AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಡುಕತ್ತಲಿನಲ್ಲಿ ಸೇತುವೆ ಮೇಲೆ ಕಂಡುಬಂದ ಆಕೃತಿ ಏನು? ವಿಡಿಯೋ ನೋಡಿ ಗಾಬರಿಗೊಂಡ ನೆಟ್ಟಿಗರು

ಕೆಲವರು ಈ ವಿಡಿಯೋವನ್ನು ನೋಡಿ ಆಕೃತಿಯ ಬಗ್ಗೆ ವಿವಿಧ ಅಭಿಪ್ರಾಯ ತಾಳಿದ್ದಾರೆ. ಕೆಲವೊಬ್ಬರು ಇದನ್ನು ದೆವ್ವ ಎಂದು ಅಂದುಕೊಂಡಿದ್ಧಾರೆ. ಇನ್ನೂ ಕೆಲವರು ಈ ಆಕೃತಿಯನ್ನು ಏಲಿಯನ್ ಎಂದು ಕರೆದಿದ್ದಾರೆ.

Viral Video: ಕಡುಕತ್ತಲಿನಲ್ಲಿ ಸೇತುವೆ ಮೇಲೆ ಕಂಡುಬಂದ ಆಕೃತಿ ಏನು? ವಿಡಿಯೋ ನೋಡಿ ಗಾಬರಿಗೊಂಡ ನೆಟ್ಟಿಗರು
ವೈರಲ್ ವಿಡಿಯೋದ ದೃಶ್ಯ
TV9 Web
| Edited By: |

Updated on:Aug 14, 2021 | 1:03 PM

Share

ಸಾಮಾಜಿಕ ಜಾಲತಾಣಗಳ ಜಂಜಾಟದಲ್ಲಿ ನೂರಾರು ವಿಡಿಯೋಗಳು ದಿನನಿತ್ಯ ವೈರಲ್ ಆಗುತ್ತಿರುತ್ತವೆ. ಹಲವಾರು ವಿಡಿಯೋಗಳು ತಮ್ಮ ಪಾಡಿಗೆ ಸೋಷಿಯಲ್ ಮೀಡಿಯಾಗಳಲ್ಲಿ ಕಳೆದುಹೋಗುತ್ತಿರುತ್ತದೆ. ಒಂದರ ಹಿಂದೆ ಒಂದರಂತೆ ಬಂದು ಹೋಗುತ್ತದೆ. ಆದರೆ, ಇಲ್ಲೊಂದು ವಿಶೇಷ ವಿಡಿಯೋ ವೈರಲ್ ಆಗಿರುವುದು ಕಂಡುಬಂದಿದೆ. ನೋಡುಗರು ಈ ಚಿತ್ರಣ ನೋಡಿ ಒಂದು ಕ್ಷಣಕ್ಕೆ ಗಾಬರಿಗೊಳ್ಳುವುದಂತೂ ಗ್ಯಾರಂಟಿ. ಒಂದು ವಿಚಿತ್ರ ಆಕೃತಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಉತ್ತರಾಖಂಡ್​ದ ರಸ್ತೆಯೊಂದರಲ್ಲಿ ಈ ದೃಶ್ಯ ಕಂಡಿದೆ.

ಕೆಲವರು ಈ ವಿಡಿಯೋವನ್ನು ನೋಡಿ ಆಕೃತಿಯ ಬಗ್ಗೆ ವಿವಿಧ ಅಭಿಪ್ರಾಯ ತಾಳಿದ್ದಾರೆ. ಕೆಲವೊಬ್ಬರು ಇದನ್ನು ದೆವ್ವ ಎಂದು ಅಂದುಕೊಂಡಿದ್ಧಾರೆ. ಇನ್ನೂ ಕೆಲವರು ಈ ಆಕೃತಿಯನ್ನು ಏಲಿಯನ್ ಎಂದು ಕರೆದಿದ್ದಾರೆ. ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜನರು ಈ ಬಗ್ಗೆ ವಾಗ್ವಾದವನ್ನೂ ನಡೆಸಿದ್ದಾರೆ. ಅದು ದೆವ್ವ, ಭೂತ ಏನೂ ಅಲ್ಲ ಎಂದು ಯಾರೋ ಮನುಷ್ಯರೇ ನಡೆದುಕೊಂಡು ಹೋಗುತ್ತಿರುವುದು ಎಂದಿದ್ದಾರೆ. ಒಬ್ಬೊಬ್ಬರು ಅವರ ಅನುಭವ, ಆಲೋಚನೆಗಳಿಗೆ ತಕ್ಕಂತೆ ಪ್ರತಿಕ್ರಿಯೆ ನೀಡಿದ್ಧಾರೆ.

ಈ ರಸ್ತೆ ಸಂಪೂರ್ಣ ಕತ್ತಲಾಗಿರುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದು. ಬೈಕ್ ಅಥವಾ ಕಾರ್ ಮುಂತಾದ ವಾಹನಗಳ ಬೆಳಕಿಗೆ ಆಕೃತಿಯೊಂದು ನಡೆದು ಹೋಗುತ್ತಿರುವುದು ಕಂಡಿದೆ. ವೇಗವಾಗಿ ನಡೆದುಹೋಗುತ್ತಿರುವ ಆಕೃತಿ ಅಸ್ಪಷ್ಟವಾಗಿದೆ. ಹಾಗೇ ನೋಡುತ್ತಿರುವಂತೆ ಮತ್ತೆ ಕೆಲವು ವಾಹನಗಳನ್ನು ಅಲ್ಲೇ ನಿಲ್ಲಿಸಿದ್ದಾರೆ. ಮೊಬೈಲ್​ನಲ್ಲಿ ವಿಡಿಯೋ ಕೂಡ ಮಾಡಿದ್ದಾರೆ.

ವಿಡಿಯೋ ಮಾಡುತ್ತಿರುವಂತೆ ಆ ಆಕೃತಿ ಸ್ವಲ್ಪ ಹೊತ್ತು ನಿಂತುಕೊಂಡು ಹಿಂದಿರುಗಿ ನೋಡಿ ಮತ್ತೆ ಮುಂದೆ ಹೋಗುತ್ತದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ನೂರಾರು ಮಂದಿ ಇದನ್ನು ಶೇರ್ ಮಾಡಿಕೊಂಡಿದ್ದಾರೆ. ಇದು ಏನು? ಎಂಬ ಪ್ರಶ್ನೆಯೇ ಕೊನೆಗೆ ಹಲವರು ಇದನ್ನು ಶೇರ್ ಮಾಡಿಕೊಳ್ಳುವಂತೆ ಮಾಡಿದೆ.

ಇದನ್ನೂ ಓದಿ: Viral Video: ಕೇರಂ ಆಟದ ನಡುವೆ ಅಜ್ಜಂದಿರ ಜಟಾಪಟಿ; ವೈರಲ್ ವಿಡಿಯೋ ನೋಡಿ ನಕ್ಕು ಹಗುರಾದ ನೆಟ್ಟಿಗರು

Viral Video: ಪುಟ್ಟ ಮಕ್ಕಳಿಗೂ ಎಷ್ಟು ಕೆಲಸ? 6 ವರ್ಷದ ಬಾಲಕಿಯಿಂದ ಪ್ರಧಾನಿ ನರೇಂದ್ರ ಮೋದಿಗೆ ದೂರು; ವಿಡಿಯೋ ನೋಡಿ

Published On - 5:50 pm, Mon, 31 May 21

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್