Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ : ಕೆಳಗೆ ನೀರು ಮೇಲೆ ಬಾನು ನಡುವೆ ವಲಸೆ ಹಕ್ಕಿಗಳ ಹಾರಾಟ, ನೋಡಿ ವಿಡಿಯೋ

Odisha : ಋತುಮಾನಕ್ಕೆ ತಕ್ಕಂತೆ ಪ್ರಕೃತಿಯಲ್ಲಿ ರಮ್ಯವಾದದ್ದು ಘಟಿಸುತ್ತಾ ಇರುತ್ತದೆ. ಒಮ್ಮೆ ಎಲ್ಲ ಜಂಜಡಗಳನ್ನು ಬಿಟ್ಟು ಆಗಾಗ ಇಂಥ ಪ್ರದೇಶಗಳಲ್ಲಿ ಕಳೆದುಹೋಗುತ್ತಿರಬೇಕು. ಏನಂತೀರಿ?

ಒಡಿಶಾ : ಕೆಳಗೆ ನೀರು ಮೇಲೆ ಬಾನು ನಡುವೆ ವಲಸೆ ಹಕ್ಕಿಗಳ ಹಾರಾಟ, ನೋಡಿ ವಿಡಿಯೋ
Migratory birds in Odisha
Follow us
TV9 Web
| Updated By: ಶ್ರೀದೇವಿ ಕಳಸದ

Updated on:Nov 18, 2022 | 5:27 PM

Viral Video : ಪ್ರಕೃತಿ ಮತ್ತು ಜೀವವೈವಿಧ್ಯ ಎಂದಿಗೂ ಮುಗಿಯದಂಥ ಅನೇಕ ಅಚ್ಚರಿಗಳನ್ನು ತನ್ನ ಗರ್ಭದಲ್ಲಿ ಅಡಗಿಸಿಕೊಂಡಿರುತ್ತದೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ. ಒಡಿಶಾದಲ್ಲಿ ವಲಸೆ ಹಕ್ಕಿಗಳ ಸುಸಮಯ ಶುರುವಾಗಿದೆ. ಚಿಲಿಕಾ ಸರೋವರದಲ್ಲಿ ಈಗ ಈ ಹಕ್ಕಿಗಳ ಕಲರವ ನೋಡಬಹುದಾಗಿದೆ. ಐಎಎಸ್ ಅಧಿಕಾರಿ ಸುಸಾಂತ ನಂದಾ ಈ ವಿಡಿಯೋ ಹಂಚಿಕೊಂಡ ನಂತರ ವೈರಲ್ ಆಗುತ್ತಿದೆ.

ಕೆಳಗೆ ನೀರು ಮೇಲೆ ಬಾನು ನಡುವೆ ವಲಸೆ ಹಕ್ಕಿಗಳ ಹಾರಾಟ. 16 ಸೆಕೆಂಡುಗಳ ಈ ದೃಶ್ಯ ನಿಮ್ಮನ್ನು ಅನುಪಮ ಜಗತ್ತಿಗೆ ಕರೆದೊಯ್ಯುತ್ತಿದೆ. ಹಕ್ಕಿಗಳಿಗೆ ಈ  ಚಿಲಿಕಾ ಸ್ವರ್ಗವೇ ಸರಿ. ಸಂತಾನೋತ್ಪತ್ತಿಗೆ ಸೂಕ್ತವಾದ ಜಾಗವನ್ನು ಹುಡುಕಿಕೊಂಡು ಅದಕ್ಕೆ ಬೇಕಾದ ತಯಾರಿಯಲ್ಲಿ ಮುಳುಗಿವೆ ಈ ಹಕ್ಕಿಗಳು. ಪ್ರಶಾಂತವಾದ ಜಾಗ, ಗೂಡು ಕಟ್ಟಲು ಎಲೆ, ನಾರುಗಳ ಸಂಗ್ರಹಣೆ ಹೀಗೆ ಭವಿಷ್ಯದ ಕೆಲಸಗಳಲ್ಲಿ ತನ್ಮಯವಾಗಿವೆ. ಇವುಗಳು ಹೀಗೆ ಈ ಚಟುವಟಿಕೆಯಲ್ಲಿ ತೊಡಗಿಕೊಂಡಿರುವುದನ್ನು ನೋಡುವುದೇ ಚೆಂದ.

7,750ಕ್ಕೂ ಹೆಚ್ಚು ಜನರು ಈ ವಿಡಿಯೋ ವೀಕ್ಷಿಸಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ. ಬಹಳ ಅದ್ಭುತವಾದ ದೃಶ್ಯವಿದು ಎಂದಿದ್ದಾರೆ ಕೆಲವರು. ಎಲ್ಲ ಜಂಜಡಗಳ ಮಧ್ಯೆ ಹೀಗೆ ಪಕ್ಷಿಗಳನ್ನು ನೋಡುತ್ತಾ ಕಳೆದುಹೋಗಬೇಕು ಎನ್ನಿಸುತ್ತದೆ ಎಂದಿದ್ದಾರೆ ಹಲವರು. ಈಗಲೇ ಈ ಸರೋವರಕ್ಕೆ ಭೇಟಿ ನೀಡಬೇಕು ಎನ್ನಿಸುತ್ತಿದೆ ಎಂದಿದ್ದಾರೆ ಕೆಲವರು.

ನಿಮಗೂ ಇಲ್ಲಿಗೆ ಬೇಟಿ ಕೊಡಬೇಕು ಎನ್ನಿಸುತ್ತಿದೆಯಾ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:27 pm, Fri, 18 November 22

ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ