AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲುಬಂಡೆಯನ್ನು ಏರಿದ ದಿವ್ಯಾಂಗ; ಸ್ಪೂರ್ತಿಗೊಂಡ ನೆಟ್ಟಿಗರು

Specially Abled : ‘ನೀವು ನಿಮ್ಮ ಕನಸುಗಳ ಬೆನ್ನಟ್ಟುವುದನ್ನು ಯಾವುದರಿಂದಲೂ ತಡೆಯಲು ಸಾಧ್ಯವಿಲ್ಲ’ 9 ಸೆಕೆಂಡಿನ ಈ ವಿಡಿಯೋ ನೋಡಿದ ಯಾರೂ ತಮ್ಮ ಆತ್ಮವಿಮರ್ಶೆ ಮಾಡಿಕೊಳ್ಳದೇ ಇರಲಾರರು.

ಕಲ್ಲುಬಂಡೆಯನ್ನು ಏರಿದ ದಿವ್ಯಾಂಗ; ಸ್ಪೂರ್ತಿಗೊಂಡ ನೆಟ್ಟಿಗರು
ಕಾಲಿಲ್ಲವಾದರೇನು ಮನಸ್ಸಿನಿಂದ ಏರಬಲ್ಲೆ!
TV9 Web
| Updated By: ಶ್ರೀದೇವಿ ಕಳಸದ|

Updated on: Jan 04, 2023 | 4:22 PM

Share

Viral Video : ಮನಸೇ ಎಲ್ಲದರ ಮೂಲ ಎನ್ನುವುದು ಅಕ್ಷರಶಃ ಸತ್ಯ ಎನ್ನಿಸುತ್ತಿದೆ ಇಂಥ ವಿಡಿಯೋಗಳನ್ನು ನೋಡಿದಾಗೆಲ್ಲ. ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ಈ ವ್ಯಕ್ತಿಗೆ ಎರಡೂ ಕಾಲುಗಳಿಲ್ಲ. ಆದರೆ, ಕೃತಕ ಜೋಡಣೆಗಳ ಸಹಾಯದಿಂದ ಕಡಿದಾದ ಕಲ್ಲುಬಂಡೆಯನ್ನು ಏರಲು ಪ್ರಯತ್ನಿಸಿದ್ದಾರೆ. ಮನೋಸ್ಥೈತ್ಯಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕೆ? ಐಪಿಎಸ್​ ಅಧಿಕಾರಿ ದೀಪಾಂಶು ಕಾಬ್ರಾ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ.

ಏನಿದೆ ಎನ್ನುವುದನ್ನು ಮರೆತು ಏನಿಲ್ಲ ಎನ್ನುವುದರತ್ತಲೇ ನಾವು ಹೆಚ್ಚು ಆಲೋಚಿಸುತ್ತೇವೆ. ಈ ಒಣಚಿಂತೆಯೇ ನಮ್ಮನ್ನು ಅಗ್ನಿಯಂತೆ ಸುಡುತ್ತದೆ. ಕ್ರಮೇಣ ದೇಹದ ಮೇಲೆ ಪರಿಣಾಮ ಬೀರಿ ಮಾನಸಿಕವಾಗಿಯೂ ಕುಸಿಯುವಂತೆ ಮಾಡುತ್ತದೆ. ಆದರೆ ಇಲ್ಲಿರುವ ಈ ವಿಡಿಯೋ ನೋಡಿ, ಕೇವಲ 9 ಸೆಕೆಂಡಿನ ಈ ವಿಡಿಯೋ ಇದು. ‘ನೀವು ನಿಮ್ಮ ಕನಸುಗಳ ಬೆನ್ನಟ್ಟುವುದನ್ನು ಯಾವುದರಿಂದಲೂ ತಡೆಯಲು ಸಾಧ್ಯವಿಲ್ಲ’ ಎನ್ನುವ ಶೀರ್ಷಿಕೆ ಹೊಂದಿದ ಈ ವಿಡಿಯೋ ಏನು ಹೇಳಲು ಬಯಸುತ್ತಿದೆ ಎನ್ನುವುದು ಈಗಾಗಲೇ ನಿಮಗೆ ಅರ್ಥವಾಗಿರುತ್ತದೆ.

ಇದನ್ನೂ ಓದಿ : ಕೆಸರೆಂಬ ಸ್ವರ್ಗಸುಖ ನಿಮಗೇನು ಗೊತ್ತು ಹುಲುಮಾನವರೇ; ನಾಯಿಯ ವೈರಲ್ ವಿಡಿಯೋ

ನಮ್ಮ ಕನಸು, ನಮ್ಮ ಇಚ್ಛಾಶಕ್ತಿಗೆ ಅನುಸಾರವಾಗಿ ನಮ್ಮ ಬದುಕು ಸಾಗುತ್ತದೆ. ದೇಹದ ಏರುಪೇರು ಒಂದುಕಡೆ. ಆದರೆ ಇಚ್ಛಾಶಕ್ತಿ ಪ್ರಬಲವಾಗಿದ್ಧಾಗ ಯಾರೂ ಯಾವುದೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಅಂಥದೊಂದು ಶಕ್ತಿ ನಮ್ಮ ಮೈಮನಸ್ಸನ್ನು ಆವಾಹಿಸಿಕೊಂಡುಬಿಡುತ್ತದೆ.

ಇದನ್ನೂ ಓದಿ : ನೀ ಬೀಳೋದೇ ಇಲ್ಲ ತಂಗಿ; ಹೇಗಿದೆ ಈ ಅಣ್ಣನ ಕಾಳಜಿ

ವಿಡಿಯೋದಲ್ಲಿರುವ ವ್ಯಕ್ತಿಯನ್ನೇ ಗಮನಿಸಿ. ಚಲಿಸಲು ಬೇಕಾದಂಥ ಕಾಲುಗಳೇ ಇಲ್ಲ. ಆದರೂ ಅವರು ಇಂಥ ಸಾಹಸಕ್ಕೆ ಇಳಿದಿದ್ದಾರೆ. ಬಹುಶಃ ಕಾಲಿರುವ ನಾವೂ ಕೂಡ ಇಂಥ ಸಾಹಸಕ್ಕೆ ಇಳಿಯಲಾರೆವೇನೋ. ಈತನಕ ಈ ವಿಡಿಯೋ ಅನ್ನು ಸುಮಾರು 32,000 ಜನರು ನೋಡಿದ್ಧಾರೆ.  ಸಾವಿರಾರು ಜನರು ಇಷ್ಟಪಟ್ಟಿದ್ದಾರೆ. ನೂರಾರು ಈ ದಿವ್ಯಾಂಗ ವ್ಯಕ್ತಿಗೆ ಹಾರೈಸಿ ಶ್ಲಾಘಿಸಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ