Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಶಿವನೊಂದಿಗೆ ಜೋಗಿನಿಯರು, ತೃತೀಯಲಿಂಗಿಗಳ ವಿವಾಹ! ಈ ಆಚರಣೆ ಯಾಕೆ? 

ನಿನ್ನೆ ದೇಶದೆಲ್ಲೆಡೆ ಶ್ರೀರಾಮ ನವಮಿ ಹಬ್ಬವನ್ನು ಶ್ರದ್ಧೆ ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಅದೇ ರೀತಿ ತೆಲಂಗಾಣದ ವೇಮುಲವಾಡದ  ಶ್ರೀರಾಜರಾಜೇಶ್ವರಿ ಸ್ವಾಮಿ ದೇವಾಲಯದಲ್ಲೂ ಈ ಹಬ್ಬವನ್ನು ಬಹಳ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.  ಇಲ್ಲಿ ರಾಮನವಮಿಯ ದಿನ ಸೀತಾರಾಮ ಕಲ್ಯಾಣೋತ್ಸವದ ಜೊತೆಗೆ ಜೋಗಿನಿಯರು ಮತ್ತು ತೃತಿಯ ಲಿಂಗಿಗಳು ಶಿವನೊಂದಿಗೆ ವಿವಾಹವಾಗುವ ಸಂಪ್ರದಾಯವೂ ರೂಢಿಯಲ್ಲಿದೆ. 

Viral News: ಶಿವನೊಂದಿಗೆ ಜೋಗಿನಿಯರು, ತೃತೀಯಲಿಂಗಿಗಳ ವಿವಾಹ! ಈ ಆಚರಣೆ ಯಾಕೆ? 
ವೈರಲ್​​ ಫೋಟೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 18, 2024 | 11:39 AM

ಏಪ್ರಿಲ್ 17 ರಂದು ದೇಶದೆಲ್ಲೆಡೆ ಶ್ರೀರಾಮನವಮಿ ಹಬ್ಬವನ್ನು ಶ್ರದ್ಧೆ ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಈ ದಿನ ಶ್ರೀರಾಮ, ಆಂಜನೇಯ ಸೇರಿದಂತೆ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ, ಅಭಿಷೇಕ, ಶ್ರೀರಾಮ ಪಟ್ಟಾಭಿಷೇಕ, ಸೀತಾ ಕಲ್ಯಾಣ, ರಾಮನಾಮ ಸ್ಮರಣೆ  ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ವಿಜೃಂಭನೆಯಿಂದ ನಡೆಯಿತು.  ಅದೇ ರೀತಿ    ತೆಲಂಗಾಣದ ವೇಮುಲವಾಡದ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿಯೂ  ಶ್ರೀ ರಾಮನವಮಿ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ವಿಶೇಷವೇನೆಂದರೆ ಇಲ್ಲಿ ಸೀತಾರಾಮ ಕಲ್ಯಾಣೋತ್ಸವದ ಜೊತೆಗೆ ಶಿವನೊಂದಿಗೆ ಜೋಗಿನಿಯರು ಹಾಗೂ ತೃತೀಯಲಿಂಗಿಗಳ  ಕಲ್ಯಾಣೋತ್ಸವವನ್ನೂ ನೆರವೇರಿಸಲಾಯಿತು.

ಹೌದು ಈ ದೇವಾಲಯದಲ್ಲಿ ಪ್ರತಿವರ್ಷ  ಶ್ರೀರಾಮನವಮಿ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸುತ್ತಾ ಬರಲಾಗುತ್ತಿದ್ದು,  ಇಲ್ಲಿ ರಾಮನವಮಿ ಹಬ್ಬದ ದಿನ ಸೀತಾರಾಮ ಕಲ್ಯಾಣದ ಜೊತೆಗೆ ಜೋಗಿನಿಯರು ಮತ್ತು ತೃತೀಯ ಲಿಂಗಿಗಳ ಕಲ್ಯಾಣೋತ್ಸವವನ್ನೂ ನೆರವೇರಿಸಲಾಗುತ್ತದೆ.

ಜೋಗಿನಿಯರು ಶಿವನನ್ನು ತಮ್ಮ ಪ್ರಾಣನಾಥ ಎಂದು ಭಾವಿಸಿ ಶಿವವನ್ನು ವಿವಾಹವಾಗುವ ಸಂಪ್ರದಾಯ ಈ ದೇವಾಲಯದಲ್ಲಿದೆ. ಜೋಗಿನಿಯರು ತಮ್ಮನ್ನು ಶಿವನ ವಧುಗಳೆಂದು ಪರಿಗಣಿಸಿ, ಮುಖಕ್ಕೆ ಅರಶಿನ, ಹಣೆಗೆ ಸಿಂಧೂರ, ಹೊಸ ಸೀರೆ, ತಾಮ್ರದ ಕಾಲ್ಗೆಜ್ಜೆ, ಆಭರಣಗಳನ್ನು ಧರಿಸಿ ಮಧುಮಗಳಂತೆ ಸಿಂಗಾರಗೊಂಡು ಕಲ್ಯಾಣೋತ್ಸವದ  ವಿಧಾನಗಳ ಸಂದರ್ಭದಲ್ಲಿಶಿವನ ಪ್ರತಿರೂಪವಾದ ತ್ರಿಶೂಲನ್ನು ಕೈಯಲ್ಲಿ ಹಿಡಿದು, ಶ್ರೀರಾಮ ಸೀತಾದೇವಿಗೆ ತಾಳಿ ಕಟ್ಟುವ ಸಮಯದಲ್ಲಿ ಜೋಗಿನಿಯರು ಮತ್ತು ತೃತೀಯ ಲಿಂಗಿಗಳು ಒಬ್ಬರಿಗೊಬ್ಬರು ಅಕ್ಷತೆಯನ್ನು ಹಾಕಿ ನಂತರ ರುದ್ರಾಕ್ಷಿ ಮಾಲೆಯನ್ನು ಕೊರಳಿಗೆ ಧರಿಸುತ್ತಾರೆ. ಈ ಸಮಾರಂಭಕ್ಕೆ ಲಿಂಗಧಾರಣೆ ಎಂದು ಕೂಡಾ ಕರೆಯುತ್ತಾರೆ.

ಇದನ್ನೂ ಓದಿ: ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ದೂರ ಎಳೆದೊಯ್ದ ಲಾರಿ, ಎದೆ ಝೆಲ್ಲೆನಿಸುವ ವಿಡಿಯೋ

ಬಹಳ ಹಿಂದಿನಿಂದಲೂ ಈ ಆಚರಣೆ,  ಸಂಪ್ರದಾಯ ಇಲ್ಲಿ ರೂಢಿಯಲ್ಲಿದ್ದು, ಪ್ರತಿವರ್ಷ ಹೆಚ್ಚಿನ ಸಂಖ್ಯೆಯಲ್ಲಿ ರಾಮ ನವಮಿಯ ದಿನ ಇಲ್ಲಿಗೆ ಜೋಗಿನಿಯರು, ತೃತೀಯ ಲಿಂಗಿಗಳು ಆಗಮಿಸುತ್ತಾರೆ. ಮಾಂಗಲ್ಯ ಧಾರಣೆಯ ನಂತರ ಜೋಗಿನಿಯರು ಸೀತಾರಾಮರಿಗೆ ರೇಷ್ಮೆ ವಸ್ತ್ರವನ್ನು ಅರ್ಪಿಸುವ ವಾಡಿಕೆ ಕೂಡಾ ಇಲ್ಲಿ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್