AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓರಿಯನ್ ಮಾಲ್​ನಲ್ಲಿರುವ ಈ ಆನೆ ನಿಮ್ಮೊಂದಿಗೆ ಫೋಟೋ ತೆಗೆಸಿಕೊಳ್ಳಲು ಕಾಯುತ್ತಿದೆ

Baadal Nanjundaswamy : ಗ್ರಾಹಕರಲ್ಲಿ ಶಕ್ತಿ, ಆರೋಗ್ಯ, ಸಂತೋಷ ಮತ್ತು ಅದೃಷ್ಟವನ್ನು ಸಾಂಕೇತಿಸುವ ನಿಟ್ಟಿನಲ್ಲಿ ಈ ಕಲಾಕೃತಿ ಚಿತ್ರಿತಗೊಂಡಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಬಾದಲ್​ ನಂಜುಂಡಸ್ವಾಮಿ ಅವರು ಈ ತ್ರಿಡಿ ಆನೆಯನ್ನು ಚಿತ್ರಿಸಿದ್ದಾರೆ.

ಓರಿಯನ್ ಮಾಲ್​ನಲ್ಲಿರುವ ಈ ಆನೆ ನಿಮ್ಮೊಂದಿಗೆ ಫೋಟೋ ತೆಗೆಸಿಕೊಳ್ಳಲು ಕಾಯುತ್ತಿದೆ
ಕಲಾವಿದ ಬಾದಲ್ ನಂಜುಂಡಸ್ವಾಮಿ ತಮ್ಮ ಕಲಾಕೃತಿಗಳೊಂದಿಗೆ
TV9 Web
| Edited By: |

Updated on:Nov 29, 2022 | 2:31 PM

Share

Viral Video : ಮೈಸೂರಿನ ಯುವಕಲಾವಿದ ಬಾದಲ್​ ನಂಜುಂಡಸ್ವಾಮಿ ಬಣ್ಣಕುಂಚಗಳ ವ್ಯಾಮೋಹವಿರುವ ಪ್ರತಿಯೊಬ್ಬರಿಗೂ ಪರಿಚಿತರು. ಅದರಲ್ಲೂ ಬಿಬಿಎಂಪಿ ಅಧಿಕಾರಿಗಳಿಗಂತೂ ಕೇಳುವುದೇ ಬೇಡ! ಸುಮಾರು ಹತ್ತು ವರ್ಷಗಳಿಂದ ಸ್ಟ್ರೀಟ್​ ಆರ್ಟ್​ ಮೂಲಕ ವ್ಯವಸ್ಥೆಯ ಓರೆಕೋರೆಗಳನ್ನು ಗುರುತಿಸುತ್ತ ಬಂದಿರುವ ಇವರು ನಮ್ಮ ನಡುವಿನ ಅಪರೂಪದ, ಪ್ರತಿಭಾನ್ವಿತ ಕಲಾವಿದರು. ಬೆಂಗಳೂರು ಮತ್ತು ಮೈಸೂರಿನ ಹದಗೆಟ್ಟ ರಸ್ತೆಗಳನ್ನು, ರಸ್ತೆಗುಂಡಿಗಳನ್ನು ಕೇಂದ್ರೀಕರಿಸಿಕೊಂಡು ಕಲೆಯ ಮೂಲಕ ವ್ಯವಸ್ಥೆಯ ಚುಕ್ಕಾಣಿ ಹಿಡಿದವರ ಗಮನ ಸೆಳೆದ ಇವರ ಸೃಜನಶೀಲತೆ ಅಗಾಧ. ಬಾದಲ್​ ಒಂದು ಹಂತದಲ್ಲಿ ಎಷ್ಟು ಜನಪ್ರಿಯರಾದರೆಂದರೆ, ಯಾರೇ ಎಲ್ಲೇ ರಸ್ತೆಗುಂಡಿಗಳನ್ನು ನೋಡಿದರೂ ಮೊದಲು ಬಾದಲ್​ ಅವರಿಗೆ ತಿಳಿಸಬೇಕು ಎನ್ನುವಷ್ಟು! ಹಾಗಿದ್ದರೆ ಬಾದಲ್​ ಈಗ ಹೇಗೆ ಸುದ್ದಿಯಲ್ಲಿದ್ದಾರೆ? ಈ ವಿಡಿಯೋ ನೋಡಿ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by Orion Malls (@orionmalls)

ಇತ್ತೀಚೆಗೆ ಬೆಂಗಳೂರಿನ ಓರಿಯನ್​ ಮಾಲ್​ನಲ್ಲಿ ಬಾದಲ್​ ಸೃಷ್ಟಿಸಿದ ತ್ರೀಡಿ ಆನೆ ಬೆಂಗಳೂರಿಗರನ್ನು ಬಹುವಾಗಿ ಸೆಳೆಯುತ್ತಿದೆ. ಗೋಡೆಯೊಡೆದುಕೊಂಡು ಇನ್ನೇನು ಆನೆ ಬಂದೇ ಬಿಡುವುದೇ ಎಂಬಂಥ ನೈಜ ಮತ್ತು ಮಾಂತ್ರಿಕತೆಯನ್ನು ಬಾದಲ್ ಇಲ್ಲಿ​ ಕಟ್ಟಿಕೊಟ್ಟಿದ್ದಾರೆ.

ಬೆಂಗಳೂರಿನ ಓರಿಯನ್ ಮಾಲ್​ನಲ್ಲಿರುವ ಈ ಆನೆಯ ಕಲಾಕೃತಿಯ ಬಳಿ ಯಾರೂ ಹೋಗಿ ಫೋಟೋ ತೆಗೆಸಿಕೊಳ್ಳಬಹುದು. ‘ಈ ಸ್ಥಳದಲ್ಲಿ ಫೋಟೋ ತೆಗೆಸಿಕೊಳ್ಳುವಾಗ ಕಡಿಮೆ ಬೆಳಕಿದ್ದರೆ ಒಳ್ಳೆಯದು’ ಎಂದು ಸಲಹೆಯನ್ನೂ ನೀಡಿದ್ದಾರೆ ಬಾದಲ್​.

ರಂಗಕಲಾವಿದರು, ಕಥೆಗಾರರು, ಕಲಾನಿರ್ದೇಶಕರು ಆಗಿರುವ ಬಾದಲ್​ ಈಗಾಗಲೇ ತಮ್ಮ ಚಿತ್ರಕಲೆಯ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವಂಥವರು. ಇವರ ಅದ್ಭುತ ಕಲೆಗಾರಿಕೆಗೆ ಮತ್ತಷ್ಟು ಅಂತಾರಾಷ್ಟ್ರೀಯ ಮನ್ನಣೆ ಸಿಗಬೇಕೆಂದು ನೆಟ್ಟಿಗರು ಹಾರೈಸಿದ್ದಾರೆ. ಇವರ ಸೃಜನಶೀಲತೆಗೆ ಇವರೇ ಸಾಟಿ ಎಂದು ಶ್ಲಾಘಿಸಿದ್ದಾರೆ.

ಮುಂದಿನ ದಿನಗಳಲ್ಲಿ ಬಾದಲ್​ ಅವರ ಆರ್ಟ್​ಮ್ಯಾಜಿಕ್​ ಎತ್ತ ಸಾಗಬಹುದು ಎಂಬ ನಿರೀಕ್ಷೆಯಲ್ಲಿ ಅವರ ಅಭಿಮಾನಿ ಬಳಗ ಕಾಯುತ್ತಿದೆ. ಓರಿಯನ್​ ಮಾಲ್​ಗೆ ಭೇಟಿ ಕೊಟ್ಟಾಗ ಮರೆಯದಿರಿ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:13 pm, Tue, 29 November 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ