AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಫೀಸಿನಲ್ಲಿ ಭಾಂಗ್ರಾ; ನಿಜಕ್ಕೂ ಇದು ಉತ್ತಮ ಸ್ಟ್ರೆಸ್ ಬಸ್ಟರ್​ ಎನ್ನುತ್ತಿರುವ ನೆಟ್ಟಿಗರು

Bhangra : ಕಂಪೆನಿಯೊಂದು ತನ್ನ ಉದ್ಯೋಗಿಗಳ ಸ್ವಾಸ್ಥ್ಯಕ್ಕಾಗಿ ಭಾಂಗ್ರಾ ಕಲಾವಿದರಿಂದ ತರಬೇತಿ ಕೊಡಿಸುತ್ತಿದೆ. ಡೆಡ್​ಲೈನ್​ನಿಂದಾಗಿ ಕಾರ್ಯದೊತ್ತಡ ನಿರ್ವಹಿಸಿಕೊಳ್ಳಲು ನಿಮ್ಮ ಕಂಪೆನಿ ನಿಮಗೆ ಹೇಗೆ ಸಹಕರಿಸುತ್ತಿದೆ?

Viral Video: ಆಫೀಸಿನಲ್ಲಿ ಭಾಂಗ್ರಾ; ನಿಜಕ್ಕೂ ಇದು ಉತ್ತಮ ಸ್ಟ್ರೆಸ್ ಬಸ್ಟರ್​ ಎನ್ನುತ್ತಿರುವ ನೆಟ್ಟಿಗರು
ಆಫೀಸೊಂದರಲ್ಲಿ ಉದ್ಯೋಗಿಗಳು ಭಾಂಗ್ರಾ ನೃತ್ಯದಲ್ಲಿ ತೊಡಗಿಕೊಂಡಿರುವುದು
ಶ್ರೀದೇವಿ ಕಳಸದ
|

Updated on:Aug 01, 2023 | 11:33 AM

Share

Stress Buster : ಶಾಲೆ ಮುಗಿಯುವತನಕ ದೇಹಕ್ಕೆ ವ್ಯಾಯಾಮವಿರುತ್ತದೆ. ಕಾಲೇಜು ಮುಗಿದು ಉದ್ಯೋಗಕ್ಕೆ ಸೇರುತ್ತಿದ್ದಂತೆ ಮೈ ಜಡತ್ವಕ್ಕಿಳಿಯುತ್ತದೆ. ದಿನಗಟ್ಟಲೇ ಆಫೀಸಿನಲ್ಲಿ ಸ್ಕ್ರೀನ್​ ಮುಂದೆ ಕುಳಿತು ಕೆಲಸ ಮಾಡುವುದು ಅನಿವಾರ್ಯವಾದಾಗ ಮತ್ತು ಇದರೊಂದಿಗೆ ಡೆಡ್​ಲೈನ್​ನ ಒತ್ತಡವೂ ಸೇರಿದಾಗ ದೈಹಿಕ ಮತ್ತು ಮಾನಸಿಕ ಆರೋಗ್ಯ ಬಿಗಡಾಯಿಸಲಾರಂಭಿಸುತ್ತದೆ. ಈ ಕಾರಣಕ್ಕೆ ಕೆಲ ಕಂಪೆನಿಗಳು ತಮ್ಮ ಉದ್ಯೋಗಿಗಳ ಉತ್ತಮ ಸ್ವಾಸ್ಥ್ಯಕ್ಕಾಗಿ ಯೋಗ, ವ್ಯಾಯಾಮ, ಜಿಮ್​ ತರಬೇತುದಾರನ್ನು ನೇಮಿಸಿಕೊಂಡಿರುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೋ ಮಾತ್ರ ಇದೇ ವಿಷಯಕ್ಕೆ ಸಂಬಂಧಿಸಿದ್ದಾಗಿದ್ದು ಭಿನ್ನವೂ ಮತ್ತು ವಿಶೇಷವೂ ಆಗಿದೆ. ಭಾಂಗ್ರಾ (Bhangra) ನೃತ್ಯ ತರಬೇತುದಾರರೊಬ್ಬರು ಕಂಪೆನಿಯ ಉದ್ಯೋಗಿಗಳಿಗೆ ಈ ನೃತ್ಯವನ್ನು ಹೇಳಿಕೊಡುತ್ತಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Sahil sharma (@sahil_sharma0007)

‘ಇಂಥ ಆಫೀಸು ಸಿಗಬೇಕು’ ಎಂಬ ಒಕ್ಕಣೆಯೊಂದಿಗೆ ಕಲಾವಿದ ಸಾಹಿಲ್ ಶರ್ಮಾ ಇದನ್ನು ಇನ್​ಸ್ಟಾನಲ್ಲಿ ಹಂಚಿಕೊಂಡಿದ್ದಾರೆ. ಶರ್ಮಾ ಕಂಪೆನಿಯೊಂದರ ಉದ್ಯೋಗಿಗಳಿಗೆ ಭಾಂಗ್ರಾ ನೃತ್ಯ ಹೇಳಿಕೊಡುತ್ತಿದ್ದಾರೆ. ಉದ್ಯೋಗಿಗಳು ಶಾಲಾಮಕ್ಕಳಂತೆ ಮೈಚಳಿ ಬಿಟ್ಟು ನರ್ತಿಸಿದ್ದಾರೆ. ಅನೇಕರು ಈ ವಿಡಿಯೋ ನೋಡಿ ಸ್ಫೂರ್ತಿಗೊಂಡಿದ್ದಾರೆ.

ಇದನ್ನೂ ಓದಿ : Viral: ಅಮೇಝಾನ್​; ಆರ್ಡರ್ ಮಾಡದೆಯೂ 100ಕ್ಕೂ ಹೆಚ್ಚು ಪಾರ್ಸೆಲ್​​ ಮಹಿಳೆಯನ್ನು ತಲುಪಿದಾಗ

ಈ ವಾತಾವರಣ ನನಗೆ ಇಷ್ಟವಾಗುತ್ತಿದೆ. ಇಂಥ ಕಂಪೆನಿಯಲ್ಲಿ ನಾನು ಉಚಿತವಾಗಿ ಕೆಲಸ ಮಾಡಲು ಇಚ್ಛಿಸುತ್ತಿದ್ದೇನೆ ಎಂದು ಒಬ್ಬರು. ನಿಜಕ್ಕೂ ಇದು ಸ್ಟ್ರೆಸ್​ ಬಸ್ಟರ್​​, ಎಲ್ಲ ಆಫೀಸುಗಳಲ್ಲಿಯೂ ಇಂಥ ಚಟುವಟಿಕೆಗಳಿಗೆ ಆದ್ಯತೆ ಕೊಡಬೇಕು ಎಂದು ಇನ್ನೊಬ್ಬರು. ನನಗೂ ಇಂಥ ಆಫೀಸು ಬೇಕು ಎಂದು ಮತ್ತೊಬ್ಬರು. ನಾನು ಈ ಸೆಷನ್​ ಅನ್ನು ನಿಜಕ್ಕೂ ಎಂಜಾಯ್ ಮಾಡಿದೆ, ಕೆಲಸ ಮಾಡಲು ಇದು ನನಗೆ ಚೈತನ್ಯವನ್ನು ತಂದುಕೊಟ್ಟಿತು ಎಂದಿದ್ದಾರೆ ಈ ಕಂಪೆನಿಯ ಉದ್ಯೋಗಿಯೊಬ್ಬರು.

ಇದನ್ನೂ ಓದಿ : Viral Video;ತೊರೆದು ಜೀವಿಸಬಹುದೇ ನಿಮ್ಮ ಸಿರಿಕಂಠವ; 5 ಮಿಲಿಯನ್ ಕೇಳುಗರನ್ನು ತಲುಪಿದ ಈ ದಾಸರಪದ

ಮೂರು ದಿನಗಳ ಹಿಂದೆ ಹಂಚಿಕೊಂಡ ಈ ವಿಡಿಯೋ ಅನ್ನು ಸುಮಾರು 3 ಮಿಲಿಯನ್​ ಜನರು ನೋಡಿದ್ದಾರೆ. 1.7 ಲಕ್ಷದಷ್ಟು ಜನರು ಲೈಕ್ ಮಾಡಿದ್ದಾರೆ. ಸಾವಿರಾರು ಜನರು ಪ್ರತಿಕ್ರಿಯಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Published On - 11:26 am, Tue, 1 August 23

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು