AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spicy Chip: ಅತ್ಯಂತ ಖಾರದ ಚಿಪ್ಸ್​​ ತಿಂದು 14ರ ಬಾಲಕ ಸಾವು

ಸೋಶಿಯಲ್​ ಮೀಡಿಯಾಗಳಲ್ಲಿ ಅತ್ಯಂತ ಟ್ರೆಂಡಿಂಗ್​ನಲ್ಲಿರುವ 'ಒನ್ ಚಿಪ್ ಚಾಲೆಂಜ್‌'ವೊಂದರಲ್ಲಿ ಭಾಗವಹಿಸಿದ್ದ ಬಾಲಕ. ಈ ಚಾಲೆಂಜ್​ ಮೂಲಕ ಅತ್ಯಂತ ಖಾರದ ಚಿಪ್ಸ್​​ ತಿಂದ ಪರಿಣಾಮ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯ ಸ್ತಂಭನದಿಂದ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಘೋಪಿಸಿದ್ದಾರೆ.

Spicy Chip: ಅತ್ಯಂತ ಖಾರದ ಚಿಪ್ಸ್​​ ತಿಂದು 14ರ ಬಾಲಕ ಸಾವು
ಅಕ್ಷತಾ ವರ್ಕಾಡಿ
|

Updated on: May 17, 2024 | 12:51 PM

Share

ವಿಶ್ವದ ಅತ್ಯಂತ ಖಾರವಾದ ಚಿಪ್ಸ್​​​ ತಿಂದು 14ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಇಂಗ್ಲೆಂಡ್‌ನ ವೋರ್ಸೆಸ್ಟರ್ ನಗರದಲ್ಲಿ ನಡೆದಿದೆ. ಮೃತ ಬಾಲಕ ಹ್ಯಾರಿಸ್ ವೊಲೊಬಾಹ್(14) ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್ದು, ಇದೀಗ ರೀಲ್ಸ್​​ ಹುಚ್ಚು ಆತನ ಪ್ರಾಣವನ್ನೇ ತೆಗೆದಿದೆ. ಸೋಶಿಯಲ್​ ಮೀಡಿಯಾಗಳಲ್ಲಿ ಅತ್ಯಂತ ಟ್ರೆಂಡಿಂಗ್​​ನಲ್ಲಿದ್ದ ‘ಒನ್ ಚಿಪ್ ಚಾಲೆಂಜ್‌’ವೊಂದರಲ್ಲಿ ಭಾಗವಹಿಸಿದ್ದ ಬಾಲಕ. ಈ ಚಾಲೆಂಜ್​ ಮೂಲಕ ಅತ್ಯಂತ ಖಾರದ ಚಿಪ್ಸ್​​ ತಿಂದ ಪರಿಣಾಮ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯ ಸ್ತಂಭನದಿಂದ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಘೋಪಿಸಿದ್ದಾರೆ.

ಏನಿದು’ಒನ್ ಚಿಪ್ ಚಾಲೆಂಜ್‌’?

ಚಿಪ್ಸ್​​ ಬ್ರಾಂಡ್​​ ಒಂದು ವಿಶ್ವದಲ್ಲೇ ಅತ್ಯಂತ ಖಾರವಾದ ಚಿಪ್​ಸ್​​​​​​​ ಅನ್ನು ತಯಾರಿಸಿದ್ದು, ಇದನ್ನು ಖರೀದಿಸಿ ತಿನ್ನಲು ಚಾಲೆಂಜ್​​ವೊಂದನ್ನು ನೀಡುತ್ತಿದೆ. ಈ ಚಿಪ್ಸ್​​ ಖರೀದಿಸಿ ತಿನ್ನಿ, ಈ ಮೂಲಕ ನಿಮ್ಮ ರಿಯಕ್ಷನ್​​​ ಅನ್ನು ವಿಡಿಯೋ ಮಾಡಿ, ನಮ್ಮನ್ನು ಟ್ಯಾಗ್​ ಮಾಡಿ ಸೋಶಿಯಲ್​​ ಮೀಡಿಯಾದಲ್ಲಿ ಅಪ್ಲೋಡ್ ಮಾಡಿ ಎಂಬ ಚಾಲೆಂಜನ್ನು ನೀಡುತ್ತಿದೆ.

ಇದನ್ನೂ ಓದಿ: ಚಲಿಸುತ್ತಿರುವ ರೈಲಿನಲ್ಲಿ ಪತ್ನಿಗೆ ತ್ರಿವಳಿ ತಲಾಖ್ ನೀಡಿ, ಥಳಿಸಿ ಪರಾರಿಯಾದ ಪತಿ

ಟ್ರೆಂಡಿಂಗ್​ನಲ್ಲಿದ್ದ ಈ ಚಾಲೆಂಜನ್ನು ಬಾಲಕ ಸ್ವೀಕರಿಸಿದ್ದು, ಅತ್ಯಂತ ಖಾರದವಾದ ಚಿಪ್ಸ್​​ ಅನ್ನು ತಿಂದಿದ್ದಾನೆ. ಕೆಲ ಹೊತ್ತಿನಲ್ಲೇ ಬಾಲಕನ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಿದ ಕೆಲ ಹೊತ್ತಿನಲ್ಲೇ ಸಾವನ್ನಪ್ಪಿದ್ದಾನೆ. ಅಸೋಸಿಯೇಟೆಡ್ ಪ್ರೆಸ್ ಪಡೆದ ಶವಪರೀಕ್ಷೆ ವರದಿಯ ಪ್ರಕಾರ , ಸಾಮಾಜಿಕ ಮಾಧ್ಯಮದಲ್ಲಿ ಮಸಾಲೆಯುಕ್ತ ಟೋರ್ಟಿಲ್ಲಾ ಚಿಪ್ ಚಾಲೆಂಜ್‌ನಲ್ಲಿ ಭಾಗವಹಿಸಿದ ಬಾಲಕ ಹೆಚ್ಚಿನ ಪ್ರಮಾಣದ ಖಾರವನ್ನು ಸೇವಿಸುವುದರಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ