ಓರಿಯನ್ ಮಾಲ್​ನಲ್ಲಿರುವ ಈ ಆನೆ ನಿಮ್ಮೊಂದಿಗೆ ಫೋಟೋ ತೆಗೆಸಿಕೊಳ್ಳಲು ಕಾಯುತ್ತಿದೆ

Baadal Nanjundaswamy : ಗ್ರಾಹಕರಲ್ಲಿ ಶಕ್ತಿ, ಆರೋಗ್ಯ, ಸಂತೋಷ ಮತ್ತು ಅದೃಷ್ಟವನ್ನು ಸಾಂಕೇತಿಸುವ ನಿಟ್ಟಿನಲ್ಲಿ ಈ ಕಲಾಕೃತಿ ಚಿತ್ರಿತಗೊಂಡಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಬಾದಲ್​ ನಂಜುಂಡಸ್ವಾಮಿ ಅವರು ಈ ತ್ರಿಡಿ ಆನೆಯನ್ನು ಚಿತ್ರಿಸಿದ್ದಾರೆ.

ಓರಿಯನ್ ಮಾಲ್​ನಲ್ಲಿರುವ ಈ ಆನೆ ನಿಮ್ಮೊಂದಿಗೆ ಫೋಟೋ ತೆಗೆಸಿಕೊಳ್ಳಲು ಕಾಯುತ್ತಿದೆ
ಕಲಾವಿದ ಬಾದಲ್ ನಂಜುಂಡಸ್ವಾಮಿ ತಮ್ಮ ಕಲಾಕೃತಿಗಳೊಂದಿಗೆ
Follow us
| Updated By: ಶ್ರೀದೇವಿ ಕಳಸದ

Updated on:Nov 29, 2022 | 2:31 PM

Viral Video : ಮೈಸೂರಿನ ಯುವಕಲಾವಿದ ಬಾದಲ್​ ನಂಜುಂಡಸ್ವಾಮಿ ಬಣ್ಣಕುಂಚಗಳ ವ್ಯಾಮೋಹವಿರುವ ಪ್ರತಿಯೊಬ್ಬರಿಗೂ ಪರಿಚಿತರು. ಅದರಲ್ಲೂ ಬಿಬಿಎಂಪಿ ಅಧಿಕಾರಿಗಳಿಗಂತೂ ಕೇಳುವುದೇ ಬೇಡ! ಸುಮಾರು ಹತ್ತು ವರ್ಷಗಳಿಂದ ಸ್ಟ್ರೀಟ್​ ಆರ್ಟ್​ ಮೂಲಕ ವ್ಯವಸ್ಥೆಯ ಓರೆಕೋರೆಗಳನ್ನು ಗುರುತಿಸುತ್ತ ಬಂದಿರುವ ಇವರು ನಮ್ಮ ನಡುವಿನ ಅಪರೂಪದ, ಪ್ರತಿಭಾನ್ವಿತ ಕಲಾವಿದರು. ಬೆಂಗಳೂರು ಮತ್ತು ಮೈಸೂರಿನ ಹದಗೆಟ್ಟ ರಸ್ತೆಗಳನ್ನು, ರಸ್ತೆಗುಂಡಿಗಳನ್ನು ಕೇಂದ್ರೀಕರಿಸಿಕೊಂಡು ಕಲೆಯ ಮೂಲಕ ವ್ಯವಸ್ಥೆಯ ಚುಕ್ಕಾಣಿ ಹಿಡಿದವರ ಗಮನ ಸೆಳೆದ ಇವರ ಸೃಜನಶೀಲತೆ ಅಗಾಧ. ಬಾದಲ್​ ಒಂದು ಹಂತದಲ್ಲಿ ಎಷ್ಟು ಜನಪ್ರಿಯರಾದರೆಂದರೆ, ಯಾರೇ ಎಲ್ಲೇ ರಸ್ತೆಗುಂಡಿಗಳನ್ನು ನೋಡಿದರೂ ಮೊದಲು ಬಾದಲ್​ ಅವರಿಗೆ ತಿಳಿಸಬೇಕು ಎನ್ನುವಷ್ಟು! ಹಾಗಿದ್ದರೆ ಬಾದಲ್​ ಈಗ ಹೇಗೆ ಸುದ್ದಿಯಲ್ಲಿದ್ದಾರೆ? ಈ ವಿಡಿಯೋ ನೋಡಿ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by Orion Malls (@orionmalls)

ಇತ್ತೀಚೆಗೆ ಬೆಂಗಳೂರಿನ ಓರಿಯನ್​ ಮಾಲ್​ನಲ್ಲಿ ಬಾದಲ್​ ಸೃಷ್ಟಿಸಿದ ತ್ರೀಡಿ ಆನೆ ಬೆಂಗಳೂರಿಗರನ್ನು ಬಹುವಾಗಿ ಸೆಳೆಯುತ್ತಿದೆ. ಗೋಡೆಯೊಡೆದುಕೊಂಡು ಇನ್ನೇನು ಆನೆ ಬಂದೇ ಬಿಡುವುದೇ ಎಂಬಂಥ ನೈಜ ಮತ್ತು ಮಾಂತ್ರಿಕತೆಯನ್ನು ಬಾದಲ್ ಇಲ್ಲಿ​ ಕಟ್ಟಿಕೊಟ್ಟಿದ್ದಾರೆ.

ಬೆಂಗಳೂರಿನ ಓರಿಯನ್ ಮಾಲ್​ನಲ್ಲಿರುವ ಈ ಆನೆಯ ಕಲಾಕೃತಿಯ ಬಳಿ ಯಾರೂ ಹೋಗಿ ಫೋಟೋ ತೆಗೆಸಿಕೊಳ್ಳಬಹುದು. ‘ಈ ಸ್ಥಳದಲ್ಲಿ ಫೋಟೋ ತೆಗೆಸಿಕೊಳ್ಳುವಾಗ ಕಡಿಮೆ ಬೆಳಕಿದ್ದರೆ ಒಳ್ಳೆಯದು’ ಎಂದು ಸಲಹೆಯನ್ನೂ ನೀಡಿದ್ದಾರೆ ಬಾದಲ್​.

ರಂಗಕಲಾವಿದರು, ಕಥೆಗಾರರು, ಕಲಾನಿರ್ದೇಶಕರು ಆಗಿರುವ ಬಾದಲ್​ ಈಗಾಗಲೇ ತಮ್ಮ ಚಿತ್ರಕಲೆಯ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವಂಥವರು. ಇವರ ಅದ್ಭುತ ಕಲೆಗಾರಿಕೆಗೆ ಮತ್ತಷ್ಟು ಅಂತಾರಾಷ್ಟ್ರೀಯ ಮನ್ನಣೆ ಸಿಗಬೇಕೆಂದು ನೆಟ್ಟಿಗರು ಹಾರೈಸಿದ್ದಾರೆ. ಇವರ ಸೃಜನಶೀಲತೆಗೆ ಇವರೇ ಸಾಟಿ ಎಂದು ಶ್ಲಾಘಿಸಿದ್ದಾರೆ.

ಮುಂದಿನ ದಿನಗಳಲ್ಲಿ ಬಾದಲ್​ ಅವರ ಆರ್ಟ್​ಮ್ಯಾಜಿಕ್​ ಎತ್ತ ಸಾಗಬಹುದು ಎಂಬ ನಿರೀಕ್ಷೆಯಲ್ಲಿ ಅವರ ಅಭಿಮಾನಿ ಬಳಗ ಕಾಯುತ್ತಿದೆ. ಓರಿಯನ್​ ಮಾಲ್​ಗೆ ಭೇಟಿ ಕೊಟ್ಟಾಗ ಮರೆಯದಿರಿ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:13 pm, Tue, 29 November 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ