AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಬೈಕ್ ಹ್ಯಾಂಡಲ್​ನಿಂದ ವಿಚಿತ್ರ ಶಬ್ದ; ತೆರೆದು ನೋಡಿದ್ರೆ 5 ಅಡಿ ಉದ್ದದ ನಾಗರಹಾವು!

ಬೈಕ್ ವೇಗವನ್ನು ಹೆಚ್ಚಿದ ತಕ್ಷಣ ವಿಚಿತ್ರವಾದ ಶಬ್ದ ಕೇಳಿಸಿದೆ. ಬಳಿಕ ಹ್ಯಾಂಡಲ್ ಕಡೆ ನೋಡಿದಾಕ್ಷಣ ಏನೋ ಅಂಟಿಕೊಂಡಂತೆ ಭಾಸವಾಗಿದೆ.

Shocking News: ಬೈಕ್ ಹ್ಯಾಂಡಲ್​ನಿಂದ ವಿಚಿತ್ರ ಶಬ್ದ; ತೆರೆದು ನೋಡಿದ್ರೆ 5 ಅಡಿ ಉದ್ದದ ನಾಗರಹಾವು!
ಬೈಕ್ ಹ್ಯಾಂಡಲ್​ನಿಂದ ವಿಚಿತ್ರ ಶಬ್ದ; ತೆರೆದು ನೋಡಿದ್ರೆ ದೈತ್ಯಾಕಾರದ ನಾಗರಹಾವು!
TV9 Web
| Edited By: |

Updated on:Aug 10, 2021 | 1:41 PM

Share

ಮಹಾರಾಷ್ಟ್ರದ ಪುಣೆಯಲ್ಲಿ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿ ಬೈಕ್​ನಲ್ಲಿ ಮನೆಗೆ ತೆರಳುತ್ತಿರುವಾಗ ಇದ್ದಕ್ಕಿದ್ದಂತೆ ಬೈಕ್​ನಿಂದ ವಿಚಿತ್ರ ಶಬ್ದವೊಂದು ಕೇಳಿಸಲು ಪ್ರಾರಂಭಿಸಿದೆ. ತಕ್ಷಣವೇ ಬೈಕ್ ನಿಲ್ಲಿಸಿ ಹ್ಯಾಂಡಲ್ ತೆರೆದು ನೋಡುವಷ್ಟರಲ್ಲಿ ದೈತ್ಯಾಕಾರದ ನಾಗರ ಹಾವು ಅಡಗಿರುವುದು ಕಂಡು ಬಂದಿದೆ.

ಘಟನೆ ಪುಣೆಯ ಇಂದಾಪುರ ನಿಮಗಾಂವ್ ಕೆಟ್ಟಿ ಗ್ರಾಮದ ಬಳಿ ನಡೆದಿದೆ. ಮಂಗಳವಾರ ಎಂದಿನಂತೆ ಕೃಷಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿರುವಾಗ ಘಟನೆ ನಡೆದಿದೆ. ಬೈಕ್ ವೇಗವನ್ನು ಹೆಚ್ಚಿದ ತಕ್ಷಣ ವಿಚಿತ್ರವಾದ ಶಬ್ದ ಕೇಳಿಸಿದೆ. ಬಳಿಕ ಹ್ಯಾಂಡಲ್ ಕಡೆ ನೋಡಿದಾಕ್ಷಣ ಏನೋ ಅಂಟಿಕೊಂಡಂತೆ ಭಾಸವಾಗಿದೆ. ಬೈಕ್ ನಿಲ್ಲಿಸಿದ ತಕ್ಷಣ ನಾಗರ ಹಾವು ಅಡಿಗಿ ಕುಳಿತಿರುವುದು ಕಂಡು ಬಂದಿದೆ.

Pune black cobra

ನಾಗರ ಹಾವು

ಹಾವು ಬೈಕ್ ಹ್ಯಾಂಡಲ್​ನ ಪೈಪ್​ನಲ್ಲಿ ಸಿಲುಕಿಕೊಂಡಿರುವುದರಿಂದ ಹೊರಬರಲು ಕಷ್ಟವಾಗುತ್ತಿತ್ತು. ಹಾವನ್ನು ನೋಡಿ ಸವಾರ ಕಂಗಾಲಾಗಿದ್ದಾರೆ. ಆದರೂ ಸಹ ಧೈರ್ಯದಿಂದ ಗ್ಯಾರೇಜ್​ವರೆಗೆ ಬೈಕ್ಅನ್ನು ತಳ್ಳಿಕೊಂಡು ಸಾಗಿದ್ದಾರೆ. ಹಾವು ಹಿಡಿಯುವವರನ್ನು ಕರೆಸಿ ಬೈಕ್​ ಹೆಡ್​ಲೈಟ್​ ತೆರೆದು ಹಾವನ್ನು ಹೊರತೆಗೆಯಲಾಗಿದೆ. ಹ್ಯಾಂಡಲ್​ ಕೊಳವೆಯಲ್ಲಿ ಸಿಲುಕಿದ್ದ ಹಾವನ್ನು ಹೊರತೆಗೆಯಲಾಗಿದೆ. ಹಾವು ಸುಮಾರು 5 ಅಡಿ ಉದ್ದವಾಗಿದೆ. ಹಾವನ್ನು ರಕ್ಷಿಸಿ ಕಾಡಿಗೆ ಬಿಡಲಾಗಿದೆ.

ಇದನ್ನೂ ಓದಿ:

5 ಅಡಿ ಉದ್ದದ ಹಾವು ಸೆರೆ ಹಿಡಿದ ಮಹಾರಾಷ್ಟ್ರದ ಬಿಜೆಪಿ ನಾಯಕ ಗಿರೀಶ್ ಮಹಾಜನ್; ಧೈರ್ಯಕ್ಕೆ ನೆಟ್ಟಿಗರ ಶ್ಲಾಘನೆ

ಕಾಳಿಂಗ ಸರ್ಪಗಳು ದುರ್ಬಲ ಹಾವುಗಳನ್ನೇ ತಮ್ಮ ಆಹಾರ ಮಾಡಿಕೊಂಡಿರುವುದು ನಿಮಗೆ ಗೊತ್ತಾ?

Published On - 1:29 pm, Tue, 10 August 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್