AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸೀಟಿಗಾಗಿ ಕಿಟಕಿಯಿಂದ ಬಸ್‌ ಹತ್ತಲು ಹೋಗಿ ಕಿಟಕಿ ಸಮೇತ ದೊಪ್ಪನೆ ರಸ್ತೆಗೆ ಬಿದ್ದ ವಿದ್ಯಾರ್ಥಿ

ಬಸ್ಸಿನಲ್ಲಿ ಸೀಟ್‌ ಇಲ್ದೇ ನಿಂತುಕೊಂಡೇ ಯಾರಪ್ಪಾ ಪ್ರಯಾಣಿಸ್ತಾರೆ ಅಂತ ಹೆಚ್ಚಿನವರು ಸೀಟ್‌ ಹಿಡಿಯಲು ಹಲವು ರೀತಿಯ ಸರ್ಕಸ್‌ ಮಾಡುತ್ತಾರೆ. ಅದೇ ಇಲ್ಲೊಬ್ಬ ವಿದ್ಯಾರ್ಥಿ ಕೂಡಾ ಸೀಟ್‌ ಹಿಡಿಯಲು ಕಿಟಕಿಯಿಂದ ಬಸ್‌ ಏರಲು ಪ್ರಯತ್ನಿಸಿದ್ದು, ಬಸ್‌ ಏರುತ್ತಿದ್ದಂತೆಯೇ ಕಿಟಕಿಯ ಸಮೇತ ಆತ ದೊಪ್ಪನೆ ಕೆಳಗೆ ಬಿದ್ದಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Video: ಸೀಟಿಗಾಗಿ ಕಿಟಕಿಯಿಂದ ಬಸ್‌ ಹತ್ತಲು ಹೋಗಿ ಕಿಟಕಿ ಸಮೇತ ದೊಪ್ಪನೆ ರಸ್ತೆಗೆ ಬಿದ್ದ ವಿದ್ಯಾರ್ಥಿ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:Jul 26, 2024 | 12:37 PM

Share

ಬಸ್ಸಿನಲ್ಲಿ ಸೀಟ್‌ ಸಿಗದೇ ಇದ್ದರೆ ಯಾರಪ್ಪಾ ಅಷ್ಟು ದೂರ ನಿಂತುಕೊಂಡೇ ಪ್ರಯಾಣ ಮಾಡ್ತಾರೆ ಎಂದು ಹಲವರು ಬಸ್ಸಿನಲ್ಲಿ ಸೀಟ್‌ ಹಿಡಿಯಲು ಬಗೆಬಗೆಯ ಪ್ಲಾನ್‌ಗಳನ್ನು ಮಾಡುತ್ತಾರೆ. ಕೆಲವರು ಸೀಟ್‌ ಹಿಡಿಯಲು ಕಿಟಯಿಂದಲೇ ಕರ್ಚಿಫ್‌ ಅಥವಾ ಬ್ಯಾಗನ್ನು ಸೀಟ್‌ ಮೇಲೆ ಇಟ್ಟು ಈ ನನ್ನದು ಅಂತಾ ರಿಸರ್ವ್‌ ಮಾಡಿದ್ರೆ, ಇನ್ನೂ ಕೆಲವರು ಬೇಗ ಹೋಗಿ ಸೀಟ್‌ ಹಿಡಿಬೇಕು ಅಂತಾ ಬಾಗಿಲನ್ನು ಬಿಟ್ಟು ಕಿಟಕಿಯಿಂದಲೇ ಬಸ್‌ ಏರುತ್ತಾರೆ. ಅದೇ ರೀತಿ ಇಲ್ಲೊಬ್ಬ ವಿದ್ಯಾರ್ಥಿ ಕೂಡಾ ಸೀಟಿಗಾಗಿ ಕಿಟಕಿಯಿಂದ ಬಸ್‌ ಏರಲು ಹೋಗಿ, ಕಿಟಕಿ ಸಮೇತ ದೊಪ್ಪನೆ ಕೆಳಗೆ ಬಿದ್ದಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಕಿಟಕಿಯಿಂದ ಬಸ್‌ ಏರಲು ಹೋಗಿ ವಿದ್ಯಾರ್ಥಿಯೊಬ್ಬ ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ. ಈ ಕುರಿತ ಪೋಸ್ಟ್‌ ಒಂದನ್ನು ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ವಿದ್ಯಾರ್ಥಿಯೊಬ್ಬ ಸೀಟ್‌ ಸಿಕ್ರೆ ಸಾಕೆಂದು ಅವಸರ ಅವಸರವಾಗಿ ಕಿಟಕಿಂದ ಬಸ್‌ ಏರಲು ಪ್ರಯತ್ನಿಸುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಕಿಟಕಿ ಗ್ಲಾಸ್‌ ಸರಿಸಿ ಹಾಗೋ ಹೀಗೋ ಸರ್ಕಸ್‌ ಮಾಡಿ ಬಸ್‌ ಏರಲು ಹೋಗಿ ಆತ ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

ಇದನ್ನೂ ಓದಿ: ತಾಯಿ ಮುಂದೆಯೇ ಕುರಿ ಮರಿಯನ್ನು ದರದರನೇ ಎಳೆದೊಯ್ದ ಬೀದಿ ನಾಯಿಗಳು, ವಿಡಿಯೋ ವೈರಲ್‌

ವೈರಲ್ ವಿಡಿಯೋ ಇಲ್ಲಿದೆ ನೋಡಿ:

ಜುಲೈ 22 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಬಸ್‌ ಕಳೆಪೆ ಗುಣಮಟ್ಟದ್ದಾಗಿರುವ ಕಾರಣ, ಕಿಟಕಿ ಮುರಿದು ಬಿದ್ದಿದೆʼ ಎಂದು ಒಬ್ಬ ಬಳಕೆದಾರರು ಹೇಳಿಕೊಂಡಿದ್ದಾರೆ. ಇನ್ನೂ ಅನೇಕರು ಈ ದೃಶ್ಯವನ್ನು ಕಂಡು ಶಾಕ್‌ ಆಗಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:36 pm, Fri, 26 July 24

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!