ್ಕೆ ಬಂದರೆ ಆಭರಣಗಳಿಂದ ಹಿಡಿದು ಬಟ್ಟೆಗಳ ವರೆಗೆ ಎಷ್ಟೇ ದುಡ್ಡಿದ್ದರೂ ಕಡಿಮೆ ಎಂದೆನಿಸಿ ಬಿಡುತ್ತದೆ. ಹಾಗೆಯೇ ಇಲ್ಲೊಂದು ಮದುವೆ ಗೌನ್​​​​ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಜೊತೆಗೆ ಈ ಬಟ್ಟೆ ವಿಶೇಷ ವಿನ್ಯಾಸದಿಂದಲೇ ಗಿನ್ನೆಸ್​​ ವಿಶ್ವ ದಾಖಲೆಯನ್ನು ಪಡೆದುಕೊಂಡಿದೆ. ಏನಿದರ ವಿಶೇಷತೆ, ಇಲ್ಲಿದೆ ಸಂಪೂರ್ಣ ವಿವರ.

ಹೌದು ಒಂದು ಸಾವಿರ, ಹತ್ತು ಸಾವಿರಾನೂ ಅಲ್ಲ, ಬರೋಬ್ಬರಿ 50,890 ಹರಳುಗಳನ್ನು ಬಳಸಿ ಬಿಳಿ ಬಣ್ಣದ ಮದುವೆ ಗೌನನ್ನು ವಿನ್ಯಾಸಗೊಳಿಸಲಾಗಿದೆ. ಈ ಉಡುಪನ್ನು ತಯಾರಿಸಲು ಸುಮಾರು ನಾಲ್ಕು ತಿಂಗಳು ತೆಗೆದುಕೊಳ್ಳಲಾಗಿದೆ. ಇಟಾಲಿಯನ್​​​ ಬ್ರೈಡಲ್ ಫ್ಯಾಶನ್ ಬ್ರ್ಯಾಂಡ್ ಈ ಉಡುಪನ್ನು ವಿನ್ಯಾಸಗೊಳಿಸಿದ್ದು, ಈ ಉಡುಪನ್ನು ಮೈಕೆಲಾ ಫೆರೆರೊ ಫ್ಯಾಶನ್ ಶೋನಲ್ಲಿ ಪ್ರದರ್ಶಿಸಲಾಗಿದೆ. ಈ ಬಟ್ಟೆಯನ್ನು ಗಿನ್ನೆಸ್​​​ ವಿಶ್ವ ದಾಖಲೆಯನ್ನು ಪಡೆದುಕೊಂಡಿದ್ದು, ಈ ಬಟ್ಟೆಯ ವಿಶೇಷತೆಯ ಬಗ್ಗೆ ಗಿನ್ನೆಸ್​ ವಿಶ್ವ ದಾಖಲೆಯ ಅಧಿಕೃತ ಇನ್ಸ್ಟಾಗ್ರಾಮ್​​ ಪೇಜ್​​ನಲ್ಲಿ ಶೇರ್​ ಮಾಡಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ಪತಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಕ್ಕೆ ಪೊಲೀಸ್​ ಠಾಣೆ ಮೆಟ್ಟಿಲೇರಿದ ಪತ್ನಿ, ವಿಷಯ ಬೇರೆಯೇ ಇದೆ

ಮಾಡೆಲ್​​ ಮಾರ್ಚೆ ಗೆಲಾನಿ ಕ್ಯಾವ್​​ ಈ ವೆಡ್ಡಿಂಗ್​​ ಗೌನ್​​ ಧರಿಸಿ ರಾಂಪ್​​ ವಾಕ್​​ ಮಾಡಿದ್ದಾರೆ. ಗಿನ್ನೆಸ್​​​ ವಿಶ್ವ ದಾಖಲೆಯ ವರದಿಯ ಪ್ರಕಾರ 2011ರಲ್ಲಿ 45,024 ಹರಳುಗಳ ಉಡುಗೆಯ ದಾಖಲೆಯನ್ನು ಮುರಿದು , ಇದೀಗಾ ಈ ಉಡುಪು 50,890 ಹರಳುಗಳ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:59 pm, Thu, 11 May 23

ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ