AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೂ ಅಸಾಧ್ಯವಲ್ಲ: ಕಡಿದಾದ ಬಂಡೆಯ ಮೇಲೆ ಆಕಾಶಮುಖಿಯಾಗಿ ಚಲಿಸಿದ ಬೈಕ್​ನ ವಿಡಿಯೋ ವೈರಲ್​

Bike Stunt : ಅತ್ಯಂತ ಅಪಾಯಕರವಾದ ಅಪರೂಪದ ಸಾಹಸವಿದು. ಈ ವ್ಯಕ್ತಿ ಇದನ್ನು ಅದ್ಭುತವಾಗಿ ನಿರ್ವಹಿಸಿದ್ದಾರೆ ಎಂದು ನೆಟ್ಟಿಗರು ಬೆನ್ನು ತಟ್ಟುತ್ತಿದ್ದಾರೆ. ಇನ್ನೂ ಕೆಲವರು ಇದೆಲ್ಲ ಬೇಕಿತ್ತೆ? ಎಂದು ಪ್ರಶ್ನಿಸುತ್ತಿದ್ಧಾರೆ. ನೀವೇನಂತೀರಿ?

ಯಾವುದೂ ಅಸಾಧ್ಯವಲ್ಲ: ಕಡಿದಾದ ಬಂಡೆಯ ಮೇಲೆ ಆಕಾಶಮುಖಿಯಾಗಿ ಚಲಿಸಿದ ಬೈಕ್​ನ ವಿಡಿಯೋ ವೈರಲ್​
TV9 Web
| Updated By: ಶ್ರೀದೇವಿ ಕಳಸದ|

Updated on: Dec 30, 2022 | 3:49 PM

Share

Viral Video : ಸಾಹಸಿಗರನ್ನು ಯಾರಾದರೂ ತಡೆಯಲಾಗುವುದೆ? ಸಾಧ್ಯವೇ ಇಲ್ಲ. ಒಂದು ಸಾಹಸದ ತುದಿ ಮುಟ್ಟಿದರು ಎನ್ನುತ್ತಿದ್ದಂತೆ ಮತ್ತದರ ಮುಂದೆ ಚಾಚಿಕೊಂಡಿರುವ ಇನ್ನೊಂದು ತುದಿಯ ಕಡೆ ಅವರ ಗಮನ ನೆಟ್ಟಿರುತ್ತದೆ. ಈಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ, ಕಡಿದಾದ ಬಂಡೆಗಳ ಮೇಲೆ ಹೀಗೆ ಆಕಾಶಮುಖಿಯಾಗಿ ಈ ವ್ಯಕ್ತಿ ಬೈಕ್​ ಮೂಲಕ ಚಲಿಸುತ್ತಾನೆ. ಬಂಡೆಯ ತುದಿಯನ್ನೂ ತಲುಪುತ್ತಾನೆ. ನೆಟ್ಟಿಗರು ಈ ವಿಡಿಯೋ ನೋಡಿ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ.

ಈಗಾಗಲೇ ಈ ವಿಡಿಯೋ ಅನ್ನು ಸುಮಾರು 6 ಲಕ್ಷ ಜನರು ನೋಡಿದ್ದಾರೆ. 11,500 ಜನರು  ಇಷ್ಟಪಟ್ಟಿದ್ದಾರೆ. ಸಾವಿರಾರು ಜನರು ರೀಟ್ವೀಟ್ ಮಾಡಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ. ಇದು ತೀರಾ ಅಪಾಯಕಾರಿ ಮತ್ತು ಕಷ್ಟಕರವಾದ ಸಾಹಸ ಎಂದು ನೆಟ್ಟಿಗರು ಆತಂಕ ಪಡುತ್ತಿದ್ದಾರೆ.

ಇದನ್ನೂ ಓದಿ : ಸಿಲ್ಕಿ ಹೇರ್​ ಸಿಂಹಪ್ಪ ವೈರಲ್ ಆದನು ನೋಡಪ್ಪ

ಲಾಂಗ್​ ರೈಡ್​, ರಾಕ್​ ಕ್ಲೈಂಬಿಂಗ್​, ಡರ್ಟ್​ ಬೈಕಿಂಗ್​ ವಿಡಿಯೋಗಳು ಇದೀಗ ಅಂತರ್ಜಾಲದಲ್ಲಿ ಜನಪ್ರಿಯವಾಗುತ್ತಿವೆ. ಆದರೆ ನೋಡಲೇನೋ ಖುಷಿ. ಆದರೆ ಈ ಸಾಹಸಗಳಲ್ಲಿ ತೊಡಗಿಕೊಂಡವರ ಸುತ್ತ ಸದಾ ಅಪಾಯ ಗಿರಕಿ ಹಾಕುತ್ತಿರುತ್ತದೆ. ಹಾಗಾಗಿ ಅವರು ಮೈಯೆಲ್ಲ ಎಚ್ಚರವಾಗಿರಬೇಕು.

ಇದನ್ನೂ ಓದಿ : ಇಂಥ ಹುಚ್ಚುಸಾಹಸವನ್ನು ಯಾರೂ ಪ್ರಯತ್ನಿಸಬೇಡಿ ಎನ್ನುತ್ತಿದ್ದಾರೆ ನೆಟ್ಟಿಗರು

ಅನೇಕರು ಈ ವಿಡಿಯೋದಲ್ಲಿರುವ ವ್ಯಕ್ತಿಯ ಸಾಹಸವನ್ನು ಬಹುವಾಗಿ ಮೆಚ್ಚುತ್ತಿದ್ದಾರೆ. ಇನ್ನೂ ಕೆಲವರು ಹೆಲ್ಮೆಟ್​ ಇಲ್ಲದೆ ಈ ಸಾಹಸವನ್ನು ಮಾಡಬಾರದು ಎನ್ನುತ್ತಿದ್ದಾರೆ. ಒಂದು ಕ್ಷಣ ಎಚ್ಚರತಪ್ಪಿದರೆ ಈ ವ್ಯಕ್ತಿಯ ಗತಿ? ಎಂದು ಪ್ರಶ್ನಿಸಿದ್ಧಾರೆ ಕೆಲವರು. ಬೈಕ್​ ಓಡಿಸುತ್ತಿರುವ ವ್ಯಕ್ತಿ ಮುಂದೆ ಏನಾದ ಎನ್ನುವುದು ಯಾರಿಗಾದರೂ ತಿಳಿಯಿತೇ? ಎಂದಿದ್ದಾರೆ ಒಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ