AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spicy Chip: ಅತ್ಯಂತ ಖಾರದ ಚಿಪ್ಸ್​​ ತಿಂದು 14ರ ಬಾಲಕ ಸಾವು

ಸೋಶಿಯಲ್​ ಮೀಡಿಯಾಗಳಲ್ಲಿ ಅತ್ಯಂತ ಟ್ರೆಂಡಿಂಗ್​ನಲ್ಲಿರುವ 'ಒನ್ ಚಿಪ್ ಚಾಲೆಂಜ್‌'ವೊಂದರಲ್ಲಿ ಭಾಗವಹಿಸಿದ್ದ ಬಾಲಕ. ಈ ಚಾಲೆಂಜ್​ ಮೂಲಕ ಅತ್ಯಂತ ಖಾರದ ಚಿಪ್ಸ್​​ ತಿಂದ ಪರಿಣಾಮ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯ ಸ್ತಂಭನದಿಂದ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಘೋಪಿಸಿದ್ದಾರೆ.

Spicy Chip: ಅತ್ಯಂತ ಖಾರದ ಚಿಪ್ಸ್​​ ತಿಂದು 14ರ ಬಾಲಕ ಸಾವು
ಅಕ್ಷತಾ ವರ್ಕಾಡಿ
|

Updated on: May 17, 2024 | 12:51 PM

Share

ವಿಶ್ವದ ಅತ್ಯಂತ ಖಾರವಾದ ಚಿಪ್ಸ್​​​ ತಿಂದು 14ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಇಂಗ್ಲೆಂಡ್‌ನ ವೋರ್ಸೆಸ್ಟರ್ ನಗರದಲ್ಲಿ ನಡೆದಿದೆ. ಮೃತ ಬಾಲಕ ಹ್ಯಾರಿಸ್ ವೊಲೊಬಾಹ್(14) ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್ದು, ಇದೀಗ ರೀಲ್ಸ್​​ ಹುಚ್ಚು ಆತನ ಪ್ರಾಣವನ್ನೇ ತೆಗೆದಿದೆ. ಸೋಶಿಯಲ್​ ಮೀಡಿಯಾಗಳಲ್ಲಿ ಅತ್ಯಂತ ಟ್ರೆಂಡಿಂಗ್​​ನಲ್ಲಿದ್ದ ‘ಒನ್ ಚಿಪ್ ಚಾಲೆಂಜ್‌’ವೊಂದರಲ್ಲಿ ಭಾಗವಹಿಸಿದ್ದ ಬಾಲಕ. ಈ ಚಾಲೆಂಜ್​ ಮೂಲಕ ಅತ್ಯಂತ ಖಾರದ ಚಿಪ್ಸ್​​ ತಿಂದ ಪರಿಣಾಮ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯ ಸ್ತಂಭನದಿಂದ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಘೋಪಿಸಿದ್ದಾರೆ.

ಏನಿದು’ಒನ್ ಚಿಪ್ ಚಾಲೆಂಜ್‌’?

ಚಿಪ್ಸ್​​ ಬ್ರಾಂಡ್​​ ಒಂದು ವಿಶ್ವದಲ್ಲೇ ಅತ್ಯಂತ ಖಾರವಾದ ಚಿಪ್​ಸ್​​​​​​​ ಅನ್ನು ತಯಾರಿಸಿದ್ದು, ಇದನ್ನು ಖರೀದಿಸಿ ತಿನ್ನಲು ಚಾಲೆಂಜ್​​ವೊಂದನ್ನು ನೀಡುತ್ತಿದೆ. ಈ ಚಿಪ್ಸ್​​ ಖರೀದಿಸಿ ತಿನ್ನಿ, ಈ ಮೂಲಕ ನಿಮ್ಮ ರಿಯಕ್ಷನ್​​​ ಅನ್ನು ವಿಡಿಯೋ ಮಾಡಿ, ನಮ್ಮನ್ನು ಟ್ಯಾಗ್​ ಮಾಡಿ ಸೋಶಿಯಲ್​​ ಮೀಡಿಯಾದಲ್ಲಿ ಅಪ್ಲೋಡ್ ಮಾಡಿ ಎಂಬ ಚಾಲೆಂಜನ್ನು ನೀಡುತ್ತಿದೆ.

ಇದನ್ನೂ ಓದಿ: ಚಲಿಸುತ್ತಿರುವ ರೈಲಿನಲ್ಲಿ ಪತ್ನಿಗೆ ತ್ರಿವಳಿ ತಲಾಖ್ ನೀಡಿ, ಥಳಿಸಿ ಪರಾರಿಯಾದ ಪತಿ

ಟ್ರೆಂಡಿಂಗ್​ನಲ್ಲಿದ್ದ ಈ ಚಾಲೆಂಜನ್ನು ಬಾಲಕ ಸ್ವೀಕರಿಸಿದ್ದು, ಅತ್ಯಂತ ಖಾರದವಾದ ಚಿಪ್ಸ್​​ ಅನ್ನು ತಿಂದಿದ್ದಾನೆ. ಕೆಲ ಹೊತ್ತಿನಲ್ಲೇ ಬಾಲಕನ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಿದ ಕೆಲ ಹೊತ್ತಿನಲ್ಲೇ ಸಾವನ್ನಪ್ಪಿದ್ದಾನೆ. ಅಸೋಸಿಯೇಟೆಡ್ ಪ್ರೆಸ್ ಪಡೆದ ಶವಪರೀಕ್ಷೆ ವರದಿಯ ಪ್ರಕಾರ , ಸಾಮಾಜಿಕ ಮಾಧ್ಯಮದಲ್ಲಿ ಮಸಾಲೆಯುಕ್ತ ಟೋರ್ಟಿಲ್ಲಾ ಚಿಪ್ ಚಾಲೆಂಜ್‌ನಲ್ಲಿ ಭಾಗವಹಿಸಿದ ಬಾಲಕ ಹೆಚ್ಚಿನ ಪ್ರಮಾಣದ ಖಾರವನ್ನು ಸೇವಿಸುವುದರಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?