Shocking News: ಬೈಕ್ ಹ್ಯಾಂಡಲ್​ನಿಂದ ವಿಚಿತ್ರ ಶಬ್ದ; ತೆರೆದು ನೋಡಿದ್ರೆ 5 ಅಡಿ ಉದ್ದದ ನಾಗರಹಾವು!

ಬೈಕ್ ವೇಗವನ್ನು ಹೆಚ್ಚಿದ ತಕ್ಷಣ ವಿಚಿತ್ರವಾದ ಶಬ್ದ ಕೇಳಿಸಿದೆ. ಬಳಿಕ ಹ್ಯಾಂಡಲ್ ಕಡೆ ನೋಡಿದಾಕ್ಷಣ ಏನೋ ಅಂಟಿಕೊಂಡಂತೆ ಭಾಸವಾಗಿದೆ.

Shocking News: ಬೈಕ್ ಹ್ಯಾಂಡಲ್​ನಿಂದ ವಿಚಿತ್ರ ಶಬ್ದ; ತೆರೆದು ನೋಡಿದ್ರೆ 5 ಅಡಿ ಉದ್ದದ ನಾಗರಹಾವು!
ಬೈಕ್ ಹ್ಯಾಂಡಲ್​ನಿಂದ ವಿಚಿತ್ರ ಶಬ್ದ; ತೆರೆದು ನೋಡಿದ್ರೆ ದೈತ್ಯಾಕಾರದ ನಾಗರಹಾವು!
Follow us
| Updated By: shruti hegde

Updated on:Aug 10, 2021 | 1:41 PM

ಮಹಾರಾಷ್ಟ್ರದ ಪುಣೆಯಲ್ಲಿ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿ ಬೈಕ್​ನಲ್ಲಿ ಮನೆಗೆ ತೆರಳುತ್ತಿರುವಾಗ ಇದ್ದಕ್ಕಿದ್ದಂತೆ ಬೈಕ್​ನಿಂದ ವಿಚಿತ್ರ ಶಬ್ದವೊಂದು ಕೇಳಿಸಲು ಪ್ರಾರಂಭಿಸಿದೆ. ತಕ್ಷಣವೇ ಬೈಕ್ ನಿಲ್ಲಿಸಿ ಹ್ಯಾಂಡಲ್ ತೆರೆದು ನೋಡುವಷ್ಟರಲ್ಲಿ ದೈತ್ಯಾಕಾರದ ನಾಗರ ಹಾವು ಅಡಗಿರುವುದು ಕಂಡು ಬಂದಿದೆ.

ಘಟನೆ ಪುಣೆಯ ಇಂದಾಪುರ ನಿಮಗಾಂವ್ ಕೆಟ್ಟಿ ಗ್ರಾಮದ ಬಳಿ ನಡೆದಿದೆ. ಮಂಗಳವಾರ ಎಂದಿನಂತೆ ಕೃಷಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿರುವಾಗ ಘಟನೆ ನಡೆದಿದೆ. ಬೈಕ್ ವೇಗವನ್ನು ಹೆಚ್ಚಿದ ತಕ್ಷಣ ವಿಚಿತ್ರವಾದ ಶಬ್ದ ಕೇಳಿಸಿದೆ. ಬಳಿಕ ಹ್ಯಾಂಡಲ್ ಕಡೆ ನೋಡಿದಾಕ್ಷಣ ಏನೋ ಅಂಟಿಕೊಂಡಂತೆ ಭಾಸವಾಗಿದೆ. ಬೈಕ್ ನಿಲ್ಲಿಸಿದ ತಕ್ಷಣ ನಾಗರ ಹಾವು ಅಡಿಗಿ ಕುಳಿತಿರುವುದು ಕಂಡು ಬಂದಿದೆ.

Pune black cobra

ನಾಗರ ಹಾವು

ಹಾವು ಬೈಕ್ ಹ್ಯಾಂಡಲ್​ನ ಪೈಪ್​ನಲ್ಲಿ ಸಿಲುಕಿಕೊಂಡಿರುವುದರಿಂದ ಹೊರಬರಲು ಕಷ್ಟವಾಗುತ್ತಿತ್ತು. ಹಾವನ್ನು ನೋಡಿ ಸವಾರ ಕಂಗಾಲಾಗಿದ್ದಾರೆ. ಆದರೂ ಸಹ ಧೈರ್ಯದಿಂದ ಗ್ಯಾರೇಜ್​ವರೆಗೆ ಬೈಕ್ಅನ್ನು ತಳ್ಳಿಕೊಂಡು ಸಾಗಿದ್ದಾರೆ. ಹಾವು ಹಿಡಿಯುವವರನ್ನು ಕರೆಸಿ ಬೈಕ್​ ಹೆಡ್​ಲೈಟ್​ ತೆರೆದು ಹಾವನ್ನು ಹೊರತೆಗೆಯಲಾಗಿದೆ. ಹ್ಯಾಂಡಲ್​ ಕೊಳವೆಯಲ್ಲಿ ಸಿಲುಕಿದ್ದ ಹಾವನ್ನು ಹೊರತೆಗೆಯಲಾಗಿದೆ. ಹಾವು ಸುಮಾರು 5 ಅಡಿ ಉದ್ದವಾಗಿದೆ. ಹಾವನ್ನು ರಕ್ಷಿಸಿ ಕಾಡಿಗೆ ಬಿಡಲಾಗಿದೆ.

ಇದನ್ನೂ ಓದಿ:

5 ಅಡಿ ಉದ್ದದ ಹಾವು ಸೆರೆ ಹಿಡಿದ ಮಹಾರಾಷ್ಟ್ರದ ಬಿಜೆಪಿ ನಾಯಕ ಗಿರೀಶ್ ಮಹಾಜನ್; ಧೈರ್ಯಕ್ಕೆ ನೆಟ್ಟಿಗರ ಶ್ಲಾಘನೆ

ಕಾಳಿಂಗ ಸರ್ಪಗಳು ದುರ್ಬಲ ಹಾವುಗಳನ್ನೇ ತಮ್ಮ ಆಹಾರ ಮಾಡಿಕೊಂಡಿರುವುದು ನಿಮಗೆ ಗೊತ್ತಾ?

Published On - 1:29 pm, Tue, 10 August 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ