AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೆನಡಾದಲ್ಲಿ ಬೀದಿ ಜಗಳ, ತಾನು ಸಾಕಿದ ಹೆಬ್ಬಾವಿನಿಂದ ಅಪರಿಚಿತ ವ್ಯಕ್ತಿಗೆ ಹಲ್ಲೆ

ಟೊರೊಂಟೊದಲ್ಲಿ 45 ವರ್ಷದ ವ್ಯಕ್ತಿಯೊಬ್ಬ ತಾನು ಸಾಕಿದ ಹೆಬ್ಬಾವಿನಿಂದ ಥಳಿಸಿ, ಅಪರಿಚಿತ ವ್ಯಕ್ತಿ ಮೇಲೆ ದಾಳಿ ಮಾಡಿದ್ದಾನೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Viral Video: ಕೆನಡಾದಲ್ಲಿ ಬೀದಿ ಜಗಳ, ತಾನು ಸಾಕಿದ ಹೆಬ್ಬಾವಿನಿಂದ ಅಪರಿಚಿತ ವ್ಯಕ್ತಿಗೆ ಹಲ್ಲೆ
ವೈರಲ್ ವೀಡಿಯೊ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: May 18, 2023 | 6:15 PM

ನೀವು ಸಾಮಾನ್ಯವಾಗಿ ಬೀದಿ ಜಗಳ ನೋಡಿರಬಹುದು. ಆದರೆ ಟೊರೊಂಟೊದಲ್ಲಿ ನಡೆದ ಈ ಜಗಳವನ್ನು ನೀವು ಹಿಂದೆಂದೂ ನೋಡಿರಲೂ ಸಾಧ್ಯವಿಲ್ಲ. ಏಕೆಂದ್ರೆ ನೀವು ಕೈ ಕೈ ಮಿಲಾಯಿಸುವುದು, ಅಥವಾ ಇನ್ನಿತರೇ ರೀತಿಯಲ್ಲಿ ಜಗಳವಾಡಿ ಊರು ಕೇರಿ ಸೇರಿಸುವುದು ಏನು ಹೊಸದಲ್ಲ. ಆದರೆ ಟೊರೊಂಟೊನಲ್ಲಿ 45 ವರ್ಷದ ವ್ಯಕ್ತಿಯೊಬ್ಬ ತಾನು ಸಾಕಿದ ಹೆಬ್ಬಾವಿನಿಂದ ಇನ್ನೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾನೆ. ನಿಮಗೆ ಇದು ಸುಳ್ಳು ಎನಿಸಬಹುದು ಆದರೆ ಇದು ಸತ್ಯ. ಟೊರೊಂಟೊ ಪೊಲೀಸರ ಪತ್ರಿಕಾ ಪ್ರಕಟಣೆಯ ಪ್ರಕಾರ ರಾತ್ರಿ ಸಮಯದಲ್ಲಿ ಡುಂಡಾಸ್ ಸ್ಟ್ರೀಟ್ ವೆಸ್ಟ್ ಮತ್ತು ಮ್ಯಾನಿಂಗ್ ಅವೆನ್ಯೂದಲ್ಲಿ ಈ ಘಟನೆ ನಡೆದಿದೆ. ಆ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ದೈಹಿಕವಾಗಿ ವಾಗ್ವಾದ ನಡೆದ ಬಳಿಕ ಅದರಲ್ಲೊಬ್ಬ ವ್ಯಕ್ತಿಯು ತಾನು ಸಾಕಿದ ಹೆಬ್ಬಾವನ್ನು ಆಯುಧವಾಗಿ ಬಳಸಿ ವ್ಯಕ್ತಿಯ ಮೇಲೆ ದಾಳಿ ಮಾಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಈ ಘಟನೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ ಮತ್ತು ಇದು ಅನೇಕರ ಗಮನ ಸೆಳೆದಿದೆ. ಕ್ರೇಜಿ ಕ್ಲಿಪ್ಸ್ ಎಂಬ ಟ್ವಿಟರ್ ಪೇಜ್ ಇದನ್ನು ಶೇರ್ ಮಾಡಿದ್ದು ಈ ವಿಡಿಯೋದಲ್ಲಿ, ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಯ ಮೇಲೆ ಹೆಬ್ಬಾವನ್ನು ಬೀಸಿ ಬೀಸಿ ಹೊಡೆಯುತ್ತಿರುವುದನ್ನು ನೀವು ನೋಡಬಹುದು. ಕತ್ತಿ, ಚಾಕು ಬಳಸಿದ ಹಾಗೇ ಹಾವನ್ನು ಉಪಯೋಗ ಮಾಡಿರುವುದನ್ನು ನೀವು ಈ ವಿಡಿಯೋದಲ್ಲಿ ಕಾಣಬಹುದು. ನಿರಂತರವಾಗಿ ಅವನ ಮೇಲೆ ಆಕ್ರಮಣ ಮಾಡಿದ್ದು ಕೆಲವೇ ನಿಮಿಷಗಳಲ್ಲಿ, ಟೊರೊಂಟೊ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಹಾವನ್ನು ನೆಲದ ಮೇಲೆ ಕೆಡುವುದರ ಮೂಲಕ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Viral News : ಶಸ್ತ್ರಚಿಕಿತ್ಸೆ ಮೂಲಕ ಗುಪ್ತಾಂಗದಿಂದ ಬುಲೆಟ್ ತೆಗೆದು ಹಾಕಿದ ಮಹಿಳೆ!

ಈ ವೀಡಿಯೊವನ್ನು ಒಂದು ದಿನದ ಹಿಂದೆ ಹಂಚಿಕೊಳ್ಳಲಾಗಿದೆ. ಪೋಸ್ಟ್ ಮಾಡಿದಾಗಿನಿಂದ, ಇದನ್ನು 14 ಮಿಲಿಯನ್ ಬಾರಿ ವೀಕ್ಷಿಸಲಾಗಿದೆ. ಈ ಸಂಖ್ಯೆ ಇನ್ನೂ ಹೆಚ್ಚಾಗುತ್ತಲೇ ಇದೆ. ಈ ಪೋಸ್ಟ್ನಲ್ಲಿ ಹಲವಾರು ಜನರು ಕಾಮೆಂಟ್​​​ಗಳನ್ನು ಸಹ ಹಂಚಿಕೊಂಡಿದ್ದಾರೆ. ಅದರಲ್ಲಿ ಕೆಲವರು ಪ್ರಾಣಿ ನಿಂದನೆ ಮಾಡಿದ್ದಕ್ಕಾಗಿ ಅವನನ್ನು ಬಂಧಿಸಿ” ಎಂದು ಬರೆದುಕೊಂಡಿದ್ದಾರೆ. “ಹಾಗಾದರೆ ಅವನು ತನ್ನ ಸಾಕು ಹಾವಿನೊಂದಿಗೆ ‘ತಿರುಗಾಡುತ್ತಿದ್ದಾನಾ? ಎಂದು ಇನ್ನೊಬ್ಬರು ಕೇಳಿದ್ದಾರೆ. ಮತ್ತೊಬ್ಬರು “ಪ್ರಾಣಿಗಳ ದುರುಪಯೋಗ. ಹಾವುಗಳು ಮತ್ತು ಪಕ್ಷಿಗಳನ್ನು ಸಾಕುಪ್ರಾಣಿಗಳಾಗಿ ಇಟ್ಟುಕೊಳ್ಳುವ ಜನರ ಬಗ್ಗೆ ನನಗೆ ಬೇಸರವಾಗುತ್ತದೆ. ಇದು ಅಸಹ್ಯಕರವಾಗಿದೆ, ಮತ್ತು ಆ ಹಾವಿನ ದುರುಪಯೋಗಕ್ಕಾಗಿ ಈ ಮನುಷ್ಯನನ್ನು ವಿಚಾರಣೆಗೆ ಒಳಪಡಿಸಬೇಕಾಗಿದೆ. ” ಎಂದು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಇದರ ಹೊರತಾಗಿ ಅನೇಕ ಜನರು ಹಲವು ರೀತಿಯಲ್ಲಿ ತಮ್ಮ ಅನಿಸಿಕೆಯನ್ನು ವ್ಯಕ್ತ ಪಡಿಸಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ