Sign In

By signing in or creating an account, you agree with Associated Broadcasting Company's Terms & Conditions and Privacy Policy.

500 ರೂ ನೋಟುಗಳ ಮೇಲೆ ನಕ್ಷತ್ರ ಚಿಹ್ನೆ ಇದ್ದರೆ ಅದು ಅಸಲಿಯೋ ನಕಲಿಯೋ?

500ರ ನೋಟುಗಳ ಮೇಲೆ ನಕ್ಷತ್ರ ಚಿಹ್ನೆ ಕಂಡು ಬರುವುದರಿಂದ ಸಾಕಷ್ಟು ಜನರು ಈ ನೋಟನ್ನು ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. 500 ರೂ ನೋಟುಗಳ ಮೇಲೆ ನಕ್ಷತ್ರ ಚಿಹ್ನೆ ಇದ್ದರೆ ಅದು ಅಸಲಿಯೋ ನಕಲಿಯೋ ಎಂಬ ಅನುಮಾನಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟನೆಯನ್ನು ನೀಡಿದೆ.

500 ರೂ ನೋಟುಗಳ ಮೇಲೆ ನಕ್ಷತ್ರ ಚಿಹ್ನೆ ಇದ್ದರೆ ಅದು ಅಸಲಿಯೋ ನಕಲಿಯೋ?
Follow us
ಅಕ್ಷತಾ ವರ್ಕಾಡಿ
|

Updated on: May 03, 2024 | 11:47 AM

500 ರೂಪಾಯಿ ನೋಟಿನ ಬಗ್ಗೆ ಅನೇಕರಿಗೆ ಇನ್ನೂ ಅನುಮಾನಗಳಿವೆ. ಇತ್ತೀಚಿಗೆ 500ರ ನೋಟುಗಳ ಮೇಲೆ ನಕ್ಷತ್ರ ಚಿಹ್ನೆ ಕಂಡು ಬರುವುದರಿಂದ ಸಾಕಷ್ಟು ಜನರು ಈ ನೋಟನ್ನು ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಯಾಕೆಂದರೆ ಈ ನೋಟು ನಕಲಿಯೋ ಅಸಲಿಯೋ ಎಂಬ ಅನುಮಾನ ಸಾಕಷ್ಟು ಜನರಲ್ಲಿದೆ. ಆದ್ದರಿಂದ 500 ರೂ ನೋಟುಗಳ ಮೇಲೆ ನಕ್ಷತ್ರ ಚಿಹ್ನೆ ಇದ್ದರೆ ಅದು ಅಸಲಿಯೋ ನಕಲಿಯೋ ಎಂಬ ಅನುಮಾನ ನಿಮಗೂ ಇದ್ದರೆ ಇಲ್ಲಿ ನಿಮ್ಮ ಅನುಮಾನಕ್ಕೆ ಉತ್ತರವನ್ನು ಪಡೆಯಿರಿ.

ಭಾರತೀಯ ರಿಸರ್ವ್ ಬ್ಯಾಂಕ್ ನೀಡಿರುವ ಸ್ಪಷ್ಟನೆ:

500 ರೂ ನೋಟುಗಳ ಮೇಲೆ ನಕ್ಷತ್ರ ಚಿಹ್ನೆ ಇದ್ದರೆ ಅದು ಅಸಲಿಯೋ ನಕಲಿಯೋ ಎಂಬ ಅನುಮಾನಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟನೆಯನ್ನು ನೀಡಿದೆ. ನಂಬರ್ ಪ್ಯಾನೆಲ್‌ನಲ್ಲಿ ನಕ್ಷತ್ರ ಗುರುತು ಇರುವ ನೋಟುಗಳು ನಕಲಿಯಲ್ಲ, ಅವು ಕೂಡ ಅಸಲಿ ನೋಟುಗಳೇ ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ. ನಕ್ಷತ್ರ (*) ಗುರುತು ಇಲ್ಲದ ಇತರ ಬ್ಯಾಂಕ್ ನೋಟುಗಳಂತೆ ಇವುಗಳು ಅಸಲಿ ಎಂದು ಆರ್‌ಬಿಐ ವಿವರಿಸಿದೆ. 1ರಿಂದ 100ರವರೆಗಿನ ಕ್ರಮಸಂಖ್ಯೆಯ ನೋಟುಗಳಲ್ಲಿ ಮುದ್ರಣ ಸಮಸ್ಯೆ ಕಂಡುಬಂದಲ್ಲಿ ಅವುಗಳ ಜಾಗದಲ್ಲಿ ಈ ನಕ್ಷತ್ರ ಗುರುತು ಇರುವ ನೋಟುಗಳನ್ನು ಮುದ್ರಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಬಿರು ಬೇಸಿಗೆಯಿಂದ ಪಾರಾಗಲು ಆಟೋ ಚಾಲಕನ ಮಸ್ತ್ ಐಡಿಯಾ; ವೈರಲ್ ಆಯ್ತು ವಿಡಿಯೋ

ಇದಲ್ಲದೆ ರೂ. 10ರ ನಾಣ್ಯಗಳನ್ನು ಕೆಲವರು ಮಾನ್ಯವೆಂದು ಪರಿಗಣಿಸುವುದಿಲ್ಲ. ರೂ.10 ನಾಣ್ಯ ಮಾನ್ಯವಾಗಿರುತ್ತದೆ ಎಂದು ಆರ್‌ಬಿಐ ಪದೇ ಪದೇ ಹೇಳುತ್ತಲೇ ಇದೆ. ಬ್ಯಾಂಕ್‌ಗಳು, ಅಂಚೆ ಕಚೇರಿಗಳು ಮತ್ತು ಮೆಟ್ರೋ ನಿಲ್ದಾಣಗಳು ಅವುಗಳನ್ನು ಸ್ವೀಕರಿಸಲಾಗುತ್ತದೆ. ಆದರೆ ಕೆಲವು ಅಂಗಡಿಗಳಲ್ಲಿ ಅರಿವಿಲ್ಲದ ಕಾರಣ ಅವುಗಳನ್ನು ತೆಗೆದುಕೊಳ್ಳಲು ನಿರಾಕರಿಸುತ್ತಾರೆ ಎಂದು ಆರ್‌ಬಿಐ ಹೇಳಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!