AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spicy Chip: ಅತ್ಯಂತ ಖಾರದ ಚಿಪ್ಸ್​​ ತಿಂದು 14ರ ಬಾಲಕ ಸಾವು

ಸೋಶಿಯಲ್​ ಮೀಡಿಯಾಗಳಲ್ಲಿ ಅತ್ಯಂತ ಟ್ರೆಂಡಿಂಗ್​ನಲ್ಲಿರುವ 'ಒನ್ ಚಿಪ್ ಚಾಲೆಂಜ್‌'ವೊಂದರಲ್ಲಿ ಭಾಗವಹಿಸಿದ್ದ ಬಾಲಕ. ಈ ಚಾಲೆಂಜ್​ ಮೂಲಕ ಅತ್ಯಂತ ಖಾರದ ಚಿಪ್ಸ್​​ ತಿಂದ ಪರಿಣಾಮ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯ ಸ್ತಂಭನದಿಂದ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಘೋಪಿಸಿದ್ದಾರೆ.

Spicy Chip: ಅತ್ಯಂತ ಖಾರದ ಚಿಪ್ಸ್​​ ತಿಂದು 14ರ ಬಾಲಕ ಸಾವು
ಅಕ್ಷತಾ ವರ್ಕಾಡಿ
|

Updated on: May 17, 2024 | 12:51 PM

Share

ವಿಶ್ವದ ಅತ್ಯಂತ ಖಾರವಾದ ಚಿಪ್ಸ್​​​ ತಿಂದು 14ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಇಂಗ್ಲೆಂಡ್‌ನ ವೋರ್ಸೆಸ್ಟರ್ ನಗರದಲ್ಲಿ ನಡೆದಿದೆ. ಮೃತ ಬಾಲಕ ಹ್ಯಾರಿಸ್ ವೊಲೊಬಾಹ್(14) ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್ದು, ಇದೀಗ ರೀಲ್ಸ್​​ ಹುಚ್ಚು ಆತನ ಪ್ರಾಣವನ್ನೇ ತೆಗೆದಿದೆ. ಸೋಶಿಯಲ್​ ಮೀಡಿಯಾಗಳಲ್ಲಿ ಅತ್ಯಂತ ಟ್ರೆಂಡಿಂಗ್​​ನಲ್ಲಿದ್ದ ‘ಒನ್ ಚಿಪ್ ಚಾಲೆಂಜ್‌’ವೊಂದರಲ್ಲಿ ಭಾಗವಹಿಸಿದ್ದ ಬಾಲಕ. ಈ ಚಾಲೆಂಜ್​ ಮೂಲಕ ಅತ್ಯಂತ ಖಾರದ ಚಿಪ್ಸ್​​ ತಿಂದ ಪರಿಣಾಮ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯ ಸ್ತಂಭನದಿಂದ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಘೋಪಿಸಿದ್ದಾರೆ.

ಏನಿದು’ಒನ್ ಚಿಪ್ ಚಾಲೆಂಜ್‌’?

ಚಿಪ್ಸ್​​ ಬ್ರಾಂಡ್​​ ಒಂದು ವಿಶ್ವದಲ್ಲೇ ಅತ್ಯಂತ ಖಾರವಾದ ಚಿಪ್​ಸ್​​​​​​​ ಅನ್ನು ತಯಾರಿಸಿದ್ದು, ಇದನ್ನು ಖರೀದಿಸಿ ತಿನ್ನಲು ಚಾಲೆಂಜ್​​ವೊಂದನ್ನು ನೀಡುತ್ತಿದೆ. ಈ ಚಿಪ್ಸ್​​ ಖರೀದಿಸಿ ತಿನ್ನಿ, ಈ ಮೂಲಕ ನಿಮ್ಮ ರಿಯಕ್ಷನ್​​​ ಅನ್ನು ವಿಡಿಯೋ ಮಾಡಿ, ನಮ್ಮನ್ನು ಟ್ಯಾಗ್​ ಮಾಡಿ ಸೋಶಿಯಲ್​​ ಮೀಡಿಯಾದಲ್ಲಿ ಅಪ್ಲೋಡ್ ಮಾಡಿ ಎಂಬ ಚಾಲೆಂಜನ್ನು ನೀಡುತ್ತಿದೆ.

ಇದನ್ನೂ ಓದಿ: ಚಲಿಸುತ್ತಿರುವ ರೈಲಿನಲ್ಲಿ ಪತ್ನಿಗೆ ತ್ರಿವಳಿ ತಲಾಖ್ ನೀಡಿ, ಥಳಿಸಿ ಪರಾರಿಯಾದ ಪತಿ

ಟ್ರೆಂಡಿಂಗ್​ನಲ್ಲಿದ್ದ ಈ ಚಾಲೆಂಜನ್ನು ಬಾಲಕ ಸ್ವೀಕರಿಸಿದ್ದು, ಅತ್ಯಂತ ಖಾರದವಾದ ಚಿಪ್ಸ್​​ ಅನ್ನು ತಿಂದಿದ್ದಾನೆ. ಕೆಲ ಹೊತ್ತಿನಲ್ಲೇ ಬಾಲಕನ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಿದ ಕೆಲ ಹೊತ್ತಿನಲ್ಲೇ ಸಾವನ್ನಪ್ಪಿದ್ದಾನೆ. ಅಸೋಸಿಯೇಟೆಡ್ ಪ್ರೆಸ್ ಪಡೆದ ಶವಪರೀಕ್ಷೆ ವರದಿಯ ಪ್ರಕಾರ , ಸಾಮಾಜಿಕ ಮಾಧ್ಯಮದಲ್ಲಿ ಮಸಾಲೆಯುಕ್ತ ಟೋರ್ಟಿಲ್ಲಾ ಚಿಪ್ ಚಾಲೆಂಜ್‌ನಲ್ಲಿ ಭಾಗವಹಿಸಿದ ಬಾಲಕ ಹೆಚ್ಚಿನ ಪ್ರಮಾಣದ ಖಾರವನ್ನು ಸೇವಿಸುವುದರಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ