AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇಂಡಿಯಾ ಗೇಟ್​ ಬಳಿ ನಿನ್ನೆ ಒಂದು ಮ್ಯಾಜಿಕ್​ ನಡೆದಿದೆ!

India Gate : ಮರಳು ಶಿಲ್ಪಕಲಾವಿದ ಸುದರ್ಶನ ಪಟ್ನಾಯಕ್, ನಿನ್ನೆ ಟ್ವಿಟರ್​ನಲ್ಲಿ ಹಾಕಿದ ಈ ಪೋಸ್ಟ್​ಗೆ ಅಧಿಕಾರಿಗಳು ಅದೆಷ್ಟು ವೇಗದಲ್ಲಿ ಸ್ಪಂದಿಸಿದರೆಂದರೆ... ವಿಡಿಯೋ ನೋಡಿ.

Viral Video: ಇಂಡಿಯಾ ಗೇಟ್​ ಬಳಿ ನಿನ್ನೆ ಒಂದು ಮ್ಯಾಜಿಕ್​ ನಡೆದಿದೆ!
ಇಂಡಿಯಾ ಗೇಟ್​ ಎದುರಿನಲ್ಲಿ ಕಸದರಾಶಿ
TV9 Web
| Edited By: ಶ್ರೀದೇವಿ ಕಳಸದ|

Updated on:Aug 23, 2022 | 3:46 PM

Share

India Gate: ಐತಿಹಾಸಿಕ ಪ್ರವಾಸಿ ಸ್ಥಳಗಳಿಗೆ ನಮ್ಮ ಭಾರತ ಅತೀ ಪ್ರಸಿದ್ಧ. ಅತಿಥಿ ದೇವೋ ಭವ ಎಂಬ ಟ್ಯಾಗ್​ಲೈನ್​ನೊಂದಿಗೆ ನಿತ್ಯವೂ ಸಾವಿರಾರು ಜನರನ್ನು ನಮ್ಮ ದೇಶ ಬರಮಾಡಿಕೊಳ್ಳುತ್ತದೆ. ಈ ಸ್ಥಳಗಳ ಪೈಕಿ ಹೊಸದೆಹಲಿಯಲ್ಲಿರುವ ಇಂಡಿಯಾ ಗೇಟ್ ಕೂಡ ಅತ್ಯಂತ ಜನಪ್ರಿಯ ಪ್ರವಾಸಿ ಸ್ಥಳ. ದಿನಕ್ಕೆ ನೂರಾರು ಜನರು ಇಲ್ಲಿಗೆ ಭೇಟಿ ನೀಡುತ್ತಾರೆ. ತೆಗೆಸಿಕೊಂಡ ಫೋಟೋಗಳನ್ನು, ಸೆಲ್ಫೀಗಳನ್ನು ತಕ್ಷಣವೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮಿಸುತ್ತಾರೆ. ಖ್ಯಾತ ಮರಳು ಶಿಲ್ಪಕಲಾವಿದ ಸುದರ್ಶನ ಪಟ್ನಾಯಕ್ ಕೂಡ ಎಲ್ಲರಂತೆ ಈ ಸ್ಥಳಕ್ಕೆ ನಿನ್ನೆ ಭೇಟಿ ನೀಡಿದರು. ನಂತರ ಅವರೂ ಫೋಟೋ, ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡರು. ಮುಂದೆ? ನೋಡಿ ನೀವೇ.

ನೋಡಿದಿರಲ್ಲ ರಸ್ತೆಯುದ್ದಕ್ಕೂ ಹರಡಿಕೊಂಡಿರುವ ಕಸದ ರಾಶಿಯ ಈ ವಿಡಿಯೋ. ‘ಇದು ಇಂಡಿಯಾ ಗೇಟ್​. ದೆಹಲಿಗೆ ಭೇಟಿ ನೀಡಲು ಸಂತೋಷವೇನೋ ಆಯಿತು. ಆದರೆ ಈ ಕಸದ ರಾಶಿ ನೋಡಿ ಅತೀವ ನಿರಾಶೆಯಾಯಿತು. ದಯವಿಟ್ಟು ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ನಗರಗಳನ್ನು ಅದರಲ್ಲೂ ರಾಷ್ಟ್ರೀಯ ಐತಿಹ್ಯವುಳ್ಳ ಮಹಾನಗರಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು’ ಎಂದು ಸುದರ್ಶನ ಮನವಿಯುಕ್ತ ಪೋಸ್ಟ್ ಮಾಡಿದರು.

ತಕ್ಷಣವೇ ಅಧಿಕಾರಿಗಳು ಕ್ರಮ ಕೈಗೊಂಡರು! ಆನಂತರದ ಪೋಸ್ಟ್​ ಹಂಚಿಕೊಂಡ ಸುದರ್ಶನ ಧನ್ಯವಾದ ತಿಳಿಸಿದರು.

ಏನೇ ಸುಧಾರಣೆಯಾಗಬೇಕೆಂದರೂ ಸಾಮಾಜಿಕ ಜಾಲತಾಣದ ಮೂಲಕವೇ ಗಮನ ಸೆಳೆಯಬೇಕು ಎನ್ನುವಂಥ ಡಿಜಿಟಲ್​ ಕಾಲದಲ್ಲಿ ನಾವಿದ್ದೇವೆ. ಅಂತೂ ಕೂಡಿಟ್ಟ ಕಸ ಮುಕ್ತಿ ಕಂಡಿತಲ್ಲ. ಒಳ್ಳೆಯದೇ!

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:55 pm, Tue, 23 August 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ