Viral Video: ಚೀನಾದಲ್ಲಿ ಮಕ್ಕಳಿಗೆ ಕ್ರೀಡಾ ತರಬೇತಿ ಹೇಗಿರುತ್ತದೆ ಗೊತ್ತಾ? ಇಲ್ಲಿ ನೋಡಿ

ಚೀನಾದ ಶಾಲೆಯೊಂದು ತಮ್ಮ ವಿದ್ಯಾರ್ಥಿಗಳಿಗೆ ಅಥ್ಲೆಟಿಕ್ ಸಾಮರ್ಥ್ಯವನ್ನು ಹೇಗೆ ಅಭಿವೃದ್ಧಿಪಡಿಸುತ್ತದೆ ಎಂಬುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ವಿಡಿಯೋ 69ಸಾವಿರ ಲೈಕ್ಸ್​ಗಳನ್ನು ಪಡೆದುಕೊಂಡಿದೆ.

Viral Video: ಚೀನಾದಲ್ಲಿ ಮಕ್ಕಳಿಗೆ ಕ್ರೀಡಾ ತರಬೇತಿ ಹೇಗಿರುತ್ತದೆ ಗೊತ್ತಾ? ಇಲ್ಲಿ ನೋಡಿ
ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿ
Follow us
| Updated By: Rakesh Nayak Manchi

Updated on:Jun 06, 2022 | 6:53 PM

ಒಲಿಂಪಿಕ್ಸ್‌ನಂತಹ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಅತಿ ಹೆಚ್ಚು ಪದಕಗಳನ್ನು ಗಳಿಸಿದ ಅಗ್ರ ರಾಷ್ಟ್ರಗಳಲ್ಲಿ ಚೀನಾ ಕೂಡ ಒಂದು. ಇದಕ್ಕೆ ಕಾರಣ ಚೀನಾದಲ್ಲಿನ ತರಬೇತಿ. ಚಿಕ್ಕ ಮಕ್ಕಳಿರುವಾಗಲೇ ಕ್ರೀಡಾ ತರಬೇತಿ (Sports Coaching) ನೀಡಲಾಗುತ್ತದೆ. ಇತ್ತೀಚೆಗೆ ಚೀನಾದ ಶಾಲೆಯೊಂದು ತಮ್ಮ ವಿದ್ಯಾರ್ಥಿಗಳಿಗೆ ಅಥ್ಲೆಟಿಕ್ ಸಾಮರ್ಥ್ಯವನ್ನು ಹೇಗೆ ಅಭಿವೃದ್ಧಿಪಡಿಸುತ್ತದೆ ಎಂಬುದನ್ನು ತೋರಿಸುವ ವೀಡಿಯೊ (Video) ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral) ಆಗುತ್ತಿದೆ.

ಇದನ್ನೂ ಓದಿ: ಒಟ್ಟಿಗೆ ಕಾಣಿಸಿಕೊಂಡ ಸಮಂತಾ ಮತ್ತು ರಣವೀರ್ ಸಿಂಗ್​​; ವೈರಲ್ ಆಯ್ತು ಫೋಟೋ

ವೀಡಿಯೊದಲ್ಲಿ ನೋಡುವಂತೆ, ಸುಮಾರು ಐದರಿಂದ ಆರು ವರ್ಷ ವಯಸ್ಸಿನ ಚಿಕ್ಕ ಮಕ್ಕಳು ತಮ್ಮ ಕಾಲುಗಳಿಗೆ ವ್ಯಾಯಾಮ ನೀಡುವುದರ ಜೊತೆಗೆ ತಮ್ಮ ದೇಹವನ್ನು ಪರಿಪೂರ್ಣ ಸಮನ್ವಯದಲ್ಲಿ ಚಲಿಸುವಾಗ ಎರಡೂ ಕೈಗಳಿಂದ ಎರಡು ಚೆಂಡುಗಳನ್ನು ನೆಲಕ್ಕೆ ಹೊಡೆಯುವುದನ್ನು ಕಾಣಬಹುದು.

ಇದನ್ನೂ ಓದಿ: ಕಾರಿನಲ್ಲಿ ಮಹಿಳೆಯೊಂದಿಗೆ ಅಸ್ವಾಭಾವಿಕವಾಗಿ ನಡೆದುಕೊಳ್ಳುತ್ತಾ ಟ್ರಕ್​ಗೆ ಡಿಕ್ಕಿ ಹೊಡೆದ ಭೂಪ!

ಭಾನುವಾರದಂದು 15 ಸೆಕೆಂಡುಗಳ ವಿಡಿಯೋ ಕ್ಲಿಪ್ ಅನ್ನು ಮಾಜಿ ನಾರ್ವೇಜಿಯನ್ ರಾಜತಾಂತ್ರಿಕ ಎರಿಕ್ ಸೋಲ್ಹೈಮ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ವಾವ್! ಶಿಶುವಿಹಾರದ ದೈಹಿಕ ಶಿಕ್ಷಣ ವರ್ಗ” ಎಂದು ಶೀರ್ಷಿಕೆಯನ್ನೂ ಬರೆದುಕೊಂಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ 69,000 ಲೈಕ್‌ಗಳು ಬಂದಿವೆ.

ಇದನ್ನೂ ಓದಿ: Trending: ಈ ಚಿತ್ರ ನೋಡಿ ನಿಮ್ಮ ವ್ಯಕ್ತಿತ್ವ ತಿಳಿದುಕೊಳ್ಳಿ

ವಿಡಿಯೋ ವೀಕ್ಷಣೆ ಮಾಡಿದ ನೆಟ್ಟಿಗರು, ”ಇಂಥ ತರಬೇತಿ ಎಲ್ಲಾ ಶಾಲೆಗಳಲ್ಲಿ ಮಾಡಿದರೆ ಒಳ್ಳೆಯದು”, ”ಅದಕ್ಕಾಗಿಯೇ ಅವರು ಸ್ವಯಂ ಶಿಸ್ತು, ಬುದ್ಧಿವಂತಿಕೆಯನ್ನು ಹೊಂದಿದ್ದಾರೆ”, ”ಚೀನಾ ಒಲಿಂಪಿಕ್ಸ್​ನಲ್ಲಿ ಪದಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಲು ಇದೇ ಕಾರಣ” ಎಂಬಿತ್ಯಾದಿ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:52 pm, Mon, 6 June 22

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ