AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಸಂಬಂಧದ ಶಂಕೆ; ಪತ್ನಿಯ ತಲೆ ಕಡಿದು ಬೀದಿಯಲ್ಲಿ ಮೆರವಣಿಗೆ ಮಾಡಿದ ಪತಿ

ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ಗಂಡ ಹೆಂಡಿರ ಜಗಳ ಕೊಲೆಯಲ್ಲಿ ಕೊನೆಗೊಂಡಿದೆ. ಹೌದು ಕೌಟುಂಬಿಕ ಸಮಸ್ಯೆಯ ಕಾರಣದಿಂದ ವ್ಯಕ್ತಿಯೊಬ್ಬ ಕೋಪದ ಕೈಗೆ ಬುದ್ಧಿ ಕೊಟ್ಟು ಪತ್ನಿಯ ತಲೆಯನ್ನೇ ಕಡಿದು, ಬೀದಿಯಲ್ಲಿ ಮೆರವಣಿಗೆ ಮಾಡಿದ್ದಾನೆ.

ಅಕ್ರಮ ಸಂಬಂಧದ ಶಂಕೆ; ಪತ್ನಿಯ ತಲೆ ಕಡಿದು ಬೀದಿಯಲ್ಲಿ ಮೆರವಣಿಗೆ ಮಾಡಿದ ಪತಿ
ವೈರಲ್ ಸುದ್ದಿ
ಮಾಲಾಶ್ರೀ ಅಂಚನ್​
| Edited By: |

Updated on: Feb 16, 2024 | 6:48 PM

Share

ಪತಿ ಪತ್ನಿಯರ ನಡುವೆ ಸಣ್ಣ ಪುಟ್ಟ ಜಗಳಗಳು, ಮನಸ್ತಾಪಗಳು ಇದ್ದಿದ್ದೆ. ಭಿನ್ನಭಿಪ್ರಾಯ ಉಂಟಾದಾಗ ಪರಸ್ಪರ ಚರ್ಚಿಸಿ ಪರಿಹಾರವನ್ನು ಕಂಡುಕೊಳ್ಳಬೇಕು. ಇದನ್ನು ಮಾಡಲು ವಿಫಲವಾದರೆ ಸಂಬಂಧವು ಹದಗೆಡುತ್ತವೆ. ಇದೇ ಕಾರಣದಿಂದ ಅದೆಷ್ಟೋ ದಂಪತಿಗಳು ದೂರವಾಗಿದ್ದಾರೆ. ಆದರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಅನುಮಾನಿಸಿ   ವ್ಯಕ್ತಿಯೊಬ್ಬ ಕೋಪದ ಕೈಗೆ ಬುದ್ಧಿಕೊಟ್ಟು ಪತ್ನಿಯ ತಲೆಯನ್ನು ಕಡಿದು, ರುಂಡವನ್ನು ಹಿಡಿದುಕೊಂಡು ಬೀದಿಯಲ್ಲಿ ಮೆರವಣಿಗೆ ಮಾಡಿದ್ದಾನೆ.

ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯ ಪಟಾಶಪುರದಲ್ಲಿ ಬುಧವಾರ (ಫೆಬ್ರವರಿ 14) ಈ ಆಘಾತಕಾರಿ ಘಟನೆ ನಡೆದಿದ್ದು,  ಗೌತಮ್ ಗುಚೈತ್ ಎಂಬವನು  ತನ್ನ ಪತ್ನಿಯ ರುಂಡವನ್ನು ಕತ್ತರಿಸಿ,  ರುಂಡವನ್ನು ಹಿಡಿದುಕೊಂಡು ಊರಿಡಿ ಮೆರವಣಿಗೆ ಮಾಡಿದ್ದಾನೆ. ಈ ದೃಶ್ಯವನ್ನು ಕಣ್ಣಾರೆ ಕಂಡ ಸ್ಥಳೀಯರು  ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.  ಸ್ಥಳೀಯರಿಂದ ಮಾಹಿತಿ ಪಡೆದ ಪಟಾಶಪುರ ಠಾಣೆ ಪೋಲೀಸರು ತಕ್ಷಣ ಆಗಮಿಸಿ ಆತನನ್ನು ಬಂಧಿಸಿದ್ದಾರೆ. ಗೌತಮ್ ಮೊದಲು ಮಾರಕಾಸ್ತ್ರದಿಂದ ಪತ್ನಿ ಫುಲ್ರಾಣಿ ಗುಚೈತ್  ತಲೆ ಕಡಿದು, ರುಂಡವನ್ನು ಹಿಡಿದು ಸಾರ್ವಜನಿಕವಾಗಿ ಬೀದಿಗಳಲ್ಲಿ ತಿರುಗಾಡಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಪತ್ನಿಯ ಅಕ್ರಮ ಸಂಬಂಧದ ಶಂಕೆಯಿಂದ ನಡೆಯಿತು ಭೀಕರ ಕೊಲೆ:

ವೃತ್ತಿಯಲ್ಲಿ ಬೀದಿ ಬದಿ ವ್ಯಾಪಾರಿಯಾಗಿರುವ ಗೌತಮ್  ಗುಚೈತ್ ಕಳೆದ ಕೆಳದಿನಗಳಿಂದ ಪತ್ನಿಗೆ ಅಕ್ರಮ ಸಂಬಂಧವಿದೆಯೆಂದು ಅನುಮಾನಿಸಿ ಆಕೆಯ ಜೊತೆ ದಿನನಿತ್ಯ ಜಗಳವಾಡುತ್ತಿದ್ದ. ಹೀಗೆ ಮೊನ್ನೆ ಬುಧವಾರ (ಫೆಬ್ರವರಿ 14) ಕೋಪದ ಕೈಗೆ ಬುದ್ಧಿ ಕೊಟ್ಟು ಪತ್ನಿಯ ತಲೆಯನ್ನೇ ಕಡಿದಿದ್ದಾನೆ. ತುಂಡರಿಸಿದ ತಲೆ ಹಾಗೂ ಕೊಲೆ ಮಾಡಲು ಬಳಸಿದ ಆಯುಧವನ್ನು ವಶಪಡಿಸಿಕೊಂಡ ಪೋಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಜೊತೆಗೆ ಆರೋಪಿಯ ಪೋಷಕರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ: ಇದು ಎಣ್ಣೆ​​​​​ ಎಫೆಕ್ಟ್​​, ಕಾಲಿನಲ್ಲಿ ಒಂದು ಡಿಚ್ಚಿ, ಕಾರಿನ ಗಾಜು ಪುಡಿ ಪುಡಿ

ಒಂದು ಬಾರಿ ಈ ಆರೋಪಿ ಮೃಗಾಲದಲ್ಲಿ  ಸಿಂಹದ ಬೋನಿಗೆ ಪ್ರವೇಶಿಸಿದ್ದ:

ಗೌತಮ್ ಗುಚೈತ್ ನ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಇದೇ ಕಾರಣದಿಂದ ಈ ಮೊದಲು ಕೂಡ ಈತ ಹಲವಾರು ದುಸ್ಸಾಹಾಸಕ್ಕೆ ಕೈ ಹಾಕಿದ್ದ. ಹೌದು ಈತ 2021 ರಲ್ಲಿ ಕೋಲ್ಕತ್ತಾದ ಅಲಿಪೋರ್ ಝೂಲಾಜಿಕಲ್ ಗಾರ್ಡನ್ ಅಲ್ಲಿ ಸಿಂಹದ ಬೋನಿಗೆ ಪ್ರವೇಶಿಸಿ ಹುಚ್ಚಾಟ ಮೆರೆದಿದ್ದನು. ಇದೀಗ ಈ ಸೈಕೊ ಅಕ್ರಮ ಸಂಬಂಧದ ಶಂಕೆ ಹಿನ್ನೆಲೆ ಪತ್ನಿಯ ತಲೆಯನ್ನೇ ಕಡಿದು, ಬರ್ಬರ ಹತ್ಯೆ ನಡೆಸಿದ್ದಾನೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ