AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓರಿಯನ್ ಮಾಲ್​ನಲ್ಲಿರುವ ಈ ಆನೆ ನಿಮ್ಮೊಂದಿಗೆ ಫೋಟೋ ತೆಗೆಸಿಕೊಳ್ಳಲು ಕಾಯುತ್ತಿದೆ

Baadal Nanjundaswamy : ಗ್ರಾಹಕರಲ್ಲಿ ಶಕ್ತಿ, ಆರೋಗ್ಯ, ಸಂತೋಷ ಮತ್ತು ಅದೃಷ್ಟವನ್ನು ಸಾಂಕೇತಿಸುವ ನಿಟ್ಟಿನಲ್ಲಿ ಈ ಕಲಾಕೃತಿ ಚಿತ್ರಿತಗೊಂಡಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಬಾದಲ್​ ನಂಜುಂಡಸ್ವಾಮಿ ಅವರು ಈ ತ್ರಿಡಿ ಆನೆಯನ್ನು ಚಿತ್ರಿಸಿದ್ದಾರೆ.

ಓರಿಯನ್ ಮಾಲ್​ನಲ್ಲಿರುವ ಈ ಆನೆ ನಿಮ್ಮೊಂದಿಗೆ ಫೋಟೋ ತೆಗೆಸಿಕೊಳ್ಳಲು ಕಾಯುತ್ತಿದೆ
ಕಲಾವಿದ ಬಾದಲ್ ನಂಜುಂಡಸ್ವಾಮಿ ತಮ್ಮ ಕಲಾಕೃತಿಗಳೊಂದಿಗೆ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Nov 29, 2022 | 2:31 PM

Viral Video : ಮೈಸೂರಿನ ಯುವಕಲಾವಿದ ಬಾದಲ್​ ನಂಜುಂಡಸ್ವಾಮಿ ಬಣ್ಣಕುಂಚಗಳ ವ್ಯಾಮೋಹವಿರುವ ಪ್ರತಿಯೊಬ್ಬರಿಗೂ ಪರಿಚಿತರು. ಅದರಲ್ಲೂ ಬಿಬಿಎಂಪಿ ಅಧಿಕಾರಿಗಳಿಗಂತೂ ಕೇಳುವುದೇ ಬೇಡ! ಸುಮಾರು ಹತ್ತು ವರ್ಷಗಳಿಂದ ಸ್ಟ್ರೀಟ್​ ಆರ್ಟ್​ ಮೂಲಕ ವ್ಯವಸ್ಥೆಯ ಓರೆಕೋರೆಗಳನ್ನು ಗುರುತಿಸುತ್ತ ಬಂದಿರುವ ಇವರು ನಮ್ಮ ನಡುವಿನ ಅಪರೂಪದ, ಪ್ರತಿಭಾನ್ವಿತ ಕಲಾವಿದರು. ಬೆಂಗಳೂರು ಮತ್ತು ಮೈಸೂರಿನ ಹದಗೆಟ್ಟ ರಸ್ತೆಗಳನ್ನು, ರಸ್ತೆಗುಂಡಿಗಳನ್ನು ಕೇಂದ್ರೀಕರಿಸಿಕೊಂಡು ಕಲೆಯ ಮೂಲಕ ವ್ಯವಸ್ಥೆಯ ಚುಕ್ಕಾಣಿ ಹಿಡಿದವರ ಗಮನ ಸೆಳೆದ ಇವರ ಸೃಜನಶೀಲತೆ ಅಗಾಧ. ಬಾದಲ್​ ಒಂದು ಹಂತದಲ್ಲಿ ಎಷ್ಟು ಜನಪ್ರಿಯರಾದರೆಂದರೆ, ಯಾರೇ ಎಲ್ಲೇ ರಸ್ತೆಗುಂಡಿಗಳನ್ನು ನೋಡಿದರೂ ಮೊದಲು ಬಾದಲ್​ ಅವರಿಗೆ ತಿಳಿಸಬೇಕು ಎನ್ನುವಷ್ಟು! ಹಾಗಿದ್ದರೆ ಬಾದಲ್​ ಈಗ ಹೇಗೆ ಸುದ್ದಿಯಲ್ಲಿದ್ದಾರೆ? ಈ ವಿಡಿಯೋ ನೋಡಿ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by Orion Malls (@orionmalls)

ಇತ್ತೀಚೆಗೆ ಬೆಂಗಳೂರಿನ ಓರಿಯನ್​ ಮಾಲ್​ನಲ್ಲಿ ಬಾದಲ್​ ಸೃಷ್ಟಿಸಿದ ತ್ರೀಡಿ ಆನೆ ಬೆಂಗಳೂರಿಗರನ್ನು ಬಹುವಾಗಿ ಸೆಳೆಯುತ್ತಿದೆ. ಗೋಡೆಯೊಡೆದುಕೊಂಡು ಇನ್ನೇನು ಆನೆ ಬಂದೇ ಬಿಡುವುದೇ ಎಂಬಂಥ ನೈಜ ಮತ್ತು ಮಾಂತ್ರಿಕತೆಯನ್ನು ಬಾದಲ್ ಇಲ್ಲಿ​ ಕಟ್ಟಿಕೊಟ್ಟಿದ್ದಾರೆ.

ಬೆಂಗಳೂರಿನ ಓರಿಯನ್ ಮಾಲ್​ನಲ್ಲಿರುವ ಈ ಆನೆಯ ಕಲಾಕೃತಿಯ ಬಳಿ ಯಾರೂ ಹೋಗಿ ಫೋಟೋ ತೆಗೆಸಿಕೊಳ್ಳಬಹುದು. ‘ಈ ಸ್ಥಳದಲ್ಲಿ ಫೋಟೋ ತೆಗೆಸಿಕೊಳ್ಳುವಾಗ ಕಡಿಮೆ ಬೆಳಕಿದ್ದರೆ ಒಳ್ಳೆಯದು’ ಎಂದು ಸಲಹೆಯನ್ನೂ ನೀಡಿದ್ದಾರೆ ಬಾದಲ್​.

ರಂಗಕಲಾವಿದರು, ಕಥೆಗಾರರು, ಕಲಾನಿರ್ದೇಶಕರು ಆಗಿರುವ ಬಾದಲ್​ ಈಗಾಗಲೇ ತಮ್ಮ ಚಿತ್ರಕಲೆಯ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವಂಥವರು. ಇವರ ಅದ್ಭುತ ಕಲೆಗಾರಿಕೆಗೆ ಮತ್ತಷ್ಟು ಅಂತಾರಾಷ್ಟ್ರೀಯ ಮನ್ನಣೆ ಸಿಗಬೇಕೆಂದು ನೆಟ್ಟಿಗರು ಹಾರೈಸಿದ್ದಾರೆ. ಇವರ ಸೃಜನಶೀಲತೆಗೆ ಇವರೇ ಸಾಟಿ ಎಂದು ಶ್ಲಾಘಿಸಿದ್ದಾರೆ.

ಮುಂದಿನ ದಿನಗಳಲ್ಲಿ ಬಾದಲ್​ ಅವರ ಆರ್ಟ್​ಮ್ಯಾಜಿಕ್​ ಎತ್ತ ಸಾಗಬಹುದು ಎಂಬ ನಿರೀಕ್ಷೆಯಲ್ಲಿ ಅವರ ಅಭಿಮಾನಿ ಬಳಗ ಕಾಯುತ್ತಿದೆ. ಓರಿಯನ್​ ಮಾಲ್​ಗೆ ಭೇಟಿ ಕೊಟ್ಟಾಗ ಮರೆಯದಿರಿ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:13 pm, Tue, 29 November 22

ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್