Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಿಗರೇಟ್​ ಕೊಡಲಿಲ್ಲ! ಅಪ್ರಾಪ್ತ ಹುಡುಗರಿಂದ ಅಂಗಡಿಯವರ ಮೇಲೆ ಹಲ್ಲೆ

America : ಹುಡುಗಿ ಅಂಗಡಿಯವನ ಬಳಿ ಸಿಗರೇಟು ಕೇಳಿದ್ದಾಳೆ. ಆತ ನಿರಾಕರಿಸಿದಾಗ ವಾಪಾಸು ಹೋದ ಆಕೆ ಕೆಲ ನಿಮಿಷಗಳ ನಂತರ ತನ್ನದೇ ವಯಸ್ಸಿನ ಹುಡುಗರ ಗುಂಪಿನೊಂದಿಗೆ ಅಂಗಡಿಗೆ ಮರಳಿದ್ದಾಳೆ. ಆನಂತರ...

Viral Video: ಸಿಗರೇಟ್​ ಕೊಡಲಿಲ್ಲ! ಅಪ್ರಾಪ್ತ ಹುಡುಗರಿಂದ ಅಂಗಡಿಯವರ ಮೇಲೆ ಹಲ್ಲೆ
ಅಮೆರಿಕದ 7 ಎಲೆವೆನ್​ ಅಂಗಡಿಯಲ್ಲಿ ಅಪ್ತಾಪ್ತರಿಂದ ಉದ್ಯೋಗಿಗಳ ಮೇಲೆ ಹಲ್ಲೆ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Jun 07, 2023 | 3:33 PM

America : ಈ ಘಟನೆ ಅಮೆರಿಕಾದಲ್ಲಿ ಈ ಅಮಾನುಷ ಘಟನೆ ನಡೆದಿದೆ. ಅಪ್ತಾಪ್ತ ವಯಸ್ಸಿನ ಹುಡುಗಿಯೊಬ್ಬಳು ಅಂಗಡಿಯವರಿಗೆ ಸಿಗರೇಟು (Cigar) ಕೇಳಿದಾಗ ಅಲ್ಲಿಯ ಉದ್ಯೋಗಿಗಳು ಮಾರಲು ನಿರಾಕರಿಸಿದ್ದಾರೆ. ಆಗ ಆಕೆಯ ಸ್ನೇಹಿತರ ಗುಂಪು ಕೋಪಗೊಂಡು ಉದ್ಯೋಗಿಗಳಿಬ್ಬರ ಮೇಲೆ ಹಲ್ಲೆ ಮಾಡಿದೆ. ಹಲ್ಲೆಗೊಳಗಾದ ಇಬ್ಬರು ಉದ್ಯೋಗಿಗಳ ಮುಖದ ಮೇಲೆ ಗಾಯಗಳಾಗಿವೆಯಾದರೂ ಆಸ್ಪತ್ರೆಗೆ ಸೇರುವಂಥ ಗಂಭೀರ ಸ್ಥಿತಿ ಉಂಟಾಗಿಲ್ಲ. ಆದರೆ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಈ ಅಪ್ರಾಪ್ತರ ಗುಂಪನ್ನು ಪತ್ತೆ ಹಚ್ಚುವಲ್ಲಿ ನಿರತರಾಗಿದ್ದಾರೆ.

ಇದನ್ನೂ ಓದಿ : Odisha Train Accident: ಇಲ್ಲ, ನನ್ನ ಮಗ ಸತ್ತಿಲ್ಲ, ಈ ಸುದ್ದಿಯನ್ನು ನಾನು ನಂಬುವುದಿಲ್ಲ, ಹತಾಶನಾಗುವುದಿಲ್ಲ!

ಅಮೆರಿಕದ 7 Eleven ಎಂಬ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಶನಿವಾರ ರಾತ್ರಿ9 ಕ್ಕೆ ಅಪ್ರಾಪ್ತೆ ಅಂಗಡಿ ಪ್ರವೇಶಿಸಿದ್ದಾಳೆ. ಅಂಗಡಿಯವರು ಆಕೆಗೆ ಸಿಗರೇಟು ಕೊಡಲು ನಿರಾಕರಿಸಿದಾಗ ಆಕೆ ಮರಳಿ ಹೋಗಿದ್ದಾಳೆ. ಆದರೆ ಕೆಲ ನಿಮಿಷಗಳ ನಂತರ ತನ್ನದೇ ವಯಸ್ಸಿನ ಹುಡುಗರೊಂದಿಗೆ ಮರುಪ್ರವೇಶಿಸಿದ್ದಾಳೆ. ನಂತರ ಈ ಗುಂಪು ಅಂಗಡಿಯ ಉದ್ಯೋಗಿಗಳ ಮೇಲೆ ಹಲ್ಲೆ ಮಾಡಿದೆ. ಈ ಸಂದರ್ಭದಲ್ಲಿ ಅಂಗಡಿಯ ಉದ್ಯೋಗಿಯೊಬ್ಬ ಮೊಬೈಲಿನಲ್ಲಿ ಈ ಘಟನೆಯನ್ನು ಚಿತ್ರೀಕರಿಸಿದ್ಧಾನೆ. ನಂತರ ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ಹರಡಿದೆ. ಪೊಲೀಸರು ಅಪ್ರಾಪ್ತರ ಗುಂಪನ್ನು ಹುಡುಕಲು ಪ್ರಯತ್ನಿಸುತ್ತಿದ್ದಾರೆ ಮತ್ತು ಸಾವರ್ಜನಿಕರಿಂದಲೂ ಈ ಪ್ರಕರಣದ ಕುರಿತು ಮಾಹಿತಿ ಕೇಳಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಇದನ್ನೂ ಓದಿ : Viral Video: ಆದಿಪುರುಷ್​; ಪ್ರತಿ ಪ್ರದರ್ಶನದಲ್ಲೂ ಹನುಮಂತನಿಗಾಗಿ ಒಂದು ಸೀಟು ಕಾಯ್ದಿರಿಸಿ!

ಈ ಹುಡುಗರು ಗುಂಪು Dodge SUV ಕಾರಿನಲ್ಲಿ ಬಂದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಈತನಕ ಯಾವ ಹುಡುಗರನ್ನೂ ಪೊಲೀಸರು ಬಂಧಿಸಿಲ್ಲ. ಆದರೆ ಈ ಘಟನೆಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 3:28 pm, Wed, 7 June 23

ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ