AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೃಷ್ಣ ಭಕ್ತರೊಂದಿಗೆ ಕುಣಿದ ಸ್ಪೈಡರ್ ಮ್ಯಾನ್ 

ಪ್ರಪಂಚದಾದ್ಯಂತ ಸ್ಪೈಡರ್ ಮ್ಯಾನ್ ಅನ್ನು ಇಷ್ಟ ಪಡುವವರು ಹಲವರಿದ್ದಾರೆ. ಅದರಲ್ಲೂ ಅನೇಕರು ಸ್ಪೈಡರ್ ಮ್ಯಾನ್ ವೇಷ ಧರಿಸಿ ಹಲವಾರು ಸಾಹಸಗಳನ್ನು ಮಾಡುತ್ತಿರುತ್ತಾರೆ. ಇಂತಹ ಸಾಹಸಿ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಆದರೆ ನೀವು ಎಂದಾದರೂ ಸ್ಪೈಡರ್ ಮ್ಯಾನ್ ಶ್ರೀಕೃಷ್ಣನ ಸಂಕೀರ್ತನೆಗೆ ನೃತ್ಯ ಮಾಡಿದ್ದನ್ನು ನೋಡಿದ್ದೀರಾ?  ಇಲ್ಲೊಬ್ಬ ಸ್ಪೈಡರ್ ಮ್ಯಾನ್ ವೇಷಧಾರಿ ಶ್ರೀ ಕೃಷ್ಣನ ಭಕ್ತರೊಂದಿಗೆ  ಸೇರಿಕೊಂಡು ʼಹರೇ ಕೃಷ್ಣ ಹರೇ ರಾಮʼ ಸಂಕೀರ್ತನೆಗೆ ಸಂತೋಷದಿಂದ ನೃತ್ಯ ಮಾಡಿದ್ದು, ಸದ್ಯ ಈ ವೀಡಿಯೋ  ಎಲ್ಲರ ಗಮನ ಸೆಳೆದಿದೆ.

Viral Video: ಕೃಷ್ಣ ಭಕ್ತರೊಂದಿಗೆ ಕುಣಿದ ಸ್ಪೈಡರ್ ಮ್ಯಾನ್ 
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Nov 18, 2023 | 2:56 PM

Share

ಭಾರತದಲ್ಲಿ ಮಾತ್ರವಲ್ಲದೆ ಶ್ರೀ ಕೃಷ್ಣನನ್ನು ಆರಾಧನೆ ಮಾಡುವ ಭಕ್ತವೃಂದ ಈ ಜಗತ್ತಿನೆಲ್ಲೆಡೆ ಇದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಂತೂ  ಭಾರತೀಯ ಸಂಸ್ಕೃತಿ,  ಹಿಂದೂ ಧರ್ಮದ  ಆರಾಧನೆಯ ಕಡೆಗೆ ವಿದೇಶಿಯರು ಹೆಚ್ಚು ಆಕರ್ಷಿತರಾಗಿದ್ದಾರೆ.  ಭಾರತೀಯ ಶಾಸ್ತ್ರ ಸಂಪ್ರದಾಯದ ಪ್ರಕಾರ ವಿವಾಹ ಆಗುವಂತಹ, ಹಿಂದೂ ದೇವರ ಆರಾಧನೆಯಲ್ಲಿ ತೊಡಗಿರುವ ಅನೇಕ ವಿದೇಶಿಗರ ಕುರಿತ ಸುದ್ದಿಗಳು, ವೀಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುತ್ತವೆ. ಅದರಲ್ಲೂ ವಿಶೇಷವಾಗಿ ಕೃಷ್ಣ ನಾಮ ಜಪವನ್ನು ಮಾಡುತ್ತಾ, ಶ್ರೀ ಕೃಷ್ಣನ ಭಜನಾ ಸಂಕೀರ್ತನೆಗಳನ್ನು ಹಾಡುತ್ತಾ,  ವಿದೇಶಗಳ ನಗರದ ಬೀದಿಗಳಲ್ಲಿ ಓಡಾಡುವ ಶ್ರೀಕೃಷ್ಣನ ಭಕ್ತವೃಂದದವರ ವಿಡೀಯೋಗಳು ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುವುದನ್ನು ನಾವು ನೋಡಿರುತ್ತೇವೆ.  ಆದರೆ ನೀವು ಎಂದಾದರೂ ಶ್ರೀ ಕೃಷ್ಣನ ಸಂಕೀರ್ತನೆಗೆ  ಸ್ಪೈಡರ್ ಮ್ಯಾನ್ ನೃತ್ಯ ಮಾಡುವುದನ್ನು ನೋಡಿದ್ದೀರಾ? ಇಲ್ಲೊಬ್ಬ ಸ್ಪೈಡರ್ ಮ್ಯಾನ್ ವೇಶಧಾರಿ ಭಕ್ತರೊಂದಿಗೆ ಸೇರಿಕೊಂಡು ನ್ಯೂಯಾರ್ಕ್ ನಗರದ ಟೈಮ್ ಸ್ಕ್ವೇರ್ ಮುಂದೆ ʼಹರೇ ಕೃಷ್ಣ, ಹರೇ ರಾಮʼ ಸಂಕೀರ್ತನೆಗೆ ನೃತ್ಯ ಮಾಡಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ,  ನ್ಯೂಯಾರ್ಕ್ ನಗರದ ಟೈಮ್ ಸ್ಕ್ವೇರ್ ಮುಂದೆ ಶ್ರೀ ಕೃಷ್ಣನ ಭಕ್ತರ ಜೊತೆಗೂಡಿ ಸ್ಪೈಡರ್ ಮ್ಯಾನ್ ವೇಷಧಾರಿಯೊಬ್ಬ ಹರೇ ಕೃಷ್ಣ, ಹರೇ ರಾಮʼ ಭಜನಾ ಸಂಕೀರ್ತನೆಗೆ ಭಕ್ತಿಪೂರ್ವಕವಾಗಿ ನೃತ್ಯ ಮಾಡುವುದನ್ನು ಕಾಣಬಹುದು. ನಗರದ ಟೈಮ್ಸ್ ಸ್ಕ್ವೇರ್ ಮುಂದೆ ಅಲ್ಲಿನ  ಶ್ರೀಕೃಷ್ಣನ ಭಕ್ತವೃಂದದವರು “ಹರೇ ಕೃಷ್ಣ, ಹರೇ ರಾಮ” ಸಂಕೀರ್ತನೆಯನ್ನು ಹಾಡುತ್ತಾ, ನೃತ್ಯ ಮಾಡುತ್ತಾ ಕೃಷ್ಣನ ಧ್ಯಾನದಲ್ಲಿ ತಲ್ಲೀಣರಾಗಿರುತ್ತಾರೆ. ಅಷ್ಟರಲ್ಲಿ ಅಲ್ಲಿಗೆ ಬಂದ ಸ್ಪೈಡರ್ ಮ್ಯಾನ್ ವೇಷಧಾರಿಯೊಬ್ಬ, ಈ ಭಕ್ತರೊಂದಿಗೆ ಸೇರಿಕೊಂಡು ಶ್ರೀ ಕೃಷ್ಣನ ಸಂಕೀರ್ತನೆಗೆ ತಾನು ಕೂಡಾ ಭಕ್ತಿಪೂರ್ವಕವಾಗಿ ಸಂತೋಷದಿಂದ  ನೃತ್ಯ ಮಾಡುತ್ತಾನೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸ್ಪೈಡರ್ ಮ್ಯಾನ್ ನೃತ್ಯ ಎಲ್ಲರ ಗಮನ ಸೆಳೆದಿದೆ.

ಇದನ್ನೂ ಓದಿ:  ಅರ್ಧ ತೆಂಗಿನಕಾಯಿ, ಒಂದು ಸೇಬು ಮತ್ತು ಒಂದು ಬಾಳೆಯ ಮೌಲ್ಯ ಎಷ್ಟು?

ವಿಡಿಯೋ  ನೋಡಲು ಇಲ್ಲಿ ಕ್ಲಿಕ್ ಮಾಡಿ

ಈ ವೈರಲ್ ವೀಡಿಯೋವನ್ನು  @atl_sankirtan ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, 1 ಮಿಲಿಯನ್ ವೀಕ್ಷಣೆಗಳನ್ನು  ಹಾಗೂ 116K ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಇನ್ನೂ ಸ್ಪೈಡರ್ ಮ್ಯಾನ್ನ  ಕೃಷ್ಣ ಭಕ್ತಿಗೆ ಹಲವರು ಮನಸೋತಿದ್ದಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ