AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲುಗಳ ಸ್ವಾಧೀನ ಕಳೆದುಕೊಂಡ ವಧುವನ್ನು ಎತ್ತಿಕೊಂಡೇ ಸಪ್ತಪದಿ ತುಳಿದ ವರ

Ahmedabad : ನಿಶ್ಚಿತಾರ್ಥದ ನಂತರ ಅಪಘಾತಕ್ಕೆ ಒಳಗಾಗಿ ದೇಹದ ಕೆಳಭಾಗದ ಸ್ವಾಧೀನ ಕಳೆದುಕೊಳ್ಳುತ್ತಾಳೆ ವಧು. ತನ್ನ ಪೋಷಕರ ವಿರೋಧದ ಮಧ್ಯೆಯೂ ಅವಳನ್ನೇ ಮದುವೆಯಾಗುತ್ತಾನೆ ಅಹಮದಾಬಾದ್​ನ ವರ.

ಕಾಲುಗಳ ಸ್ವಾಧೀನ ಕಳೆದುಕೊಂಡ ವಧುವನ್ನು ಎತ್ತಿಕೊಂಡೇ ಸಪ್ತಪದಿ ತುಳಿದ ವರ
ಮದುವೆಯಲ್ಲಿ ದಿವ್ಯಾಂಗವುಳ್ಳ ವಧುವನ್ನು ವರ ಎತ್ತಿಕೊಂಡೇ ಇರುವುದು
TV9 Web
| Updated By: ಶ್ರೀದೇವಿ ಕಳಸದ|

Updated on:Dec 07, 2022 | 9:39 AM

Share

Viral : ವಧುವನ್ನು ಎತ್ತಿಕೊಂಡೇ ಸಪ್ತಪದಿ ತುಳಿದ ಅಪರೂಪದ ಘಟನೆ ಅಹಮದಾಬಾದ್​ನಲ್ಲಿ ನಡೆದಿದೆ. ಮೂರು ವರ್ಷಗಳ ಹಿಂದೆ ಮಹಾವೀರ್ ಸಿಂಘ್​ ಮತ್ತು ಪಟಾನ್​ನ ರೀನ್​ಲಾಬಾ ಅವರ ನಿಶ್ಚಿತಾರ್ಥ ನಡೆದಿತ್ತು. ಆದರೆ ರೀನ್​ಲಾಬಾ ಅಪಘಾತಕ್ಕೆ ಒಳಗಾದರು. ಇದರಿಂದ ಅವರ ಕೆಳಭಾಗ ಪಾರ್ಶ್ವವಾಯುವಿಗೆ ತುತ್ತಾಗಿ ಸಂಪೂರ್ಣ ಸ್ವಾಧೀನ ಕಳೆದುಕೊಂಡಿತು. ಆಗ ತನ್ನ ಕುಟುಂಬ ಈ ಮದುವೆಯನ್ನು ನಿರಾಕರಿಸಿದರೂ ಮಹಾವೀರ್ ಮಾತ್ರ ರೀನ್​ಲಾಬಾ ಅವರೊಂದಿಗೇ ಮದುವೆಯಾಗಬೇಕೆಂದು ಹಠ ಹಿಡಿದರು. ಇದೀಗ ಅವರ ಮದುವೆ ಯಶಸ್ವಿಯಾಗಿ ನೆರವೇರಿದೆ.

ಇದನ್ನೂ ಓದಿ : ಅವಳಿ ಸಹೋದರಿಯರನ್ನು ಮದುವೆಯಾದ ವರ; ವಿಡಿಯೋ ವೈರಲ್

ಇವರಿಬ್ಬರ ನಿಶ್ಚಿತಾರ್ಥ ಪರಸ್ಪರ ಕುಟುಂಬದ ಒಪ್ಪಿಗೆಯ ಮೇರೆಗೆ ಗುಜರಾತ್​ನ ಪಟಾನ್​ನಲ್ಲಿ ಮೂರು ವರ್ಷಗಳ ಹಿಂದೆ ನಡೆದಿತ್ತು. ನಂತರ ಎರಡೂ ಕುಟುಂಬದವರ ಬಾಂಧವ್ಯವೂ ವೃದ್ಧಿಸಿತು. ಆರು ತಿಂಗಳ ಹಿಂದೆ ಮದುವೆಯ ದಿನಾಂಕವನ್ನು ಗೊತ್ತುಪಡಿಸಲಾಯಿತು. ಆದರೆ, ರೀನ್​ಲಾಬಾ ಸ್ನೇಹಿತರೊಂದಿಗೆ ಆಟವಾಡುತ್ತಿದ್ಧಾಗ ಅಕಸ್ಮಾತ್ ಆಗಿ ಬಿದ್ದರು. ಆಗ ಬೆನ್ನುಹುರಿಗೆ ತೀವ್ರ ಗಾಯವಾಯಿತು. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ದೇಹದ ಕೆಳಭಾಗಕ್ಕೆ ಚಿಕಿತ್ಸೆ ಫಲಿಸಲಿಲ್ಲ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಇದನ್ನೂ ಓದಿ : ಮದುಮಗ ತನ್ನ ಪ್ರೀತಿಯ ನಾಯಿಯೊಂದಿಗೆ ಮದುವೆ ಮಂಟಪಕ್ಕೆ ಬಂದಾಗ

ಮಹಾವೀರ್​ನ ಕುಟುಂಬದವರು ಮದುವೆ ನಿಲ್ಲಿಸುವುದಾಗಿ ಹೇಳಿದಾಗ ರೀನ್​ಲಾಬಾನ ಪೋಷಕರು ಚಿಂತೆಗೀಡಾದರು. ಆದರೆ ಮಹಾವೀರ್​ ತನ್ನ ಹುಟ್ಟುಹಬ್ಬದ ದಿನ ಅಂದರೆ ಅಕ್ಟೋಬರ್​ 31ರಂದು, ತಾನು ಮದುವೆಯಾಗುವುದಾದರೆ ರೀನ್​ಲಾಬಾರನ್ನೇ ಎಂದರು. ನಂತರ ಡಿಸೆಂಬರ್ 1ರಂದು ತನ್ನ ಕುಟುಂಬದವರ ವಿರೋಧದ ಮಧ್ಯೆಯೇ ಅಹಮದಾಬಾದ್​ನಲ್ಲಿ ಮದುವೆಯಾದರು. ಅಂತೂ ರೀನ್​ಲಾಬಾರನ್ನು ಎತ್ತಿಕೊಂಡೇ ಸಪ್ತಪದಿ ತುಳಿದರು ಮಹಾವೀರ್.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 9:38 am, Wed, 7 December 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್