AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೆನಡಾದಲ್ಲಿ ಬೀದಿ ಜಗಳ, ತಾನು ಸಾಕಿದ ಹೆಬ್ಬಾವಿನಿಂದ ಅಪರಿಚಿತ ವ್ಯಕ್ತಿಗೆ ಹಲ್ಲೆ

ಟೊರೊಂಟೊದಲ್ಲಿ 45 ವರ್ಷದ ವ್ಯಕ್ತಿಯೊಬ್ಬ ತಾನು ಸಾಕಿದ ಹೆಬ್ಬಾವಿನಿಂದ ಥಳಿಸಿ, ಅಪರಿಚಿತ ವ್ಯಕ್ತಿ ಮೇಲೆ ದಾಳಿ ಮಾಡಿದ್ದಾನೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Viral Video: ಕೆನಡಾದಲ್ಲಿ ಬೀದಿ ಜಗಳ, ತಾನು ಸಾಕಿದ ಹೆಬ್ಬಾವಿನಿಂದ ಅಪರಿಚಿತ ವ್ಯಕ್ತಿಗೆ ಹಲ್ಲೆ
ವೈರಲ್ ವೀಡಿಯೊ
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 18, 2023 | 6:15 PM

Share

ನೀವು ಸಾಮಾನ್ಯವಾಗಿ ಬೀದಿ ಜಗಳ ನೋಡಿರಬಹುದು. ಆದರೆ ಟೊರೊಂಟೊದಲ್ಲಿ ನಡೆದ ಈ ಜಗಳವನ್ನು ನೀವು ಹಿಂದೆಂದೂ ನೋಡಿರಲೂ ಸಾಧ್ಯವಿಲ್ಲ. ಏಕೆಂದ್ರೆ ನೀವು ಕೈ ಕೈ ಮಿಲಾಯಿಸುವುದು, ಅಥವಾ ಇನ್ನಿತರೇ ರೀತಿಯಲ್ಲಿ ಜಗಳವಾಡಿ ಊರು ಕೇರಿ ಸೇರಿಸುವುದು ಏನು ಹೊಸದಲ್ಲ. ಆದರೆ ಟೊರೊಂಟೊನಲ್ಲಿ 45 ವರ್ಷದ ವ್ಯಕ್ತಿಯೊಬ್ಬ ತಾನು ಸಾಕಿದ ಹೆಬ್ಬಾವಿನಿಂದ ಇನ್ನೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾನೆ. ನಿಮಗೆ ಇದು ಸುಳ್ಳು ಎನಿಸಬಹುದು ಆದರೆ ಇದು ಸತ್ಯ. ಟೊರೊಂಟೊ ಪೊಲೀಸರ ಪತ್ರಿಕಾ ಪ್ರಕಟಣೆಯ ಪ್ರಕಾರ ರಾತ್ರಿ ಸಮಯದಲ್ಲಿ ಡುಂಡಾಸ್ ಸ್ಟ್ರೀಟ್ ವೆಸ್ಟ್ ಮತ್ತು ಮ್ಯಾನಿಂಗ್ ಅವೆನ್ಯೂದಲ್ಲಿ ಈ ಘಟನೆ ನಡೆದಿದೆ. ಆ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ದೈಹಿಕವಾಗಿ ವಾಗ್ವಾದ ನಡೆದ ಬಳಿಕ ಅದರಲ್ಲೊಬ್ಬ ವ್ಯಕ್ತಿಯು ತಾನು ಸಾಕಿದ ಹೆಬ್ಬಾವನ್ನು ಆಯುಧವಾಗಿ ಬಳಸಿ ವ್ಯಕ್ತಿಯ ಮೇಲೆ ದಾಳಿ ಮಾಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಈ ಘಟನೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ ಮತ್ತು ಇದು ಅನೇಕರ ಗಮನ ಸೆಳೆದಿದೆ. ಕ್ರೇಜಿ ಕ್ಲಿಪ್ಸ್ ಎಂಬ ಟ್ವಿಟರ್ ಪೇಜ್ ಇದನ್ನು ಶೇರ್ ಮಾಡಿದ್ದು ಈ ವಿಡಿಯೋದಲ್ಲಿ, ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಯ ಮೇಲೆ ಹೆಬ್ಬಾವನ್ನು ಬೀಸಿ ಬೀಸಿ ಹೊಡೆಯುತ್ತಿರುವುದನ್ನು ನೀವು ನೋಡಬಹುದು. ಕತ್ತಿ, ಚಾಕು ಬಳಸಿದ ಹಾಗೇ ಹಾವನ್ನು ಉಪಯೋಗ ಮಾಡಿರುವುದನ್ನು ನೀವು ಈ ವಿಡಿಯೋದಲ್ಲಿ ಕಾಣಬಹುದು. ನಿರಂತರವಾಗಿ ಅವನ ಮೇಲೆ ಆಕ್ರಮಣ ಮಾಡಿದ್ದು ಕೆಲವೇ ನಿಮಿಷಗಳಲ್ಲಿ, ಟೊರೊಂಟೊ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಹಾವನ್ನು ನೆಲದ ಮೇಲೆ ಕೆಡುವುದರ ಮೂಲಕ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Viral News : ಶಸ್ತ್ರಚಿಕಿತ್ಸೆ ಮೂಲಕ ಗುಪ್ತಾಂಗದಿಂದ ಬುಲೆಟ್ ತೆಗೆದು ಹಾಕಿದ ಮಹಿಳೆ!

ಈ ವೀಡಿಯೊವನ್ನು ಒಂದು ದಿನದ ಹಿಂದೆ ಹಂಚಿಕೊಳ್ಳಲಾಗಿದೆ. ಪೋಸ್ಟ್ ಮಾಡಿದಾಗಿನಿಂದ, ಇದನ್ನು 14 ಮಿಲಿಯನ್ ಬಾರಿ ವೀಕ್ಷಿಸಲಾಗಿದೆ. ಈ ಸಂಖ್ಯೆ ಇನ್ನೂ ಹೆಚ್ಚಾಗುತ್ತಲೇ ಇದೆ. ಈ ಪೋಸ್ಟ್ನಲ್ಲಿ ಹಲವಾರು ಜನರು ಕಾಮೆಂಟ್​​​ಗಳನ್ನು ಸಹ ಹಂಚಿಕೊಂಡಿದ್ದಾರೆ. ಅದರಲ್ಲಿ ಕೆಲವರು ಪ್ರಾಣಿ ನಿಂದನೆ ಮಾಡಿದ್ದಕ್ಕಾಗಿ ಅವನನ್ನು ಬಂಧಿಸಿ” ಎಂದು ಬರೆದುಕೊಂಡಿದ್ದಾರೆ. “ಹಾಗಾದರೆ ಅವನು ತನ್ನ ಸಾಕು ಹಾವಿನೊಂದಿಗೆ ‘ತಿರುಗಾಡುತ್ತಿದ್ದಾನಾ? ಎಂದು ಇನ್ನೊಬ್ಬರು ಕೇಳಿದ್ದಾರೆ. ಮತ್ತೊಬ್ಬರು “ಪ್ರಾಣಿಗಳ ದುರುಪಯೋಗ. ಹಾವುಗಳು ಮತ್ತು ಪಕ್ಷಿಗಳನ್ನು ಸಾಕುಪ್ರಾಣಿಗಳಾಗಿ ಇಟ್ಟುಕೊಳ್ಳುವ ಜನರ ಬಗ್ಗೆ ನನಗೆ ಬೇಸರವಾಗುತ್ತದೆ. ಇದು ಅಸಹ್ಯಕರವಾಗಿದೆ, ಮತ್ತು ಆ ಹಾವಿನ ದುರುಪಯೋಗಕ್ಕಾಗಿ ಈ ಮನುಷ್ಯನನ್ನು ವಿಚಾರಣೆಗೆ ಒಳಪಡಿಸಬೇಕಾಗಿದೆ. ” ಎಂದು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಇದರ ಹೊರತಾಗಿ ಅನೇಕ ಜನರು ಹಲವು ರೀತಿಯಲ್ಲಿ ತಮ್ಮ ಅನಿಸಿಕೆಯನ್ನು ವ್ಯಕ್ತ ಪಡಿಸಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ