AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spicy Chip: ಅತ್ಯಂತ ಖಾರದ ಚಿಪ್ಸ್​​ ತಿಂದು 14ರ ಬಾಲಕ ಸಾವು

ಸೋಶಿಯಲ್​ ಮೀಡಿಯಾಗಳಲ್ಲಿ ಅತ್ಯಂತ ಟ್ರೆಂಡಿಂಗ್​ನಲ್ಲಿರುವ 'ಒನ್ ಚಿಪ್ ಚಾಲೆಂಜ್‌'ವೊಂದರಲ್ಲಿ ಭಾಗವಹಿಸಿದ್ದ ಬಾಲಕ. ಈ ಚಾಲೆಂಜ್​ ಮೂಲಕ ಅತ್ಯಂತ ಖಾರದ ಚಿಪ್ಸ್​​ ತಿಂದ ಪರಿಣಾಮ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯ ಸ್ತಂಭನದಿಂದ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಘೋಪಿಸಿದ್ದಾರೆ.

Spicy Chip: ಅತ್ಯಂತ ಖಾರದ ಚಿಪ್ಸ್​​ ತಿಂದು 14ರ ಬಾಲಕ ಸಾವು
ಅಕ್ಷತಾ ವರ್ಕಾಡಿ
|

Updated on: May 17, 2024 | 12:51 PM

Share

ವಿಶ್ವದ ಅತ್ಯಂತ ಖಾರವಾದ ಚಿಪ್ಸ್​​​ ತಿಂದು 14ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಇಂಗ್ಲೆಂಡ್‌ನ ವೋರ್ಸೆಸ್ಟರ್ ನಗರದಲ್ಲಿ ನಡೆದಿದೆ. ಮೃತ ಬಾಲಕ ಹ್ಯಾರಿಸ್ ವೊಲೊಬಾಹ್(14) ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್ದು, ಇದೀಗ ರೀಲ್ಸ್​​ ಹುಚ್ಚು ಆತನ ಪ್ರಾಣವನ್ನೇ ತೆಗೆದಿದೆ. ಸೋಶಿಯಲ್​ ಮೀಡಿಯಾಗಳಲ್ಲಿ ಅತ್ಯಂತ ಟ್ರೆಂಡಿಂಗ್​​ನಲ್ಲಿದ್ದ ‘ಒನ್ ಚಿಪ್ ಚಾಲೆಂಜ್‌’ವೊಂದರಲ್ಲಿ ಭಾಗವಹಿಸಿದ್ದ ಬಾಲಕ. ಈ ಚಾಲೆಂಜ್​ ಮೂಲಕ ಅತ್ಯಂತ ಖಾರದ ಚಿಪ್ಸ್​​ ತಿಂದ ಪರಿಣಾಮ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯ ಸ್ತಂಭನದಿಂದ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಘೋಪಿಸಿದ್ದಾರೆ.

ಏನಿದು’ಒನ್ ಚಿಪ್ ಚಾಲೆಂಜ್‌’?

ಚಿಪ್ಸ್​​ ಬ್ರಾಂಡ್​​ ಒಂದು ವಿಶ್ವದಲ್ಲೇ ಅತ್ಯಂತ ಖಾರವಾದ ಚಿಪ್​ಸ್​​​​​​​ ಅನ್ನು ತಯಾರಿಸಿದ್ದು, ಇದನ್ನು ಖರೀದಿಸಿ ತಿನ್ನಲು ಚಾಲೆಂಜ್​​ವೊಂದನ್ನು ನೀಡುತ್ತಿದೆ. ಈ ಚಿಪ್ಸ್​​ ಖರೀದಿಸಿ ತಿನ್ನಿ, ಈ ಮೂಲಕ ನಿಮ್ಮ ರಿಯಕ್ಷನ್​​​ ಅನ್ನು ವಿಡಿಯೋ ಮಾಡಿ, ನಮ್ಮನ್ನು ಟ್ಯಾಗ್​ ಮಾಡಿ ಸೋಶಿಯಲ್​​ ಮೀಡಿಯಾದಲ್ಲಿ ಅಪ್ಲೋಡ್ ಮಾಡಿ ಎಂಬ ಚಾಲೆಂಜನ್ನು ನೀಡುತ್ತಿದೆ.

ಇದನ್ನೂ ಓದಿ: ಚಲಿಸುತ್ತಿರುವ ರೈಲಿನಲ್ಲಿ ಪತ್ನಿಗೆ ತ್ರಿವಳಿ ತಲಾಖ್ ನೀಡಿ, ಥಳಿಸಿ ಪರಾರಿಯಾದ ಪತಿ

ಟ್ರೆಂಡಿಂಗ್​ನಲ್ಲಿದ್ದ ಈ ಚಾಲೆಂಜನ್ನು ಬಾಲಕ ಸ್ವೀಕರಿಸಿದ್ದು, ಅತ್ಯಂತ ಖಾರದವಾದ ಚಿಪ್ಸ್​​ ಅನ್ನು ತಿಂದಿದ್ದಾನೆ. ಕೆಲ ಹೊತ್ತಿನಲ್ಲೇ ಬಾಲಕನ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಿದ ಕೆಲ ಹೊತ್ತಿನಲ್ಲೇ ಸಾವನ್ನಪ್ಪಿದ್ದಾನೆ. ಅಸೋಸಿಯೇಟೆಡ್ ಪ್ರೆಸ್ ಪಡೆದ ಶವಪರೀಕ್ಷೆ ವರದಿಯ ಪ್ರಕಾರ , ಸಾಮಾಜಿಕ ಮಾಧ್ಯಮದಲ್ಲಿ ಮಸಾಲೆಯುಕ್ತ ಟೋರ್ಟಿಲ್ಲಾ ಚಿಪ್ ಚಾಲೆಂಜ್‌ನಲ್ಲಿ ಭಾಗವಹಿಸಿದ ಬಾಲಕ ಹೆಚ್ಚಿನ ಪ್ರಮಾಣದ ಖಾರವನ್ನು ಸೇವಿಸುವುದರಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್