AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ದಿನಗಳ ಅಂತರದಲ್ಲಿ 18 ಜನರಿಗೆ ಕಚ್ಚಿ ಗಾಯಗೊಳಿಸಿದ ಅಳಿಲು

ಸ್ಥಳೀಯರು ಅಳಿಲಿನಿಂದ ಕಚ್ಚಿಸಿಕೊಂಡ, ಮೂಗೇಟಿನಂತಹ ಗಾಯಗಳ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಥಳೀಯರು ಹಂಚಿಕೊಂಡ ಫೋಟೋಗಳನ್ನು ನೋಡಿ ರೆನಾಲ್ಡ್​ ಕೂಡ ಚಿಂತಿತರಾಗಿದ್ದಾರೆ.

ಎರಡು ದಿನಗಳ ಅಂತರದಲ್ಲಿ 18 ಜನರಿಗೆ ಕಚ್ಚಿ ಗಾಯಗೊಳಿಸಿದ ಅಳಿಲು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 31, 2021 | 5:32 PM

Share

ಅಳಿಲು ಎಂದರೆ ಪಾಪದ ಜೀವಿ ಎಂದುಕೊಳ್ಳುತ್ತೇವೆ. ಆದರೆ ಅವುಗಳಲ್ಲೂ ದ್ವೇಷ ಸಾಧಿಸುವ ಗುಣವಿರುತ್ತದೆ. ಹೌದು ಉತ್ತರ ವೇಲ್ಸ್​ನಲ್ಲಿ ಅಳಿಲೊಂದು 2 ದಿನಗಳ ಅವಧಿಯಲ್ಲಿ 18 ಜನರಿಗೆ ಕಚ್ಚಿ ಗಾಯಗೊಳಿಸಿದ ಘಟನೆ ವರದಿಯಾಗಿದೆ.  ಅಳಿಲನ್ನು ಕೊರಿನ್ನೆ ರೆನಾಲ್ಡ್​ ಎನ್ನುವವರು ತನ್ನ ತೋಟದಲ್ಲಿ ಸಾಕಿದ್ದರು. ಕೆಲವು ದಿನಗಳ ಹಿಂದೆ ರೆನಾಲ್ಡ್​ಗೆ ಕೂಡ ಕೈಯಲ್ಲಿ ಆಹಾರ ನೀಡಿದ ವೇಳೆ ಕಚ್ಚಿದ್ದು, ನಂತರ ಕೆಳೆದ 2 ದಿನಗಳಿಂದ ಸ್ಥಳೀಯರ ಮೇಲೂ ದಾಳಿ ನಡೆಸುತ್ತಿದೆ. ಇದರಿಂದ ಜನ ಆತಂಕಗೊಂಡಿದ್ದಾರೆ. ಈ ಅಳಿಲಿಗೆ ಸ್ಟ್ರೈಪ್​ ಎಂದು ನಾಮಕಾರಣ ಮಾಡಲಾಗಿದೆ.

ಸ್ಟ್ರೈಪ್​ ನಡುವಳಿಕೆಯಿಂದ ರೆನಾಲ್ಡ್​ ಕೂಡ ಗಾಬರಿಗೊಂಡಿದ್ದಾರೆ. ಇದ್ದಕ್ಕಿದ್ದ ಹಾಗೆ ಅಳಿಲು ಕಚ್ಚಲು ಆರಂಭಿಸದ ಬಗ್ಗೆ ತನಗೂ ತಿಳಿಯುತ್ತಿಲ್ಲ ಎಂದು ಹೇಳಿದ್ದಾರೆ. ಸ್ಥಳೀಯರು ಅಳಿಲಿನಿಂದ ಕಚ್ಚಿಸಿಕೊಂಡ, ಮೂಗೇಟಿನಂತಹ ಗಾಯಗಳ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಥಳೀಯರು ಹಂಚಿಕೊಂಡ ಫೋಟೋಗಳನ್ನು ನೋಡಿ ರೆನಾಲ್ಡ್​ ಕೂಡ ಚಿಂತಿತರಾಗಿದ್ದಾರೆ.

ಅಳಿಲು ಯಾವ ದ್ವೇಷದಿಂದ ಎಲ್ಲರಿಗೂ ಕಚ್ಚುತ್ತಿದೆ ಎನ್ನುವುದನ್ನು ತಿಳಿಯಲಾಗದೆ ಜನ ಸಾಕಿದ ಅಳಿಲಿನ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಮನುಷ್ಯರಿಗೆ ಮಾತ್ರವಲ್ಲದೆ ಬೆಕ್ಕು ಮತ್ತು ನಾಯಿಗಳ ಮೇಲೂ ಸ್ಟ್ರೈಪ್​ ಹೆಸರಿನ ಅಳಿಲು ದಾಳಿ ನಡೆಸಿದೆ. ಇದರಿಂದ ಗಾಬರಿಗೊಂಡಿರುವ ಜನ ಅಳಿಲನ್ನು ಸೆರೆ ಹಿಡಿದು ಕಾಡಿಗೆ ಬಿಡಬೇಕು ಎಂದುಕೊಂಡಿದ್ದರು. ಆದರೆ ಅಳಿಲನ್ನು ಸೆರೆ ಹಿಡಿದು ಕಾಡಿಗೆ ಬಿಡುವುದು ಕಾನೂನು ಬಾಹಿರವಾಗಿದೆ. ಹೀಗಾಗಿ ಅಲ್ಲಿನ ಅರಣ್ಯ ಅಧಿಕಾರಿಗೆ ಮಾಹಿತಿ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದ ಬಳಿ  ಕೋತಿಗಳ ಹಿಂಡು ಅವುಗಳ ಮರಿಯನ್ನು ನಾಯಿ ಕೊಲೆ ಮಾಡಿದ ಹಿನ್ನೆಲೆಯಲ್ಲಿ ದ್ವೇಷ ಸಾಧಿಸಿ ಒಂದೇ ತಿಂಗಳಿನಲ್ಲಿ ಒಂದೇ ಗ್ರಾಮದ  250 ನಾಯಿಗಳ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿತ್ತು. ಇದೀಗ ಉತ್ತರ ವೇಲ್ಸ್​ನಲ್ಲಿ ಅಳಿಲು ಮನುಷ್ಯರ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.

ಇದನ್ನೂ ಓದಿ:

New Year’s Eve: ವಿಶೇಷ ಆನಿಮೇಟೆಡ್ ಡೂಡಲ್​ ಮೂಲಕ ಇಯರ್​ ಎಂಡ್​ ಆಚರಿಸಿದ ಗೂಗಲ್​

Published On - 11:18 am, Fri, 31 December 21

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!