AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AP Inter Topper: ಬಾಲ್ಯ ವಿವಾಹದಿಂದ ತಪ್ಪಿಸಿಕೊಂಡ ಬಾಲಕಿ ಇದೀಗ ದೇಶಕ್ಕೆ ಟಾಪರ್​​

AP Inter Results 2024: 2017ರಲ್ಲಿ ಬಾಲ್ಯವಿವಾಹದಿಂದ ತಪ್ಪಿಸಿಕೊಂಡು ಕುಟುಂಬದ ಸದಸ್ಯರ ಟೀಕೆ ಮಾತುಗಳನ್ನು ಮೆಟ್ಟಿನಿಂತ ಈ ಬಾಲಕಿ ಇದೀಗ ಶೈಕ್ಷಣಿಕ ಕ್ಷೇತ್ರದಲ್ಲಿ ಅನನ್ಯ ಸಾಧನೆಗೈದು ದೇಶದ ಗಮನ ಸೆಳೆದಿದ್ದಾಳೆ. ಆಂಧ್ರಪ್ರದೇಶದ ಪ್ರಥಮ ವರ್ಷದ ಇಂಟರ್​​​ಮೀಡಿಯೇಟ್​​​​​ ಬೋರ್ಡ್​​​​​ ಪರೀಕ್ಷೆಯಲ್ಲಿ ಟಾಪರ್​​ ಆಗಿ ಮಿಂಚಿದ್ದಾಳೆ.

AP Inter Topper: ಬಾಲ್ಯ ವಿವಾಹದಿಂದ ತಪ್ಪಿಸಿಕೊಂಡ ಬಾಲಕಿ ಇದೀಗ  ದೇಶಕ್ಕೆ ಟಾಪರ್​​
G. Nirmala AP Inter Topper 2024
ಅಕ್ಷತಾ ವರ್ಕಾಡಿ
|

Updated on:Apr 13, 2024 | 3:14 PM

Share

ಒಂದು ಕಾಲದಲ್ಲಿ ಹುಡುಗಿಯರನ್ನು ಸಮಾಜದಲ್ಲಿ ಕೀಳಾಗಿ ಕಾಣಲಾಗುತ್ತಿತ್ತು. ಈ ಪರಿಸ್ಥಿತಿಗಳಲ್ಲಿ ಕ್ರಮೇಣ ಬದಲಾವಣೆಗಳು ಬರುತ್ತಿವೆ. ಹುಡುಗರಿಗೆ ಸರಿಸಮಾನವಾಗಿ ಹುಡುಗಿಯರು ಎಲ್ಲಾ ಕ್ಷೇತ್ರಗಳಲ್ಲಿ ಮಿಂಚುತ್ತಿದ್ದಾರೆ. ಆದರೆ, ಸಾಕಷ್ಟು ಬಡ ಕುಟುಂಬದಲ್ಲಿ ಹೆಣ್ಣುಮಕ್ಕಳಿಗೆ ತಕ್ಕ ಮಟ್ಟದ ಶಿಕ್ಷಣ ನೀಡಿ ಮದುವೆ ಮಾಡಿಸಿದರೆ ತಮ್ಮ ಜವಾಬ್ದಾರಿ ಮುಗಿಯಿತು ಎಂಬ ಭಾವನೆ .ಇದೀಗಾ ಇದಕ್ಕೊಂದು ಉತ್ತಮ ನಿದರ್ಶನ ಎನ್ನುವಂತಹ ಘಟನೆ ಇಲ್ಲಿದೆ ನೋಡಿ. 2017ರಲ್ಲಿ ಬಾಲ್ಯವಿವಾಹದಿಂದ ತಪ್ಪಿಸಿಕೊಂಡು ಕುಟುಂಬದ ಸದಸ್ಯರ ಟೀಕೆ ಮಾತುಗಳಿಂದ ನೊಂದಿದ್ದ ಬಾಲಕಿ ಇದೀಗ ಶೈಕ್ಷಣಿಕ ಕ್ಷೇತ್ರದಲ್ಲಿ ಅನನ್ಯ ಸಾಧನೆಗೈದು ದೇಶದ ಗಮನ ಸೆಳೆದಿದ್ದಾಳೆ.

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಅದೋನಿ ಮಂಡಲದ ಪೆದ್ದಹರಿವನಂ ಗ್ರಾಮದ ನಿರ್ಮಲಾ ಎಂಬ ಬಾಲಕಿ ಇತ್ತೀಚಿಗಷ್ಟೇ ಆಂಧ್ರಪ್ರದೇಶದ ಪ್ರಥಮ ವರ್ಷದ ಇಂಟರ್​​​ಮೀಡಿಯೇಟ್​​​​​ ಬೋರ್ಡ್​​​​​ ಪರೀಕ್ಷೆಯಲ್ಲಿ ಟಾಪರ್​​ ಆಗಿ ದೇಶದ ಗಮನ ಸೆಳೆದಿದ್ದಾಳೆ. 10ನೇ ತರಗತಿಯಲ್ಲಿ 537 ಅಂಕ ಪಡೆದಿದ್ದರೂ ಆಕೆಯ ಪೋಷಕರು ಬಾಲ್ಯವಿವಾಹ ಮಾಡಲು ನಿರ್ಧರಿಸಿದ್ದರು. ಮದುವೆಯಾಗಲು ಇಷ್ಟವಿಲ್ಲ ಎಂದಿದ್ದ ಬಾಲಕಿ, ಐಪಿಎಸ್ ಆಗುವುದೇ ನನ್ನ ಗುರಿ ಎಂದು ಹೇಳಿದ್ದಳು. ಇದರಿಂದ ಶಿಕ್ಷಣವನ್ನು ಮುಂದುವರಿಸಿದ್ದಳು.

ಇದನ್ನೂ ಓದಿ: ಮಗನ ಪ್ಲೇ ಸ್ಕೂಲ್ ಫೀಸ್ 4.3 ಲಕ್ಷ ರೂ.; ಫೀಸ್​​ ಸ್ಕ್ರೀನ್‌ಶಾಟ್ ಹಂಚಿಕೊಂಡ ತಂದೆ

ಶ್ರೀನಿವಾಸ್ ಮತ್ತು ಹನುಮಂತಮ್ಮ ದಂಪತಿಗೆ ನಾಲ್ವರು ಹೆಣ್ಣು ಮಕ್ಕಳು. ಅವರ ಕಿರಿಯ ಮಗಳು ನಿರ್ಮಲಾ. ಉಳಿದ ಮೂವರು ಹುಡುಗಿಯರಿಗೆ ಮದುವೆಯಾಗಿದೆ. ನಿರ್ಮಲಾ ಕಲಿಕೆಯಲ್ಲಿ ಪ್ರತೀ ಬಾರಿ ತರಗತಿಗೆ ಟಾಪರ್​​ ಆಗಿದ್ದರೂ ಕೂಡ ಮನೆಯ ಆರ್ಥಿಕ ಪರಿಸ್ಥಿತಿಯಿಂದಾಗಿ ಬಾಲ್ಯ ವಿವಾಹ ಮಾಡಿಸಲು ಮುಂದಾಗಿದ್ದರು. ಆದರೆ ಪಟ್ಟು ಬಿಡದೆ ಬಾಲ್ಯ ವಿವಾಹದಿಂದ ತಪ್ಪಿಸಿಕೊಂಡು ಓದು ಮುಂದುವರಿಸಿದ್ದಾಳೆ.

ಆದೋನಿ ಶಾಸಕ ಸಾಯಿಪ್ರಸಾದ್ ರೆಡ್ಡಿ ಹಾಗೂ ಅಧಿಕಾರಿಗಳು ವರ್ಷಗಳಿಂದ ಹಿಂದೆ ಈ ಬಾಲಕಿಯನ್ನು ಭೇಟಿಯಾಗಿದ್ದು, ಆಕೆಯ ಶಿಕ್ಷಣ ಮುಂದುವರಿಸಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಿಸಿದ್ದರು. ಇದೀಗಾ ಕರ್ನೂಲ್ ಜಿಲ್ಲಾಧಿಕಾರಿ ಡಾ.ಸೃಜನಾ ಪ್ರತಿಕ್ರಿಯಿಸಿ, ಬಾಲ್ಯವಿವಾಹದಿಂದ ಪಾರಾದ ಬಾಲಕಿ ಇಂದು ಇಂಟರ್​​​ಮೀಡಿಯೇಟ್​​​​​ ಬೋರ್ಡ್​​​​​ ಪರೀಕ್ಷೆಯಲ್ಲಿ ಟಾಪರ್​​ ಅನನ್ಯ ಸಾಧನೆಗೈದು ದೇಶದ ಗಮನ ಸೆಳೆದಿದ್ದಾಳೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದಂತೆ ವಿದ್ಯಾರ್ಥಿ ನಿರ್ಮಲಾ ಓದಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾಳೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:09 pm, Sat, 13 April 24

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು