AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಷಕಾರಿ ಸರ್ಪದೊಂದಿಗೆ ಗೆಳೆಯನಿಗಾಗಿ ಹೋರಾಟ ಮಾಡಿದ ಅಳಿಲು , ಮುಂದೇನಾಯ್ತು ನೋಡಿ

ಪ್ರಾಣಿ   ಸಾಮ್ರಾಜ್ಯಕ್ಕೆ ಸಂಬಂಧಿಸಿದ ಭಾವನಾತ್ಮಕ, ಹಾಸ್ಯಮಯ  ವಿಡಿಯೋಗಳು ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಇದೀಗ ಅದೇ ರೀತಿಯ ಹೃದಯಸ್ಪರ್ಶಿ ವಿಡಿಯೋವೊಂದು ವೈರಲ್ ಆಗಿದ್ದು,  ಪುಟ್ಟ ಅಳಿಲೊಂದು ವಿಷಕಾರಿ ಹಾವಿನೊಂದಿಗೆ ಹೋರಾಡಿ ತನ್ನ ಗೆಳೆಯನ ಪ್ರಾಣವನ್ನು ರಕ್ಷಿಸಿದೆ.  ಈ ನಿಷ್ಕಲ್ಮಶ ಸ್ನೇಹ ನೋಡುಗರ   ಮನ ಗೆದ್ದಿದೆ.

Viral Video: ವಿಷಕಾರಿ ಸರ್ಪದೊಂದಿಗೆ ಗೆಳೆಯನಿಗಾಗಿ ಹೋರಾಟ ಮಾಡಿದ ಅಳಿಲು , ಮುಂದೇನಾಯ್ತು ನೋಡಿ
ಮಾಲಾಶ್ರೀ ಅಂಚನ್​
| Edited By: |

Updated on:Apr 17, 2024 | 11:55 AM

Share

ಈ ಕಾಲದಲ್ಲಿ ಮನುಷ್ಯ ಮಾನವೀಯತೆಯನ್ನೇ ಮರೆತಿದ್ದಾನೆ. ಅಪರಿಚಿತರು ಬಿಡಿ, ಕಷ್ಟದ ಕಾಲದಲ್ಲಿ ಸತ್ತರೆ ಸಾಯ್ಲಿ ಎನ್ನುತ್ತಾ ತಮ್ಮ ಆಪ್ತರ ಸಹಾಯಕ್ಕೂ ಹೋಗದ ಅದೆಷ್ಟೋ ಜನರಿದ್ದಾರೆ.  ಆದರೆ ಪ್ರಾಣಿ, ಪಕ್ಷಿಗಳಲ್ಲಿ ಮಾತ್ರ ನಿಷ್ಕಲ್ಮಶ ಸ್ನೇಹ, ಪ್ರೀತಿ, ಮಾನವೀಯತೆ ಇಂದಿಗೂ ಜೀವಂತವಾಗಿದೆ. ಇದಕ್ಕೆ ಸೂಕ್ತ ನಿದರ್ಶನದಂತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪುಟ್ಟ ಅಳಿಲೊಂದು ವಿಷಕಾರಿ ಹಾವಿನೊಂದಿಗೆ ಹೋರಾಡಿ ತನ್ನ ಜೀವದ ಗೆಳೆಯನ ಪ್ರಾಣವನ್ನು ರಕ್ಷಿಸಿದೆ. ಈ ನಿಷ್ಕಲ್ಮಶ ಸ್ನೇಹ ನೆಟ್ಟಿಗರ  ಮನ ಗೆದ್ದಿದೆ.

ಈ ವಿಡಿಯೋವನ್ನು @HumanityChad ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ವಿಷಕಾರಿ ಹಾವೊಂದು ಪುಟ್ಟ ಅಳಿಲನ್ನು ಬೇಟೆಯಾಡಲು ಮುಂದಾಗುತ್ತದೆ. ಅಷ್ಟರಲ್ಲಿ ತನ್ನ ಗೆಳೆಯ ಪ್ರಾಣಾಪಾಯದಲ್ಲಿ ಇದ್ದಾನೆ ಎಂದು ತಿಳಿದ ಇನ್ನೊಂದು ಅಳಿಲು, ಹಾವಿನ ಬಳಿ ಬಂದು ತನ್ನ ಪ್ರಾಣವನ್ನೂ ಲೆಕ್ಕಿಸದೆ, ವಿಷಕಾರಿ ಹಾವಿನೊಂದಿಗೆ ಹೋರಾಡಿ ಗೆಳೆಯನ ಪ್ರಾಣವನ್ನು ರಕ್ಷಿಸುವಂತಹ ಹೃದಯಸ್ಪರ್ಶಿ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವೈದ್ಯರ ಬಳಿ ಹೋಗಿ ತನ್ನ ಎರಡು ಬೆರಳುಗಳನ್ನು ಕತ್ತರಿಸುವಂತೆ ಹಠ ಹಿಡಿದ ವ್ಯಕ್ತಿ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ  20 ಸಾವಿರಕ್ಕೂ ಅಧಿಕ ಲೈಕ್ಸ್ ಗಳನ್ನು ಪಡೆದುಕೊಂಡಿದ್ದು,  ಸ್ವಾರ್ಥವಿಲ್ಲದ ಸ್ನೇಹ ಅಂದ್ರೆ ಇದಪ್ಪಾ ಎನ್ನುತ್ತಾ ಅಳಿಲುಗಳ ನಿಷ್ಕಲ್ಮಶ ಸ್ನೇಹಕ್ಕೆ ನೆಟ್ಟಿಗರು ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:15 pm, Mon, 15 April 24

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ