AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spicy Chip: ಅತ್ಯಂತ ಖಾರದ ಚಿಪ್ಸ್​​ ತಿಂದು 14ರ ಬಾಲಕ ಸಾವು

ಸೋಶಿಯಲ್​ ಮೀಡಿಯಾಗಳಲ್ಲಿ ಅತ್ಯಂತ ಟ್ರೆಂಡಿಂಗ್​ನಲ್ಲಿರುವ 'ಒನ್ ಚಿಪ್ ಚಾಲೆಂಜ್‌'ವೊಂದರಲ್ಲಿ ಭಾಗವಹಿಸಿದ್ದ ಬಾಲಕ. ಈ ಚಾಲೆಂಜ್​ ಮೂಲಕ ಅತ್ಯಂತ ಖಾರದ ಚಿಪ್ಸ್​​ ತಿಂದ ಪರಿಣಾಮ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯ ಸ್ತಂಭನದಿಂದ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಘೋಪಿಸಿದ್ದಾರೆ.

Spicy Chip: ಅತ್ಯಂತ ಖಾರದ ಚಿಪ್ಸ್​​ ತಿಂದು 14ರ ಬಾಲಕ ಸಾವು
ಅಕ್ಷತಾ ವರ್ಕಾಡಿ
|

Updated on: May 17, 2024 | 12:51 PM

Share

ವಿಶ್ವದ ಅತ್ಯಂತ ಖಾರವಾದ ಚಿಪ್ಸ್​​​ ತಿಂದು 14ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಇಂಗ್ಲೆಂಡ್‌ನ ವೋರ್ಸೆಸ್ಟರ್ ನಗರದಲ್ಲಿ ನಡೆದಿದೆ. ಮೃತ ಬಾಲಕ ಹ್ಯಾರಿಸ್ ವೊಲೊಬಾಹ್(14) ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್ದು, ಇದೀಗ ರೀಲ್ಸ್​​ ಹುಚ್ಚು ಆತನ ಪ್ರಾಣವನ್ನೇ ತೆಗೆದಿದೆ. ಸೋಶಿಯಲ್​ ಮೀಡಿಯಾಗಳಲ್ಲಿ ಅತ್ಯಂತ ಟ್ರೆಂಡಿಂಗ್​​ನಲ್ಲಿದ್ದ ‘ಒನ್ ಚಿಪ್ ಚಾಲೆಂಜ್‌’ವೊಂದರಲ್ಲಿ ಭಾಗವಹಿಸಿದ್ದ ಬಾಲಕ. ಈ ಚಾಲೆಂಜ್​ ಮೂಲಕ ಅತ್ಯಂತ ಖಾರದ ಚಿಪ್ಸ್​​ ತಿಂದ ಪರಿಣಾಮ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯ ಸ್ತಂಭನದಿಂದ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಘೋಪಿಸಿದ್ದಾರೆ.

ಏನಿದು’ಒನ್ ಚಿಪ್ ಚಾಲೆಂಜ್‌’?

ಚಿಪ್ಸ್​​ ಬ್ರಾಂಡ್​​ ಒಂದು ವಿಶ್ವದಲ್ಲೇ ಅತ್ಯಂತ ಖಾರವಾದ ಚಿಪ್​ಸ್​​​​​​​ ಅನ್ನು ತಯಾರಿಸಿದ್ದು, ಇದನ್ನು ಖರೀದಿಸಿ ತಿನ್ನಲು ಚಾಲೆಂಜ್​​ವೊಂದನ್ನು ನೀಡುತ್ತಿದೆ. ಈ ಚಿಪ್ಸ್​​ ಖರೀದಿಸಿ ತಿನ್ನಿ, ಈ ಮೂಲಕ ನಿಮ್ಮ ರಿಯಕ್ಷನ್​​​ ಅನ್ನು ವಿಡಿಯೋ ಮಾಡಿ, ನಮ್ಮನ್ನು ಟ್ಯಾಗ್​ ಮಾಡಿ ಸೋಶಿಯಲ್​​ ಮೀಡಿಯಾದಲ್ಲಿ ಅಪ್ಲೋಡ್ ಮಾಡಿ ಎಂಬ ಚಾಲೆಂಜನ್ನು ನೀಡುತ್ತಿದೆ.

ಇದನ್ನೂ ಓದಿ: ಚಲಿಸುತ್ತಿರುವ ರೈಲಿನಲ್ಲಿ ಪತ್ನಿಗೆ ತ್ರಿವಳಿ ತಲಾಖ್ ನೀಡಿ, ಥಳಿಸಿ ಪರಾರಿಯಾದ ಪತಿ

ಟ್ರೆಂಡಿಂಗ್​ನಲ್ಲಿದ್ದ ಈ ಚಾಲೆಂಜನ್ನು ಬಾಲಕ ಸ್ವೀಕರಿಸಿದ್ದು, ಅತ್ಯಂತ ಖಾರದವಾದ ಚಿಪ್ಸ್​​ ಅನ್ನು ತಿಂದಿದ್ದಾನೆ. ಕೆಲ ಹೊತ್ತಿನಲ್ಲೇ ಬಾಲಕನ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಿದ ಕೆಲ ಹೊತ್ತಿನಲ್ಲೇ ಸಾವನ್ನಪ್ಪಿದ್ದಾನೆ. ಅಸೋಸಿಯೇಟೆಡ್ ಪ್ರೆಸ್ ಪಡೆದ ಶವಪರೀಕ್ಷೆ ವರದಿಯ ಪ್ರಕಾರ , ಸಾಮಾಜಿಕ ಮಾಧ್ಯಮದಲ್ಲಿ ಮಸಾಲೆಯುಕ್ತ ಟೋರ್ಟಿಲ್ಲಾ ಚಿಪ್ ಚಾಲೆಂಜ್‌ನಲ್ಲಿ ಭಾಗವಹಿಸಿದ ಬಾಲಕ ಹೆಚ್ಚಿನ ಪ್ರಮಾಣದ ಖಾರವನ್ನು ಸೇವಿಸುವುದರಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ