AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AP Inter Topper: ಬಾಲ್ಯ ವಿವಾಹದಿಂದ ತಪ್ಪಿಸಿಕೊಂಡ ಬಾಲಕಿ ಇದೀಗ ದೇಶಕ್ಕೆ ಟಾಪರ್​​

AP Inter Results 2024: 2017ರಲ್ಲಿ ಬಾಲ್ಯವಿವಾಹದಿಂದ ತಪ್ಪಿಸಿಕೊಂಡು ಕುಟುಂಬದ ಸದಸ್ಯರ ಟೀಕೆ ಮಾತುಗಳನ್ನು ಮೆಟ್ಟಿನಿಂತ ಈ ಬಾಲಕಿ ಇದೀಗ ಶೈಕ್ಷಣಿಕ ಕ್ಷೇತ್ರದಲ್ಲಿ ಅನನ್ಯ ಸಾಧನೆಗೈದು ದೇಶದ ಗಮನ ಸೆಳೆದಿದ್ದಾಳೆ. ಆಂಧ್ರಪ್ರದೇಶದ ಪ್ರಥಮ ವರ್ಷದ ಇಂಟರ್​​​ಮೀಡಿಯೇಟ್​​​​​ ಬೋರ್ಡ್​​​​​ ಪರೀಕ್ಷೆಯಲ್ಲಿ ಟಾಪರ್​​ ಆಗಿ ಮಿಂಚಿದ್ದಾಳೆ.

AP Inter Topper: ಬಾಲ್ಯ ವಿವಾಹದಿಂದ ತಪ್ಪಿಸಿಕೊಂಡ ಬಾಲಕಿ ಇದೀಗ  ದೇಶಕ್ಕೆ ಟಾಪರ್​​
G. Nirmala AP Inter Topper 2024
ಅಕ್ಷತಾ ವರ್ಕಾಡಿ
|

Updated on:Apr 13, 2024 | 3:14 PM

Share

ಒಂದು ಕಾಲದಲ್ಲಿ ಹುಡುಗಿಯರನ್ನು ಸಮಾಜದಲ್ಲಿ ಕೀಳಾಗಿ ಕಾಣಲಾಗುತ್ತಿತ್ತು. ಈ ಪರಿಸ್ಥಿತಿಗಳಲ್ಲಿ ಕ್ರಮೇಣ ಬದಲಾವಣೆಗಳು ಬರುತ್ತಿವೆ. ಹುಡುಗರಿಗೆ ಸರಿಸಮಾನವಾಗಿ ಹುಡುಗಿಯರು ಎಲ್ಲಾ ಕ್ಷೇತ್ರಗಳಲ್ಲಿ ಮಿಂಚುತ್ತಿದ್ದಾರೆ. ಆದರೆ, ಸಾಕಷ್ಟು ಬಡ ಕುಟುಂಬದಲ್ಲಿ ಹೆಣ್ಣುಮಕ್ಕಳಿಗೆ ತಕ್ಕ ಮಟ್ಟದ ಶಿಕ್ಷಣ ನೀಡಿ ಮದುವೆ ಮಾಡಿಸಿದರೆ ತಮ್ಮ ಜವಾಬ್ದಾರಿ ಮುಗಿಯಿತು ಎಂಬ ಭಾವನೆ .ಇದೀಗಾ ಇದಕ್ಕೊಂದು ಉತ್ತಮ ನಿದರ್ಶನ ಎನ್ನುವಂತಹ ಘಟನೆ ಇಲ್ಲಿದೆ ನೋಡಿ. 2017ರಲ್ಲಿ ಬಾಲ್ಯವಿವಾಹದಿಂದ ತಪ್ಪಿಸಿಕೊಂಡು ಕುಟುಂಬದ ಸದಸ್ಯರ ಟೀಕೆ ಮಾತುಗಳಿಂದ ನೊಂದಿದ್ದ ಬಾಲಕಿ ಇದೀಗ ಶೈಕ್ಷಣಿಕ ಕ್ಷೇತ್ರದಲ್ಲಿ ಅನನ್ಯ ಸಾಧನೆಗೈದು ದೇಶದ ಗಮನ ಸೆಳೆದಿದ್ದಾಳೆ.

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಅದೋನಿ ಮಂಡಲದ ಪೆದ್ದಹರಿವನಂ ಗ್ರಾಮದ ನಿರ್ಮಲಾ ಎಂಬ ಬಾಲಕಿ ಇತ್ತೀಚಿಗಷ್ಟೇ ಆಂಧ್ರಪ್ರದೇಶದ ಪ್ರಥಮ ವರ್ಷದ ಇಂಟರ್​​​ಮೀಡಿಯೇಟ್​​​​​ ಬೋರ್ಡ್​​​​​ ಪರೀಕ್ಷೆಯಲ್ಲಿ ಟಾಪರ್​​ ಆಗಿ ದೇಶದ ಗಮನ ಸೆಳೆದಿದ್ದಾಳೆ. 10ನೇ ತರಗತಿಯಲ್ಲಿ 537 ಅಂಕ ಪಡೆದಿದ್ದರೂ ಆಕೆಯ ಪೋಷಕರು ಬಾಲ್ಯವಿವಾಹ ಮಾಡಲು ನಿರ್ಧರಿಸಿದ್ದರು. ಮದುವೆಯಾಗಲು ಇಷ್ಟವಿಲ್ಲ ಎಂದಿದ್ದ ಬಾಲಕಿ, ಐಪಿಎಸ್ ಆಗುವುದೇ ನನ್ನ ಗುರಿ ಎಂದು ಹೇಳಿದ್ದಳು. ಇದರಿಂದ ಶಿಕ್ಷಣವನ್ನು ಮುಂದುವರಿಸಿದ್ದಳು.

ಇದನ್ನೂ ಓದಿ: ಮಗನ ಪ್ಲೇ ಸ್ಕೂಲ್ ಫೀಸ್ 4.3 ಲಕ್ಷ ರೂ.; ಫೀಸ್​​ ಸ್ಕ್ರೀನ್‌ಶಾಟ್ ಹಂಚಿಕೊಂಡ ತಂದೆ

ಶ್ರೀನಿವಾಸ್ ಮತ್ತು ಹನುಮಂತಮ್ಮ ದಂಪತಿಗೆ ನಾಲ್ವರು ಹೆಣ್ಣು ಮಕ್ಕಳು. ಅವರ ಕಿರಿಯ ಮಗಳು ನಿರ್ಮಲಾ. ಉಳಿದ ಮೂವರು ಹುಡುಗಿಯರಿಗೆ ಮದುವೆಯಾಗಿದೆ. ನಿರ್ಮಲಾ ಕಲಿಕೆಯಲ್ಲಿ ಪ್ರತೀ ಬಾರಿ ತರಗತಿಗೆ ಟಾಪರ್​​ ಆಗಿದ್ದರೂ ಕೂಡ ಮನೆಯ ಆರ್ಥಿಕ ಪರಿಸ್ಥಿತಿಯಿಂದಾಗಿ ಬಾಲ್ಯ ವಿವಾಹ ಮಾಡಿಸಲು ಮುಂದಾಗಿದ್ದರು. ಆದರೆ ಪಟ್ಟು ಬಿಡದೆ ಬಾಲ್ಯ ವಿವಾಹದಿಂದ ತಪ್ಪಿಸಿಕೊಂಡು ಓದು ಮುಂದುವರಿಸಿದ್ದಾಳೆ.

ಆದೋನಿ ಶಾಸಕ ಸಾಯಿಪ್ರಸಾದ್ ರೆಡ್ಡಿ ಹಾಗೂ ಅಧಿಕಾರಿಗಳು ವರ್ಷಗಳಿಂದ ಹಿಂದೆ ಈ ಬಾಲಕಿಯನ್ನು ಭೇಟಿಯಾಗಿದ್ದು, ಆಕೆಯ ಶಿಕ್ಷಣ ಮುಂದುವರಿಸಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಿಸಿದ್ದರು. ಇದೀಗಾ ಕರ್ನೂಲ್ ಜಿಲ್ಲಾಧಿಕಾರಿ ಡಾ.ಸೃಜನಾ ಪ್ರತಿಕ್ರಿಯಿಸಿ, ಬಾಲ್ಯವಿವಾಹದಿಂದ ಪಾರಾದ ಬಾಲಕಿ ಇಂದು ಇಂಟರ್​​​ಮೀಡಿಯೇಟ್​​​​​ ಬೋರ್ಡ್​​​​​ ಪರೀಕ್ಷೆಯಲ್ಲಿ ಟಾಪರ್​​ ಅನನ್ಯ ಸಾಧನೆಗೈದು ದೇಶದ ಗಮನ ಸೆಳೆದಿದ್ದಾಳೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದಂತೆ ವಿದ್ಯಾರ್ಥಿ ನಿರ್ಮಲಾ ಓದಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾಳೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:09 pm, Sat, 13 April 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ