AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ : ಕೆಳಗೆ ನೀರು ಮೇಲೆ ಬಾನು ನಡುವೆ ವಲಸೆ ಹಕ್ಕಿಗಳ ಹಾರಾಟ, ನೋಡಿ ವಿಡಿಯೋ

Odisha : ಋತುಮಾನಕ್ಕೆ ತಕ್ಕಂತೆ ಪ್ರಕೃತಿಯಲ್ಲಿ ರಮ್ಯವಾದದ್ದು ಘಟಿಸುತ್ತಾ ಇರುತ್ತದೆ. ಒಮ್ಮೆ ಎಲ್ಲ ಜಂಜಡಗಳನ್ನು ಬಿಟ್ಟು ಆಗಾಗ ಇಂಥ ಪ್ರದೇಶಗಳಲ್ಲಿ ಕಳೆದುಹೋಗುತ್ತಿರಬೇಕು. ಏನಂತೀರಿ?

ಒಡಿಶಾ : ಕೆಳಗೆ ನೀರು ಮೇಲೆ ಬಾನು ನಡುವೆ ವಲಸೆ ಹಕ್ಕಿಗಳ ಹಾರಾಟ, ನೋಡಿ ವಿಡಿಯೋ
Migratory birds in Odisha
TV9 Web
| Edited By: ಶ್ರೀದೇವಿ ಕಳಸದ|

Updated on:Nov 18, 2022 | 5:27 PM

Share

Viral Video : ಪ್ರಕೃತಿ ಮತ್ತು ಜೀವವೈವಿಧ್ಯ ಎಂದಿಗೂ ಮುಗಿಯದಂಥ ಅನೇಕ ಅಚ್ಚರಿಗಳನ್ನು ತನ್ನ ಗರ್ಭದಲ್ಲಿ ಅಡಗಿಸಿಕೊಂಡಿರುತ್ತದೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ. ಒಡಿಶಾದಲ್ಲಿ ವಲಸೆ ಹಕ್ಕಿಗಳ ಸುಸಮಯ ಶುರುವಾಗಿದೆ. ಚಿಲಿಕಾ ಸರೋವರದಲ್ಲಿ ಈಗ ಈ ಹಕ್ಕಿಗಳ ಕಲರವ ನೋಡಬಹುದಾಗಿದೆ. ಐಎಎಸ್ ಅಧಿಕಾರಿ ಸುಸಾಂತ ನಂದಾ ಈ ವಿಡಿಯೋ ಹಂಚಿಕೊಂಡ ನಂತರ ವೈರಲ್ ಆಗುತ್ತಿದೆ.

ಕೆಳಗೆ ನೀರು ಮೇಲೆ ಬಾನು ನಡುವೆ ವಲಸೆ ಹಕ್ಕಿಗಳ ಹಾರಾಟ. 16 ಸೆಕೆಂಡುಗಳ ಈ ದೃಶ್ಯ ನಿಮ್ಮನ್ನು ಅನುಪಮ ಜಗತ್ತಿಗೆ ಕರೆದೊಯ್ಯುತ್ತಿದೆ. ಹಕ್ಕಿಗಳಿಗೆ ಈ  ಚಿಲಿಕಾ ಸ್ವರ್ಗವೇ ಸರಿ. ಸಂತಾನೋತ್ಪತ್ತಿಗೆ ಸೂಕ್ತವಾದ ಜಾಗವನ್ನು ಹುಡುಕಿಕೊಂಡು ಅದಕ್ಕೆ ಬೇಕಾದ ತಯಾರಿಯಲ್ಲಿ ಮುಳುಗಿವೆ ಈ ಹಕ್ಕಿಗಳು. ಪ್ರಶಾಂತವಾದ ಜಾಗ, ಗೂಡು ಕಟ್ಟಲು ಎಲೆ, ನಾರುಗಳ ಸಂಗ್ರಹಣೆ ಹೀಗೆ ಭವಿಷ್ಯದ ಕೆಲಸಗಳಲ್ಲಿ ತನ್ಮಯವಾಗಿವೆ. ಇವುಗಳು ಹೀಗೆ ಈ ಚಟುವಟಿಕೆಯಲ್ಲಿ ತೊಡಗಿಕೊಂಡಿರುವುದನ್ನು ನೋಡುವುದೇ ಚೆಂದ.

7,750ಕ್ಕೂ ಹೆಚ್ಚು ಜನರು ಈ ವಿಡಿಯೋ ವೀಕ್ಷಿಸಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ. ಬಹಳ ಅದ್ಭುತವಾದ ದೃಶ್ಯವಿದು ಎಂದಿದ್ದಾರೆ ಕೆಲವರು. ಎಲ್ಲ ಜಂಜಡಗಳ ಮಧ್ಯೆ ಹೀಗೆ ಪಕ್ಷಿಗಳನ್ನು ನೋಡುತ್ತಾ ಕಳೆದುಹೋಗಬೇಕು ಎನ್ನಿಸುತ್ತದೆ ಎಂದಿದ್ದಾರೆ ಹಲವರು. ಈಗಲೇ ಈ ಸರೋವರಕ್ಕೆ ಭೇಟಿ ನೀಡಬೇಕು ಎನ್ನಿಸುತ್ತಿದೆ ಎಂದಿದ್ದಾರೆ ಕೆಲವರು.

ನಿಮಗೂ ಇಲ್ಲಿಗೆ ಬೇಟಿ ಕೊಡಬೇಕು ಎನ್ನಿಸುತ್ತಿದೆಯಾ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:27 pm, Fri, 18 November 22

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ