AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಒಂದು ಕಾಲು ಕಳೆದುಕೊಂಡರೇನು? ಈಕೆಯ ಸಾಲ್ಸಾ ನೃತ್ಯ ನೋಡಿದರೆ ನಾವೇ ನಾಚಬೇಕು!

2020ರಲ್ಲಿ ಕೂಡ ಆಕೆಯ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಗರ್ಭಿಣಿಯಾಗಿದ್ದಾಗ ಆಕೆ ನೃತ್ಯ ಮಾಡಿದ ವಿಡಿಯೋ ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ಸದ್ದು ಮಾಡಿತ್ತು.

Viral Video: ಒಂದು ಕಾಲು ಕಳೆದುಕೊಂಡರೇನು? ಈಕೆಯ ಸಾಲ್ಸಾ ನೃತ್ಯ ನೋಡಿದರೆ ನಾವೇ ನಾಚಬೇಕು!
ಸಾಲ್ಸಾ ನೃತ್ಯಗಾತಿ
TV9 Web
| Edited By: |

Updated on: Jun 08, 2021 | 8:58 PM

Share

ಯಾವಾಗ ನಾವು ಕಷ್ಟವನ್ನೇ ಸೋಲಿಸುತ್ತೇವೋ ಆಗ ಕಷ್ಟ ಎಂಬುದೇ ಇರುವುದಿಲ್ಲ. ಎಲ್ಲವೂ ಸುಲಭ ಅಥವಾ ಸುಂದರವಾಗಿಯೇ ಕಾಣುತ್ತದೆ. ಈ ವಿಡಿಯೋದಲ್ಲಿ ಇರುವ ವೆನೆಜುವೆಲಾದ ಡ್ಯಾನ್ಸರ್ ಅದನ್ನೇ ಸಾಧಿಸಿ ತೋರಿಸಿದ್ದಾಳೆ. ಆಂಡ್ರೆಯಾನಾ ಹರ್ನಾಂಡಿಜ್ ಎಂಬ ಹುಡುಗಿ ಐದು ವರ್ಷದ ಹಿಂದೆ ತನ್ನ ಕಾಲನ್ನೇ ಕಳೆದುಕೊಳ್ಳುತ್ತಾಳೆ. ಆದರೂ ಜೀವನದಲ್ಲಿ ಹತಾಶಳಾಗದೆ, ಹೊಸತನ್ನು ಸಾಧಿಸುತ್ತಾಳೆ.

ಐದು ವರ್ಷಗಳ ಹಿಂದೆ ತನ್ನ ಎಡ ಕಾಲು ಕಳೆದುಕೊಂಡ ಈಕೆ ಈಗ ಸುಂದರವಾಗಿ, ಇತರರನ್ನೂ ನಾಚಿಸುವ ಹುಮ್ಮಸ್ಸಿನಿಂದ ಸಾಲ್ಸಾ ನೃತ್ಯ ಮಾಡುತ್ತಾಳೆ. ಮುಖದಲ್ಲಿ ಸದಾ ಮಂದಹಾಸ ಹೊಂದಿಕೊಂಡು, ಭರ್ಜರಿಯಾಗಿ ನೃತ್ಯ ಪ್ರದರ್ಶನ ಮಾಡುತ್ತಾಳೆ. ಆಕೆಯ ಬಣ್ಣಬಣ್ಣದ ಬಟ್ಟೆ ಕೂಡ ಕಲರ್​ಫುಲ್ ವ್ಯಕ್ತಿತ್ವವನ್ನು ಮತ್ತಷ್ಟು ಸುಂದರವಾಗಿ ಕಾಣಿಸುತ್ತದೆ. ಈಗ ಆಕೆಯ ನೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್​ಸ್ಟಾಗ್ರಾಂನಲ್ಲಿ ಯುವತಿಯ ನೃತ್ಯ ಕಂಡು ನೆಟ್ಟಿಗರು ಬೆರಗಾಗಿದ್ದಾರೆ. ಛಲ, ಸಾಹಸ, ಸಂತೋಷಕ್ಕೆ ಜನರು ಮಾರುಹೋಗಿದ್ದಾರೆ. ಆಕೆಗೆ ಸೋಷಿಯಲ್ ಮೀಡಿಯಾ ಮೂಲಕ ಮತ್ತಷ್ಟು ಪ್ರೋತ್ಸಾಹ, ಉತ್ಸಾಹ ತುಂಬುತ್ತಿದ್ದಾರೆ. ಜೂನ್ 4ರಂದು ಹಂಚಿಕೊಂಡಿದ್ದ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ 30 ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ.

ಹರ್ನಾಂಡಿಜ್ ಸಾಮಾನ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ ತನ್ನ ಕಷ್ಟದ ಬಗ್ಗೆ ಸ್ಫೂರ್ತಿದಾಯಕ ಮಾತುಗಳನ್ನು ಹೇಳುತ್ತಿರುತ್ತಾಳೆ. 2020ರಲ್ಲಿ ಕೂಡ ಆಕೆಯ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಗರ್ಭಿಣಿಯಾಗಿದ್ದಾಗ ಆಕೆ ನೃತ್ಯ ಮಾಡಿದ ವಿಡಿಯೋ ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ಸದ್ದು ಮಾಡಿತ್ತು.

ಇದನ್ನೂ ಓದಿ: ಹಿಂದಿ ಹಾಡಿಗೆ ಸ್ಟೆಪ್​ ಹಾಕಿದ ಭಜರಂಗಿ ಭಾಯಿಜಾನ್​ ಸಿನಿಮಾದ ಹರ್ಷಾಲಿ ಮಲ್ಹೋತ್ರಾ; ವಿಡಿಯೋ ವೈರಲ್

Viral Video: ನ್ಯೂಸ್​ ಓದುವಾಗ ಶಾರ್ಟ್ಸ್​ ಧರಿಸಿ ಕುಳಿತ ನ್ಯೂಸ್​ ಆ್ಯಂಕರ್​​! ವಿಡಿಯೋ ವೈರಲ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ