AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲುಗಳ ಸ್ವಾಧೀನ ಕಳೆದುಕೊಂಡ ವಧುವನ್ನು ಎತ್ತಿಕೊಂಡೇ ಸಪ್ತಪದಿ ತುಳಿದ ವರ

Ahmedabad : ನಿಶ್ಚಿತಾರ್ಥದ ನಂತರ ಅಪಘಾತಕ್ಕೆ ಒಳಗಾಗಿ ದೇಹದ ಕೆಳಭಾಗದ ಸ್ವಾಧೀನ ಕಳೆದುಕೊಳ್ಳುತ್ತಾಳೆ ವಧು. ತನ್ನ ಪೋಷಕರ ವಿರೋಧದ ಮಧ್ಯೆಯೂ ಅವಳನ್ನೇ ಮದುವೆಯಾಗುತ್ತಾನೆ ಅಹಮದಾಬಾದ್​ನ ವರ.

ಕಾಲುಗಳ ಸ್ವಾಧೀನ ಕಳೆದುಕೊಂಡ ವಧುವನ್ನು ಎತ್ತಿಕೊಂಡೇ ಸಪ್ತಪದಿ ತುಳಿದ ವರ
ಮದುವೆಯಲ್ಲಿ ದಿವ್ಯಾಂಗವುಳ್ಳ ವಧುವನ್ನು ವರ ಎತ್ತಿಕೊಂಡೇ ಇರುವುದು
TV9 Web
| Edited By: ಶ್ರೀದೇವಿ ಕಳಸದ|

Updated on:Dec 07, 2022 | 9:39 AM

Share

Viral : ವಧುವನ್ನು ಎತ್ತಿಕೊಂಡೇ ಸಪ್ತಪದಿ ತುಳಿದ ಅಪರೂಪದ ಘಟನೆ ಅಹಮದಾಬಾದ್​ನಲ್ಲಿ ನಡೆದಿದೆ. ಮೂರು ವರ್ಷಗಳ ಹಿಂದೆ ಮಹಾವೀರ್ ಸಿಂಘ್​ ಮತ್ತು ಪಟಾನ್​ನ ರೀನ್​ಲಾಬಾ ಅವರ ನಿಶ್ಚಿತಾರ್ಥ ನಡೆದಿತ್ತು. ಆದರೆ ರೀನ್​ಲಾಬಾ ಅಪಘಾತಕ್ಕೆ ಒಳಗಾದರು. ಇದರಿಂದ ಅವರ ಕೆಳಭಾಗ ಪಾರ್ಶ್ವವಾಯುವಿಗೆ ತುತ್ತಾಗಿ ಸಂಪೂರ್ಣ ಸ್ವಾಧೀನ ಕಳೆದುಕೊಂಡಿತು. ಆಗ ತನ್ನ ಕುಟುಂಬ ಈ ಮದುವೆಯನ್ನು ನಿರಾಕರಿಸಿದರೂ ಮಹಾವೀರ್ ಮಾತ್ರ ರೀನ್​ಲಾಬಾ ಅವರೊಂದಿಗೇ ಮದುವೆಯಾಗಬೇಕೆಂದು ಹಠ ಹಿಡಿದರು. ಇದೀಗ ಅವರ ಮದುವೆ ಯಶಸ್ವಿಯಾಗಿ ನೆರವೇರಿದೆ.

ಇದನ್ನೂ ಓದಿ : ಅವಳಿ ಸಹೋದರಿಯರನ್ನು ಮದುವೆಯಾದ ವರ; ವಿಡಿಯೋ ವೈರಲ್

ಇವರಿಬ್ಬರ ನಿಶ್ಚಿತಾರ್ಥ ಪರಸ್ಪರ ಕುಟುಂಬದ ಒಪ್ಪಿಗೆಯ ಮೇರೆಗೆ ಗುಜರಾತ್​ನ ಪಟಾನ್​ನಲ್ಲಿ ಮೂರು ವರ್ಷಗಳ ಹಿಂದೆ ನಡೆದಿತ್ತು. ನಂತರ ಎರಡೂ ಕುಟುಂಬದವರ ಬಾಂಧವ್ಯವೂ ವೃದ್ಧಿಸಿತು. ಆರು ತಿಂಗಳ ಹಿಂದೆ ಮದುವೆಯ ದಿನಾಂಕವನ್ನು ಗೊತ್ತುಪಡಿಸಲಾಯಿತು. ಆದರೆ, ರೀನ್​ಲಾಬಾ ಸ್ನೇಹಿತರೊಂದಿಗೆ ಆಟವಾಡುತ್ತಿದ್ಧಾಗ ಅಕಸ್ಮಾತ್ ಆಗಿ ಬಿದ್ದರು. ಆಗ ಬೆನ್ನುಹುರಿಗೆ ತೀವ್ರ ಗಾಯವಾಯಿತು. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ದೇಹದ ಕೆಳಭಾಗಕ್ಕೆ ಚಿಕಿತ್ಸೆ ಫಲಿಸಲಿಲ್ಲ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಇದನ್ನೂ ಓದಿ : ಮದುಮಗ ತನ್ನ ಪ್ರೀತಿಯ ನಾಯಿಯೊಂದಿಗೆ ಮದುವೆ ಮಂಟಪಕ್ಕೆ ಬಂದಾಗ

ಮಹಾವೀರ್​ನ ಕುಟುಂಬದವರು ಮದುವೆ ನಿಲ್ಲಿಸುವುದಾಗಿ ಹೇಳಿದಾಗ ರೀನ್​ಲಾಬಾನ ಪೋಷಕರು ಚಿಂತೆಗೀಡಾದರು. ಆದರೆ ಮಹಾವೀರ್​ ತನ್ನ ಹುಟ್ಟುಹಬ್ಬದ ದಿನ ಅಂದರೆ ಅಕ್ಟೋಬರ್​ 31ರಂದು, ತಾನು ಮದುವೆಯಾಗುವುದಾದರೆ ರೀನ್​ಲಾಬಾರನ್ನೇ ಎಂದರು. ನಂತರ ಡಿಸೆಂಬರ್ 1ರಂದು ತನ್ನ ಕುಟುಂಬದವರ ವಿರೋಧದ ಮಧ್ಯೆಯೇ ಅಹಮದಾಬಾದ್​ನಲ್ಲಿ ಮದುವೆಯಾದರು. ಅಂತೂ ರೀನ್​ಲಾಬಾರನ್ನು ಎತ್ತಿಕೊಂಡೇ ಸಪ್ತಪದಿ ತುಳಿದರು ಮಹಾವೀರ್.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 9:38 am, Wed, 7 December 22

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ