AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಸಂಬಂಧದ ಶಂಕೆ; ಪತ್ನಿಯ ತಲೆ ಕಡಿದು ಬೀದಿಯಲ್ಲಿ ಮೆರವಣಿಗೆ ಮಾಡಿದ ಪತಿ

ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ಗಂಡ ಹೆಂಡಿರ ಜಗಳ ಕೊಲೆಯಲ್ಲಿ ಕೊನೆಗೊಂಡಿದೆ. ಹೌದು ಕೌಟುಂಬಿಕ ಸಮಸ್ಯೆಯ ಕಾರಣದಿಂದ ವ್ಯಕ್ತಿಯೊಬ್ಬ ಕೋಪದ ಕೈಗೆ ಬುದ್ಧಿ ಕೊಟ್ಟು ಪತ್ನಿಯ ತಲೆಯನ್ನೇ ಕಡಿದು, ಬೀದಿಯಲ್ಲಿ ಮೆರವಣಿಗೆ ಮಾಡಿದ್ದಾನೆ.

ಅಕ್ರಮ ಸಂಬಂಧದ ಶಂಕೆ; ಪತ್ನಿಯ ತಲೆ ಕಡಿದು ಬೀದಿಯಲ್ಲಿ ಮೆರವಣಿಗೆ ಮಾಡಿದ ಪತಿ
ವೈರಲ್ ಸುದ್ದಿ
ಮಾಲಾಶ್ರೀ ಅಂಚನ್​
| Edited By: |

Updated on: Feb 16, 2024 | 6:48 PM

Share

ಪತಿ ಪತ್ನಿಯರ ನಡುವೆ ಸಣ್ಣ ಪುಟ್ಟ ಜಗಳಗಳು, ಮನಸ್ತಾಪಗಳು ಇದ್ದಿದ್ದೆ. ಭಿನ್ನಭಿಪ್ರಾಯ ಉಂಟಾದಾಗ ಪರಸ್ಪರ ಚರ್ಚಿಸಿ ಪರಿಹಾರವನ್ನು ಕಂಡುಕೊಳ್ಳಬೇಕು. ಇದನ್ನು ಮಾಡಲು ವಿಫಲವಾದರೆ ಸಂಬಂಧವು ಹದಗೆಡುತ್ತವೆ. ಇದೇ ಕಾರಣದಿಂದ ಅದೆಷ್ಟೋ ದಂಪತಿಗಳು ದೂರವಾಗಿದ್ದಾರೆ. ಆದರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಅನುಮಾನಿಸಿ   ವ್ಯಕ್ತಿಯೊಬ್ಬ ಕೋಪದ ಕೈಗೆ ಬುದ್ಧಿಕೊಟ್ಟು ಪತ್ನಿಯ ತಲೆಯನ್ನು ಕಡಿದು, ರುಂಡವನ್ನು ಹಿಡಿದುಕೊಂಡು ಬೀದಿಯಲ್ಲಿ ಮೆರವಣಿಗೆ ಮಾಡಿದ್ದಾನೆ.

ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯ ಪಟಾಶಪುರದಲ್ಲಿ ಬುಧವಾರ (ಫೆಬ್ರವರಿ 14) ಈ ಆಘಾತಕಾರಿ ಘಟನೆ ನಡೆದಿದ್ದು,  ಗೌತಮ್ ಗುಚೈತ್ ಎಂಬವನು  ತನ್ನ ಪತ್ನಿಯ ರುಂಡವನ್ನು ಕತ್ತರಿಸಿ,  ರುಂಡವನ್ನು ಹಿಡಿದುಕೊಂಡು ಊರಿಡಿ ಮೆರವಣಿಗೆ ಮಾಡಿದ್ದಾನೆ. ಈ ದೃಶ್ಯವನ್ನು ಕಣ್ಣಾರೆ ಕಂಡ ಸ್ಥಳೀಯರು  ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.  ಸ್ಥಳೀಯರಿಂದ ಮಾಹಿತಿ ಪಡೆದ ಪಟಾಶಪುರ ಠಾಣೆ ಪೋಲೀಸರು ತಕ್ಷಣ ಆಗಮಿಸಿ ಆತನನ್ನು ಬಂಧಿಸಿದ್ದಾರೆ. ಗೌತಮ್ ಮೊದಲು ಮಾರಕಾಸ್ತ್ರದಿಂದ ಪತ್ನಿ ಫುಲ್ರಾಣಿ ಗುಚೈತ್  ತಲೆ ಕಡಿದು, ರುಂಡವನ್ನು ಹಿಡಿದು ಸಾರ್ವಜನಿಕವಾಗಿ ಬೀದಿಗಳಲ್ಲಿ ತಿರುಗಾಡಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಪತ್ನಿಯ ಅಕ್ರಮ ಸಂಬಂಧದ ಶಂಕೆಯಿಂದ ನಡೆಯಿತು ಭೀಕರ ಕೊಲೆ:

ವೃತ್ತಿಯಲ್ಲಿ ಬೀದಿ ಬದಿ ವ್ಯಾಪಾರಿಯಾಗಿರುವ ಗೌತಮ್  ಗುಚೈತ್ ಕಳೆದ ಕೆಳದಿನಗಳಿಂದ ಪತ್ನಿಗೆ ಅಕ್ರಮ ಸಂಬಂಧವಿದೆಯೆಂದು ಅನುಮಾನಿಸಿ ಆಕೆಯ ಜೊತೆ ದಿನನಿತ್ಯ ಜಗಳವಾಡುತ್ತಿದ್ದ. ಹೀಗೆ ಮೊನ್ನೆ ಬುಧವಾರ (ಫೆಬ್ರವರಿ 14) ಕೋಪದ ಕೈಗೆ ಬುದ್ಧಿ ಕೊಟ್ಟು ಪತ್ನಿಯ ತಲೆಯನ್ನೇ ಕಡಿದಿದ್ದಾನೆ. ತುಂಡರಿಸಿದ ತಲೆ ಹಾಗೂ ಕೊಲೆ ಮಾಡಲು ಬಳಸಿದ ಆಯುಧವನ್ನು ವಶಪಡಿಸಿಕೊಂಡ ಪೋಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಜೊತೆಗೆ ಆರೋಪಿಯ ಪೋಷಕರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ: ಇದು ಎಣ್ಣೆ​​​​​ ಎಫೆಕ್ಟ್​​, ಕಾಲಿನಲ್ಲಿ ಒಂದು ಡಿಚ್ಚಿ, ಕಾರಿನ ಗಾಜು ಪುಡಿ ಪುಡಿ

ಒಂದು ಬಾರಿ ಈ ಆರೋಪಿ ಮೃಗಾಲದಲ್ಲಿ  ಸಿಂಹದ ಬೋನಿಗೆ ಪ್ರವೇಶಿಸಿದ್ದ:

ಗೌತಮ್ ಗುಚೈತ್ ನ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಇದೇ ಕಾರಣದಿಂದ ಈ ಮೊದಲು ಕೂಡ ಈತ ಹಲವಾರು ದುಸ್ಸಾಹಾಸಕ್ಕೆ ಕೈ ಹಾಕಿದ್ದ. ಹೌದು ಈತ 2021 ರಲ್ಲಿ ಕೋಲ್ಕತ್ತಾದ ಅಲಿಪೋರ್ ಝೂಲಾಜಿಕಲ್ ಗಾರ್ಡನ್ ಅಲ್ಲಿ ಸಿಂಹದ ಬೋನಿಗೆ ಪ್ರವೇಶಿಸಿ ಹುಚ್ಚಾಟ ಮೆರೆದಿದ್ದನು. ಇದೀಗ ಈ ಸೈಕೊ ಅಕ್ರಮ ಸಂಬಂಧದ ಶಂಕೆ ಹಿನ್ನೆಲೆ ಪತ್ನಿಯ ತಲೆಯನ್ನೇ ಕಡಿದು, ಬರ್ಬರ ಹತ್ಯೆ ನಡೆಸಿದ್ದಾನೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ