AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಡುಕತ್ತಲಿನಲ್ಲಿ ಸೇತುವೆ ಮೇಲೆ ಕಂಡುಬಂದ ಆಕೃತಿ ಏನು? ವಿಡಿಯೋ ನೋಡಿ ಗಾಬರಿಗೊಂಡ ನೆಟ್ಟಿಗರು

ಕೆಲವರು ಈ ವಿಡಿಯೋವನ್ನು ನೋಡಿ ಆಕೃತಿಯ ಬಗ್ಗೆ ವಿವಿಧ ಅಭಿಪ್ರಾಯ ತಾಳಿದ್ದಾರೆ. ಕೆಲವೊಬ್ಬರು ಇದನ್ನು ದೆವ್ವ ಎಂದು ಅಂದುಕೊಂಡಿದ್ಧಾರೆ. ಇನ್ನೂ ಕೆಲವರು ಈ ಆಕೃತಿಯನ್ನು ಏಲಿಯನ್ ಎಂದು ಕರೆದಿದ್ದಾರೆ.

Viral Video: ಕಡುಕತ್ತಲಿನಲ್ಲಿ ಸೇತುವೆ ಮೇಲೆ ಕಂಡುಬಂದ ಆಕೃತಿ ಏನು? ವಿಡಿಯೋ ನೋಡಿ ಗಾಬರಿಗೊಂಡ ನೆಟ್ಟಿಗರು
ವೈರಲ್ ವಿಡಿಯೋದ ದೃಶ್ಯ
TV9 Web
| Edited By: |

Updated on:Aug 14, 2021 | 1:03 PM

Share

ಸಾಮಾಜಿಕ ಜಾಲತಾಣಗಳ ಜಂಜಾಟದಲ್ಲಿ ನೂರಾರು ವಿಡಿಯೋಗಳು ದಿನನಿತ್ಯ ವೈರಲ್ ಆಗುತ್ತಿರುತ್ತವೆ. ಹಲವಾರು ವಿಡಿಯೋಗಳು ತಮ್ಮ ಪಾಡಿಗೆ ಸೋಷಿಯಲ್ ಮೀಡಿಯಾಗಳಲ್ಲಿ ಕಳೆದುಹೋಗುತ್ತಿರುತ್ತದೆ. ಒಂದರ ಹಿಂದೆ ಒಂದರಂತೆ ಬಂದು ಹೋಗುತ್ತದೆ. ಆದರೆ, ಇಲ್ಲೊಂದು ವಿಶೇಷ ವಿಡಿಯೋ ವೈರಲ್ ಆಗಿರುವುದು ಕಂಡುಬಂದಿದೆ. ನೋಡುಗರು ಈ ಚಿತ್ರಣ ನೋಡಿ ಒಂದು ಕ್ಷಣಕ್ಕೆ ಗಾಬರಿಗೊಳ್ಳುವುದಂತೂ ಗ್ಯಾರಂಟಿ. ಒಂದು ವಿಚಿತ್ರ ಆಕೃತಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಉತ್ತರಾಖಂಡ್​ದ ರಸ್ತೆಯೊಂದರಲ್ಲಿ ಈ ದೃಶ್ಯ ಕಂಡಿದೆ.

ಕೆಲವರು ಈ ವಿಡಿಯೋವನ್ನು ನೋಡಿ ಆಕೃತಿಯ ಬಗ್ಗೆ ವಿವಿಧ ಅಭಿಪ್ರಾಯ ತಾಳಿದ್ದಾರೆ. ಕೆಲವೊಬ್ಬರು ಇದನ್ನು ದೆವ್ವ ಎಂದು ಅಂದುಕೊಂಡಿದ್ಧಾರೆ. ಇನ್ನೂ ಕೆಲವರು ಈ ಆಕೃತಿಯನ್ನು ಏಲಿಯನ್ ಎಂದು ಕರೆದಿದ್ದಾರೆ. ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜನರು ಈ ಬಗ್ಗೆ ವಾಗ್ವಾದವನ್ನೂ ನಡೆಸಿದ್ದಾರೆ. ಅದು ದೆವ್ವ, ಭೂತ ಏನೂ ಅಲ್ಲ ಎಂದು ಯಾರೋ ಮನುಷ್ಯರೇ ನಡೆದುಕೊಂಡು ಹೋಗುತ್ತಿರುವುದು ಎಂದಿದ್ದಾರೆ. ಒಬ್ಬೊಬ್ಬರು ಅವರ ಅನುಭವ, ಆಲೋಚನೆಗಳಿಗೆ ತಕ್ಕಂತೆ ಪ್ರತಿಕ್ರಿಯೆ ನೀಡಿದ್ಧಾರೆ.

ಈ ರಸ್ತೆ ಸಂಪೂರ್ಣ ಕತ್ತಲಾಗಿರುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದು. ಬೈಕ್ ಅಥವಾ ಕಾರ್ ಮುಂತಾದ ವಾಹನಗಳ ಬೆಳಕಿಗೆ ಆಕೃತಿಯೊಂದು ನಡೆದು ಹೋಗುತ್ತಿರುವುದು ಕಂಡಿದೆ. ವೇಗವಾಗಿ ನಡೆದುಹೋಗುತ್ತಿರುವ ಆಕೃತಿ ಅಸ್ಪಷ್ಟವಾಗಿದೆ. ಹಾಗೇ ನೋಡುತ್ತಿರುವಂತೆ ಮತ್ತೆ ಕೆಲವು ವಾಹನಗಳನ್ನು ಅಲ್ಲೇ ನಿಲ್ಲಿಸಿದ್ದಾರೆ. ಮೊಬೈಲ್​ನಲ್ಲಿ ವಿಡಿಯೋ ಕೂಡ ಮಾಡಿದ್ದಾರೆ.

ವಿಡಿಯೋ ಮಾಡುತ್ತಿರುವಂತೆ ಆ ಆಕೃತಿ ಸ್ವಲ್ಪ ಹೊತ್ತು ನಿಂತುಕೊಂಡು ಹಿಂದಿರುಗಿ ನೋಡಿ ಮತ್ತೆ ಮುಂದೆ ಹೋಗುತ್ತದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ನೂರಾರು ಮಂದಿ ಇದನ್ನು ಶೇರ್ ಮಾಡಿಕೊಂಡಿದ್ದಾರೆ. ಇದು ಏನು? ಎಂಬ ಪ್ರಶ್ನೆಯೇ ಕೊನೆಗೆ ಹಲವರು ಇದನ್ನು ಶೇರ್ ಮಾಡಿಕೊಳ್ಳುವಂತೆ ಮಾಡಿದೆ.

ಇದನ್ನೂ ಓದಿ: Viral Video: ಕೇರಂ ಆಟದ ನಡುವೆ ಅಜ್ಜಂದಿರ ಜಟಾಪಟಿ; ವೈರಲ್ ವಿಡಿಯೋ ನೋಡಿ ನಕ್ಕು ಹಗುರಾದ ನೆಟ್ಟಿಗರು

Viral Video: ಪುಟ್ಟ ಮಕ್ಕಳಿಗೂ ಎಷ್ಟು ಕೆಲಸ? 6 ವರ್ಷದ ಬಾಲಕಿಯಿಂದ ಪ್ರಧಾನಿ ನರೇಂದ್ರ ಮೋದಿಗೆ ದೂರು; ವಿಡಿಯೋ ನೋಡಿ

Published On - 5:50 pm, Mon, 31 May 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ