AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸೀಟಿಗಾಗಿ ಕಿಟಕಿಯಿಂದ ಬಸ್‌ ಹತ್ತಲು ಹೋಗಿ ಕಿಟಕಿ ಸಮೇತ ದೊಪ್ಪನೆ ರಸ್ತೆಗೆ ಬಿದ್ದ ವಿದ್ಯಾರ್ಥಿ

ಬಸ್ಸಿನಲ್ಲಿ ಸೀಟ್‌ ಇಲ್ದೇ ನಿಂತುಕೊಂಡೇ ಯಾರಪ್ಪಾ ಪ್ರಯಾಣಿಸ್ತಾರೆ ಅಂತ ಹೆಚ್ಚಿನವರು ಸೀಟ್‌ ಹಿಡಿಯಲು ಹಲವು ರೀತಿಯ ಸರ್ಕಸ್‌ ಮಾಡುತ್ತಾರೆ. ಅದೇ ಇಲ್ಲೊಬ್ಬ ವಿದ್ಯಾರ್ಥಿ ಕೂಡಾ ಸೀಟ್‌ ಹಿಡಿಯಲು ಕಿಟಕಿಯಿಂದ ಬಸ್‌ ಏರಲು ಪ್ರಯತ್ನಿಸಿದ್ದು, ಬಸ್‌ ಏರುತ್ತಿದ್ದಂತೆಯೇ ಕಿಟಕಿಯ ಸಮೇತ ಆತ ದೊಪ್ಪನೆ ಕೆಳಗೆ ಬಿದ್ದಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Video: ಸೀಟಿಗಾಗಿ ಕಿಟಕಿಯಿಂದ ಬಸ್‌ ಹತ್ತಲು ಹೋಗಿ ಕಿಟಕಿ ಸಮೇತ ದೊಪ್ಪನೆ ರಸ್ತೆಗೆ ಬಿದ್ದ ವಿದ್ಯಾರ್ಥಿ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:Jul 26, 2024 | 12:37 PM

Share

ಬಸ್ಸಿನಲ್ಲಿ ಸೀಟ್‌ ಸಿಗದೇ ಇದ್ದರೆ ಯಾರಪ್ಪಾ ಅಷ್ಟು ದೂರ ನಿಂತುಕೊಂಡೇ ಪ್ರಯಾಣ ಮಾಡ್ತಾರೆ ಎಂದು ಹಲವರು ಬಸ್ಸಿನಲ್ಲಿ ಸೀಟ್‌ ಹಿಡಿಯಲು ಬಗೆಬಗೆಯ ಪ್ಲಾನ್‌ಗಳನ್ನು ಮಾಡುತ್ತಾರೆ. ಕೆಲವರು ಸೀಟ್‌ ಹಿಡಿಯಲು ಕಿಟಯಿಂದಲೇ ಕರ್ಚಿಫ್‌ ಅಥವಾ ಬ್ಯಾಗನ್ನು ಸೀಟ್‌ ಮೇಲೆ ಇಟ್ಟು ಈ ನನ್ನದು ಅಂತಾ ರಿಸರ್ವ್‌ ಮಾಡಿದ್ರೆ, ಇನ್ನೂ ಕೆಲವರು ಬೇಗ ಹೋಗಿ ಸೀಟ್‌ ಹಿಡಿಬೇಕು ಅಂತಾ ಬಾಗಿಲನ್ನು ಬಿಟ್ಟು ಕಿಟಕಿಯಿಂದಲೇ ಬಸ್‌ ಏರುತ್ತಾರೆ. ಅದೇ ರೀತಿ ಇಲ್ಲೊಬ್ಬ ವಿದ್ಯಾರ್ಥಿ ಕೂಡಾ ಸೀಟಿಗಾಗಿ ಕಿಟಕಿಯಿಂದ ಬಸ್‌ ಏರಲು ಹೋಗಿ, ಕಿಟಕಿ ಸಮೇತ ದೊಪ್ಪನೆ ಕೆಳಗೆ ಬಿದ್ದಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಕಿಟಕಿಯಿಂದ ಬಸ್‌ ಏರಲು ಹೋಗಿ ವಿದ್ಯಾರ್ಥಿಯೊಬ್ಬ ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ. ಈ ಕುರಿತ ಪೋಸ್ಟ್‌ ಒಂದನ್ನು ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ವಿದ್ಯಾರ್ಥಿಯೊಬ್ಬ ಸೀಟ್‌ ಸಿಕ್ರೆ ಸಾಕೆಂದು ಅವಸರ ಅವಸರವಾಗಿ ಕಿಟಕಿಂದ ಬಸ್‌ ಏರಲು ಪ್ರಯತ್ನಿಸುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಕಿಟಕಿ ಗ್ಲಾಸ್‌ ಸರಿಸಿ ಹಾಗೋ ಹೀಗೋ ಸರ್ಕಸ್‌ ಮಾಡಿ ಬಸ್‌ ಏರಲು ಹೋಗಿ ಆತ ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

ಇದನ್ನೂ ಓದಿ: ತಾಯಿ ಮುಂದೆಯೇ ಕುರಿ ಮರಿಯನ್ನು ದರದರನೇ ಎಳೆದೊಯ್ದ ಬೀದಿ ನಾಯಿಗಳು, ವಿಡಿಯೋ ವೈರಲ್‌

ವೈರಲ್ ವಿಡಿಯೋ ಇಲ್ಲಿದೆ ನೋಡಿ:

ಜುಲೈ 22 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಬಸ್‌ ಕಳೆಪೆ ಗುಣಮಟ್ಟದ್ದಾಗಿರುವ ಕಾರಣ, ಕಿಟಕಿ ಮುರಿದು ಬಿದ್ದಿದೆʼ ಎಂದು ಒಬ್ಬ ಬಳಕೆದಾರರು ಹೇಳಿಕೊಂಡಿದ್ದಾರೆ. ಇನ್ನೂ ಅನೇಕರು ಈ ದೃಶ್ಯವನ್ನು ಕಂಡು ಶಾಕ್‌ ಆಗಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:36 pm, Fri, 26 July 24

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!