AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಅರ್ಜೆಂಟ್ ಡಾಕ್ಟರ್ ಸಾಹೇಬ್ರನ್ನ ನೋಡ್ಬೇಕಿತ್ತು;  ಆಸ್ಪತ್ರೆ ವಾರ್ಡ್​​ಗೆ ಬಂದ ಗೂಳಿ 

ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಕುತೂಹಲಕಾರಿ ಹಾಗೂ ಹಾಸ್ಯಮಯ ವಿಡಿಯೋಗಳು, ಪೋಸ್ಟ್​​​ಗಳು ಹರಿದಾಡುತ್ತಿರುತ್ತವೆ. ಸದ್ಯ ಅಂತಹದ್ದೇ ಪೋಸ್ಟ್ ಒಂದು ಇದೀಗ ವೈರಲ್ ಆಗಿದ್ದು, ಉತ್ತರ ಪ್ರದೇಶದಲ್ಲಿನ ಜಿಲ್ಲಾ ಆಸ್ಪತ್ರೆಯ ವಾರ್ಡ್ ಒಳಗೆ ಏಕಾಏಕಿ ಗೂಳಿಯೊಂದು ನುಗ್ಗಿದೆ. ಈ ದೃಶ್ಯವನ್ನು ಕಂಡು ಅಬ್ಬಬ್ಬಾ ಈ ದೈತ್ಯ ಗೂಳಿ ಅದೇಗೆ ಆಸ್ಪತ್ರೆಗೆ ನುಗ್ಗಲು ಸಾಧ್ಯ ಎಂದು ನೋಡುಗರು ಆಶ್ಚರ್ಯಚಕಿತರಾಗಿದ್ದಾರೆ. 

Viral Post: ಅರ್ಜೆಂಟ್ ಡಾಕ್ಟರ್ ಸಾಹೇಬ್ರನ್ನ ನೋಡ್ಬೇಕಿತ್ತು;  ಆಸ್ಪತ್ರೆ ವಾರ್ಡ್​​ಗೆ ಬಂದ ಗೂಳಿ 
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Feb 22, 2024 | 3:26 PM

Share

ಹೆಚ್ಚಾಗಿ ನಗರಗಳಲ್ಲಿ, ಪಟ್ಟಣಗಳಲ್ಲಿ ಬೀಡಾಡಿ ಪ್ರಾಣಿಗಳ ಕಾಟ ಇದ್ದೇ ಇರುತ್ತವೆ. ಆಹಾರವನ್ನರಸುತ್ತಾ ಬರುವ ಈ ಮುಗ್ಧ ಜೀವಿಗಳು ಹಾಗೊಮ್ಮೆ ಹೀಗೊಮ್ಮೆ ಸ್ಥಳೀಯರಿಗೆ ತೊಂದರೆ ಕೊಡುತ್ತಿರುತ್ತವೆ. ಸಂತೆಗಳಲ್ಲಿ ತರಕಾರಿ ತಿನ್ನೋದಾಗಿರಲಿ, ವಾಹನ ಸಂಚಾರಕ್ಕೆ ಅಡಚಣೆ ಮಾಡೋದಾಗಿರಲಿ ಈ ರೀತಿ ಸಣ್ಣ ಪುಟ್ಟ ತೊಂದರೆಗಳನ್ನು ಉಂಟು ಮಾಡುತ್ತವೆ. ಕೆಲ ದಿನಗಳ ಹಿಂದೆ ಆಹಾರವನ್ನರಸುತ್ತಾ ಬಂದ ಗೂಳಿಯೊಂದು ಉತ್ತರ ಪ್ರದೇಶದ ಉನ್ನಾವೋದಲ್ಲಿರು ಎಸ್.ಬಿ.ಐ ಬ್ಯಾಂಕಿಗೆ   ನುಗ್ಗಿದ ಸುದ್ದಿಯೊಂದು ಬಹಳ ವೈರಲ್ ಆಗಿತ್ತು, ಈಗ ಅಂತಹದ್ದೇ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದ್ದು, ಆಹಾರವನ್ನರಸುತ್ತಾ ಬಂತಂತಹ ಬೀಡಾಡಿ ಗೂಳಿಯೊಂದು ಆಸ್ಪತ್ರೆಯ ವಾರ್ಡ್ ಒಳಗೆ  ಎಂಟ್ರಿ ಕೊಟ್ಟಿದೆ. ಈ ಕುರಿತ  ಫೋಟೋವೊಂದು ಇದೀಗ  ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಘಟನೆ ಉತ್ತರ ಪ್ರದೇಶದ  ರಾಯ್ಬರೇಲಿಯ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದ್ದು, ಆಹಾರವನ್ನರಸುತ್ತಾ ಬಂದಂತಹ ಗೂಳಿಯೊಂದು ದಾರಿ ತಪ್ಪಿ ಆಸ್ಪತ್ರೆಯ ವಾರ್ಡಿನೊಳಗೆ ನುಗ್ಗಿದೆ. ಸೋಮವಾರ (ಫೆ.19) ರಾತ್ರಿ 10 ಗಂಟೆಯ ಸುಮಾರಿಗೆ ರಾಯ್ಬರೇಲಿ ಜಿಲ್ಲಾ ಆಸ್ಪತ್ರೆಯ ವಾರ್ಡ್ ನಂಬರ್ ಎರಡಕ್ಕೆ ಗೂಳಿಯಂದು  ಏಕಾಏಕಿ ಪ್ರವೇಶಿಸಿದ್ದು, ಈ ಸಂದರ್ಭದಲ್ಲಿ ಆಸ್ಪತ್ರೆ ಸಿಬ್ಬಂದಿಗಳು ಮತ್ತು ರೋಗಿಗಳಲ್ಲಿ ಆತಂಕ ಉಂಟಾಯಿತು. ನಂತರ ಹೇಗೋ ಆ ಗೂಳಿಯನ್ನು ವಾರ್ಡ್ ನಿಂದ ಹೊರಗೆ ಕಳುಹಿಸಲಾಯಿತು.

ಈ ಕುರಿತ ಫೋಟೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ಫೋಟೋವನ್ನು ಸಚಿನ್ ಗುಪ್ತಾ (@SachinGuptaUp) ಎಂಬವರು ತಮ್ಮ X ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ವೈರಲ್​​ ಪೋಸ್ಟ್ ಇಲ್ಲಿದೆ:

ಈ ವೈರಲ್ ಪೋಟೋದಲ್ಲಿ ಉತ್ತರ ಪ್ರದೇಶದ ರಾಯ್ಬರೇಲಿಯ ಜಿಲ್ಲಾ ಆಸ್ಪತ್ರೆಯ ವಾರ್ಡ್​​ನಲ್ಲಿ ಗೂಳಿಯೊಂದು ಶಾಂತ ರೀತಿಯಲ್ಲಿ ನಿಂತಿರುವುದನ್ನು ಹಾಗೂ ಅಲ್ಲಿದ್ದ ರೋಗಿಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಆ ಗೂಳಿಯನ್ನು ಆಶ್ಚರ್ಯಚಕಿತರಾಗಿ ನೋಡುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಕರಿಮಣಿ ಮಾಲೀಕ ನಾನಲ್ಲಂತಿ, ಅಂತು ಇಂತು ಮುಗಿಸ್ಯಾಕ ನಿಂತಿ ನೀ ನನ್ನ ಸಂತಿ 

ಫೆಬ್ರವರಿ  20 ರಂದು ಹಂಚಿಕೊಳ್ಳಲಾದ  ಈ ಪೋಸ್ಟ್ 7 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಕಮೆಂಟ್ಸ್ ಗಳೂ ಹರಿದು ಬಂದಿವೆ. ಒಬ್ಬ ಬಳಕೆದಾರರು ʼರೋಗಿಗಳನ್ನು ದಿಢೀರ್ ತಪಾಸಣೆ ಮಾಡಲು ಬಂದಿರುವ ಗೌರವಾನ್ವಿತ ಡಾಕ್ಟರ್ʼ ಎಂದು ತಮಾಷೆಯ ಕಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇಷ್ಟು ದೊಡ್ಡ ಆಸ್ಪತ್ರೆಯ ಒಳಗೆ ಪ್ರಾಣಿ ಬಂದಿದ್ದರೂ ಅಲ್ಲಿರುವವರು ಸುಮ್ಮನಿದ್ದಾರೆ, ಬಹುಶಃ ಅಲ್ಲಿನ ವೈದ್ಯರು ಮತ್ತು ರೋಗಿಗಳು ಪ್ರಾಣಿಪ್ರಿಯರಾಗಿರಬೇಕುʼ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಬಹುಶಃ ಈ ಗೂಳಿ ಟೆಟನಸ್ ಇಂಜೆಕ್ಷನ್ ತೆಗೆದುಕೊಳ್ಳಲು ಬಂದಿರಬೇಕುʼ  ಎಂದು ತಮಾಷೆಯ ಕಮೆಂಟ್ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು ಅಬ್ಬಬ್ಬಾ ಆಸ್ಪತ್ರೆಯ ಒಳಗೆ ದೈತ್ಯ ಗೂಳಿ ನುಗ್ಗಲು ಹೇಗೆ ಸಾಧ್ಯ ಎಂದು ಅಚ್ಚರಿ ಪಟ್ಟಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!