AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ; ದೇವರಂತೆ ಬಂದು ಆಕೆಯನ್ನು ಕಾಪಾಡಿದ ಬೀದಿ ನಾಯಿ

ನಾಯಿ ಮತ್ತು ಮನುಷ್ಯನ ಸಂಬಂಧ ಎಂತಹದ್ದು ಎಂದು ವಿವರಿಸಬೇಕಿಲ್ಲ. ವಿಶ್ವಾಸಕ್ಕೆ ಅನ್ವರ್ಥವಾಗಿರುವ ಶ್ವಾನಗಳು ನಮಗಾಗಿ ಎಂತಹ ತ್ಯಾಗಕ್ಕೂ, ಅಪಾಯಗಳನ್ನು ಎದುರಿಸಲು ಹಿಂಜರಿಯುವುದಿಲ್ಲ. ಇದಕ್ಕೆ ಸೂಕ್ತ ನಿದರ್ಶನದಂತಿರುವ ಘಟನೆಯೊಂದು ಇದೀಗ ನಡೆದಿದ್ದು, ಬೀದಿನಾಯಿಯೊಂದು ಮಹಿಳೆಯೊಬ್ಬರನ್ನು ಅತ್ಯಾಚಾರದಿಂದ ರಕ್ಷಿಸಿದೆ. ಈ ಸುದ್ದಿ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ.

Viral: ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ; ದೇವರಂತೆ ಬಂದು ಆಕೆಯನ್ನು ಕಾಪಾಡಿದ ಬೀದಿ ನಾಯಿ
ಮಾಲಾಶ್ರೀ ಅಂಚನ್​
| Edited By: |

Updated on: Jul 07, 2024 | 5:56 PM

Share

ಮುಂಬೈ: ನಿಯತ್ತಿಗೆ ಮತ್ತೊಂದು ಹೆಸರೇ ನಾಯಿ. ವಿಶ್ವಾಸಕ್ಕೆ ಅನ್ವರ್ಥವಾಗಿರುವ ಶ್ವಾನಗಳು ತಮ್ಮ ಮಾಲೀಕನಾಗಿ ಎಂತಹ ತ್ಯಾಗಕ್ಕೂ, ಎಂತಹ ಅಪಾಯಗಳನ್ನು ಎದುರಿಸಲು ಕೂಡ ಹಿಂಜರಿಯುವುದಿಲ್ಲ. ಅಷ್ಟೇ ಅಲ್ಲದೆ ಬೀದಿ ನಾಯಿಗಳೂ ಮನುಷ್ಯನ ಸಹಾಯಕ್ಕೆ ಧಾವಿಸಿದ ಅದೆಷ್ಟೋ ನಿದರ್ಶನಗಳಿವೆ. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ಕಾಮುಕನೊಬ್ಬನಿಂದ ಅತ್ಯಾಚಾರಕ್ಕೊಳಗಾಗುತ್ತಿದ್ದ ಮಹಿಳೆಯನ್ನು ಬೀದಿ ನಾಯಿಯೊಂದು ಕಾಪಾಡಿದೆ. ಈ ಸುದ್ದಿ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ.

ಈ ಘಟನೆ ಜೂನ್‌ 30 ರಂದು ಮುಂಬೈನ ವಾಸಯಿಯಲ್ಲಿ ನಡೆದಿದ್ದು, ಇಲ್ಲಿನ ಮಾಣಿಕ್‌ಪುರ ಗಲ್ಲಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ 32 ವರ್ಷದ ಮಹಿಳೆಯ ಮೇಲೆ 35 ವರ್ಷ ಸಂದೀಪ್‌ ಖೋತ್‌ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ವೃತ್ತಿಯಲ್ಲಿ ಅಕೌಂಟೆಂಟ್‌ ಆಗಿರುವ ಆ ಮಹಿಳೆ ಮಧ್ಯರಾತ್ರಿ ಸುಮಾರು 1.30 ರ ಹೊತ್ತಿಗೆ ಕೆಲಸದಿಂದ ಬರುತ್ತಿರುವ ಸಂದರ್ಭದಲ್ಲಿ ಆಕೆಯನ್ನು ಹಿಂಬಾಲಿಸುತ್ತಾ ಬಂದ ಸಂದೀಪ್‌ ನಿನ್ನನ್ನು ಅತ್ಯಾಚಾರ ಮಾಡುವುದಾಗಿ ಬೆದರಿಸಿ, ನಂತರ ಆಕೆಯ ಬಾಯಿಯನ್ನು ಬಿಗಿಯಾಗಿ ಹಿಡಿದು, ಅಕೆಯನ್ನು ನೆಲಕ್ಕೆ ತಳ್ಳಿ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಆ ಸಂದರ್ಭದಲ್ಲಿ ಅಲ್ಲಿಗೆ ಬಂದಂತಹ ಬೀದಿನಾಯಿಯೊಂದು ಕಾಮುಕನ ಮೇಲೆ ಜೋರಾಗಿ ಬೊಗಳಲು ಪ್ರಾರಂಭಿಸುತ್ತದೆ. ಇದರಿಂದ ಆತ ಕಕ್ಕಾಬಿಕ್ಕಿಯಾಗುತ್ತಾನೆ. ಇದರ ಸದುಪಯೋಗವನ್ನು ಪಡೆದುಕೊಂಡ ಮಹಿಳೆ ಆ ತಕ್ಷಣ ಅಲ್ಲಿಂದ ಓಡಿ ಹೋಗಿದ್ದಾರೆ.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರನ್ನು ನೀಡಿದ್ದು, “ನಾನು ಕತ್ತಲಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ 25 ರಿಂದ 30 ವರ್ಷದ ವ್ಯಕ್ತಿಯೊಬ್ಬ ನನ್ನನ್ನು ಹಿಂಬಾಲಿಸುತ್ತಾ ಬಂದು ಅತ್ಯಾಚಾರ ಮಾಡುತ್ತೇನೆ ಎಂದು ಬೆದರಿಸಿ, ನಂತರ ನನ್ನ ಬಾಯಿಯನ್ನು ಬಿಗಿಯಾಗಿ ಹಿಡಿದು ಕೆಳಗೆ ತಳ್ಳಿ ಹಾಕಿ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಆ ವೇಳೆ ಲೈಂಗಿಕ ದೌರ್ಜನ್ಯವೆಸಗಲು ಮುಂದಾದ ಆ ವ್ಯಕ್ತಿಗೆ ಬೀದಿ ನಾಯಿ ಜೋರಾಗಿ ಬೊಗಳುತ್ತದೆ. ಆ ಸಂದರ್ಭದಲ್ಲಿ ಅಲ್ಲಿಂದ ಓಡಿ ಹೋಗಲು ನಾನು ಯತ್ನಿಸಿದಾಗ ನನ್ನ ಐಫೋನ್‌ ಅನ್ನು ಆತ ಕಸಿದುಕೊಂಡ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ತನ್ನ ಮನೆಯ ಬಾಲ್ಕನಿಯನ್ನು ಬಾಡಿಗೆಗೆ ನೀಡಿದ ವ್ಯಕ್ತಿ, ಬಾಡಿಗೆ ಕೇಳಿದರೆ ಶಾಕ್​​ ಆಗುವುದಂತೂ ಖಂಡಿತಾ!

ಮಹಿಳೆಯ ದೂರಿನ ಮೇರೆಗೆ ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದಾಗ ಆ ಮಹಿಳೆಯನ್ನು ಯಾರೋ ಅಟ್ಟಾಡಿಸಿಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂದಿದೆ. ಈ ಘಟನೆ ನಡೆದ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಲಾಗಿದೆ. ಎಂದು ಪೊಲೀಸ್‌ ಇನ್‌ಸ್ಪೆಕ್ಟರ್‌ ಹರೀಶ್‌ ಪಾಟೀಲ್‌ ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ