Video: ಸೀಟಿಗಾಗಿ ಕಿಟಕಿಯಿಂದ ಬಸ್‌ ಹತ್ತಲು ಹೋಗಿ ಕಿಟಕಿ ಸಮೇತ ದೊಪ್ಪನೆ ರಸ್ತೆಗೆ ಬಿದ್ದ ವಿದ್ಯಾರ್ಥಿ

ಬಸ್ಸಿನಲ್ಲಿ ಸೀಟ್‌ ಇಲ್ದೇ ನಿಂತುಕೊಂಡೇ ಯಾರಪ್ಪಾ ಪ್ರಯಾಣಿಸ್ತಾರೆ ಅಂತ ಹೆಚ್ಚಿನವರು ಸೀಟ್‌ ಹಿಡಿಯಲು ಹಲವು ರೀತಿಯ ಸರ್ಕಸ್‌ ಮಾಡುತ್ತಾರೆ. ಅದೇ ಇಲ್ಲೊಬ್ಬ ವಿದ್ಯಾರ್ಥಿ ಕೂಡಾ ಸೀಟ್‌ ಹಿಡಿಯಲು ಕಿಟಕಿಯಿಂದ ಬಸ್‌ ಏರಲು ಪ್ರಯತ್ನಿಸಿದ್ದು, ಬಸ್‌ ಏರುತ್ತಿದ್ದಂತೆಯೇ ಕಿಟಕಿಯ ಸಮೇತ ಆತ ದೊಪ್ಪನೆ ಕೆಳಗೆ ಬಿದ್ದಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Video: ಸೀಟಿಗಾಗಿ ಕಿಟಕಿಯಿಂದ ಬಸ್‌ ಹತ್ತಲು ಹೋಗಿ ಕಿಟಕಿ ಸಮೇತ ದೊಪ್ಪನೆ ರಸ್ತೆಗೆ ಬಿದ್ದ ವಿದ್ಯಾರ್ಥಿ
ವೈರಲ್​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Jul 26, 2024 | 12:37 PM

ಬಸ್ಸಿನಲ್ಲಿ ಸೀಟ್‌ ಸಿಗದೇ ಇದ್ದರೆ ಯಾರಪ್ಪಾ ಅಷ್ಟು ದೂರ ನಿಂತುಕೊಂಡೇ ಪ್ರಯಾಣ ಮಾಡ್ತಾರೆ ಎಂದು ಹಲವರು ಬಸ್ಸಿನಲ್ಲಿ ಸೀಟ್‌ ಹಿಡಿಯಲು ಬಗೆಬಗೆಯ ಪ್ಲಾನ್‌ಗಳನ್ನು ಮಾಡುತ್ತಾರೆ. ಕೆಲವರು ಸೀಟ್‌ ಹಿಡಿಯಲು ಕಿಟಯಿಂದಲೇ ಕರ್ಚಿಫ್‌ ಅಥವಾ ಬ್ಯಾಗನ್ನು ಸೀಟ್‌ ಮೇಲೆ ಇಟ್ಟು ಈ ನನ್ನದು ಅಂತಾ ರಿಸರ್ವ್‌ ಮಾಡಿದ್ರೆ, ಇನ್ನೂ ಕೆಲವರು ಬೇಗ ಹೋಗಿ ಸೀಟ್‌ ಹಿಡಿಬೇಕು ಅಂತಾ ಬಾಗಿಲನ್ನು ಬಿಟ್ಟು ಕಿಟಕಿಯಿಂದಲೇ ಬಸ್‌ ಏರುತ್ತಾರೆ. ಅದೇ ರೀತಿ ಇಲ್ಲೊಬ್ಬ ವಿದ್ಯಾರ್ಥಿ ಕೂಡಾ ಸೀಟಿಗಾಗಿ ಕಿಟಕಿಯಿಂದ ಬಸ್‌ ಏರಲು ಹೋಗಿ, ಕಿಟಕಿ ಸಮೇತ ದೊಪ್ಪನೆ ಕೆಳಗೆ ಬಿದ್ದಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಕಿಟಕಿಯಿಂದ ಬಸ್‌ ಏರಲು ಹೋಗಿ ವಿದ್ಯಾರ್ಥಿಯೊಬ್ಬ ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ. ಈ ಕುರಿತ ಪೋಸ್ಟ್‌ ಒಂದನ್ನು ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ವಿದ್ಯಾರ್ಥಿಯೊಬ್ಬ ಸೀಟ್‌ ಸಿಕ್ರೆ ಸಾಕೆಂದು ಅವಸರ ಅವಸರವಾಗಿ ಕಿಟಕಿಂದ ಬಸ್‌ ಏರಲು ಪ್ರಯತ್ನಿಸುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಕಿಟಕಿ ಗ್ಲಾಸ್‌ ಸರಿಸಿ ಹಾಗೋ ಹೀಗೋ ಸರ್ಕಸ್‌ ಮಾಡಿ ಬಸ್‌ ಏರಲು ಹೋಗಿ ಆತ ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

ಇದನ್ನೂ ಓದಿ: ತಾಯಿ ಮುಂದೆಯೇ ಕುರಿ ಮರಿಯನ್ನು ದರದರನೇ ಎಳೆದೊಯ್ದ ಬೀದಿ ನಾಯಿಗಳು, ವಿಡಿಯೋ ವೈರಲ್‌

ವೈರಲ್ ವಿಡಿಯೋ ಇಲ್ಲಿದೆ ನೋಡಿ:

ಜುಲೈ 22 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಬಸ್‌ ಕಳೆಪೆ ಗುಣಮಟ್ಟದ್ದಾಗಿರುವ ಕಾರಣ, ಕಿಟಕಿ ಮುರಿದು ಬಿದ್ದಿದೆʼ ಎಂದು ಒಬ್ಬ ಬಳಕೆದಾರರು ಹೇಳಿಕೊಂಡಿದ್ದಾರೆ. ಇನ್ನೂ ಅನೇಕರು ಈ ದೃಶ್ಯವನ್ನು ಕಂಡು ಶಾಕ್‌ ಆಗಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:36 pm, Fri, 26 July 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್