AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಲಿಯುಗದಲ್ಲೂ ನಡೆಯಿತು ಸೀತಾಸ್ವಯಂವರ; ಬಿಲ್ಲು ಎತ್ತಿ ಮದುಮಗಳನ್ನು ವರಿಸಿದ ಹುಡುಗ! ವಿಡಿಯೋ ನೋಡಿ

ಮದುಮಗಳು ಮೊದಲು, ವಿವಾಹ ವೇದಿಕೆಯಲ್ಲಿ ಎರಡೂ ಕೈಜೋಡಿಸಿ ಶಿವನನ್ನು ಪ್ರಾರ್ಥನೆ ಮಾಡಿದ್ದಾಳೆ. ಬಳಿಕ, ಹುಡುಗ ಬಿಲ್ಲು ಎತ್ತಿ ಮುರಿದಿದ್ದಾನೆ.‌ ಧನಸ್ಸು ಎತ್ತಿ ಹುಡುಗಿಯನ್ನು ಮದುವೆಯಾಗಿದ್ದಾನೆ.‌

Viral Video: ಕಲಿಯುಗದಲ್ಲೂ ನಡೆಯಿತು ಸೀತಾಸ್ವಯಂವರ; ಬಿಲ್ಲು ಎತ್ತಿ ಮದುಮಗಳನ್ನು ವರಿಸಿದ ಹುಡುಗ! ವಿಡಿಯೋ ನೋಡಿ
ಕಲಿಯುಗದಲ್ಲೂ ಸೀತಾಸ್ವಯಂವರ
TV9 Web
| Edited By: |

Updated on: Jun 29, 2021 | 7:31 PM

Share

ಮದುವೆ ಸಮಾರಂಭ ಬಹಳ ವಿಜೃಂಭಣೆಯಿಂದ, ವಿಶೇಷವಾಗಿ ನಡೆಸಬೇಕು ಎಂಬುದು ಬಹುತೇಕ ಹೆತ್ತವರ ಮತ್ತು ಮದುಮಕ್ಕಳ ಕನಸು ಆಗಿರುತ್ತದೆ. ಎಲ್ಲೂ ಆಗದಂತಹ ರೀತಿಯಲ್ಲಿ ನಾವು ಮದುವೆ ಕಾರ್ಯಕ್ರಮ ಮಾಡಬೇಕು ಎಂದು ಆಸೆ ಇರುತ್ತದೆ. ಇತ್ತೀಚೆಗಂತೂ ಒಂದಿಲ್ಲೊಂದು ವಿಶೇಷ ಅಂಶಗಳನ್ನು ನಾವು ಬಹುತೇಕ ಮದುವೆಗಳಲ್ಲಿ ಕಾಣುತ್ತೇವೆ. ಅಂತಹುದೇ ಒಂದು ಘಟನೆ ಇಲ್ಲಿ ತಿಳಿದುಬಂದಿದೆ.

ಸೀತಾಸ್ವಯಂವರ ಹೋಲಿಕೆಯ ಘಟನೆಯೊಂದು ಬಿಹಾರದ ಸರನ್ ಜಿಲ್ಲೆಯಲ್ಲಿ ನಡೆದಿದೆ. ಕಲಿಯುಗದಲ್ಲಿ ತ್ರೇತಾಯುಗದಲ್ಲಿ‌ ನಡೆದಂತಹ ಘಟನೆ ನಡೆದಿದೆ. ಮದುಮಗ ಬಿಲ್ಲು ಎತ್ತಿ ಮದುವೆಯಾಗಿದ್ದಾರೆ. ಸರನ್ ಜಿಲ್ಲೆಯ ಸೋನ್‌ಪುರ್ ಬ್ಲಾಕ್‌ನ ಸಬಲ್‌ಪುರ್ ಈಸ್ಟ್ ವಿಭಾಗದಲ್ಲಿ ಈ ರೀತಿ ಮದುವೆ ನಡೆದಿದೆ.

ಮದುಮಗಳು ಮೊದಲು, ವಿವಾಹ ವೇದಿಕೆಯಲ್ಲಿ ಎರಡೂ ಕೈಜೋಡಿಸಿ ಶಿವನನ್ನು ಪ್ರಾರ್ಥನೆ ಮಾಡಿದ್ದಾಳೆ. ಬಳಿಕ, ಹುಡುಗ ಬಿಲ್ಲು ಎತ್ತಿ ಮುರಿದಿದ್ದಾನೆ.‌ ಧನಸ್ಸು ಎತ್ತಿ ಹುಡುಗಿಯನ್ನು ಮದುವೆಯಾಗಿದ್ದಾನೆ.‌ ಈ ಸಂದರ್ಭವನ್ನು ನೆರೆದ ಜನರೆಲ್ಲಾ ಸಂಭ್ರಮಿಸಿದ್ದಾರೆ. ಚಪ್ಪಾಳೆ ತಟ್ಟಿ ಹರ್ಷ ವ್ಯಕ್ತಪಡಿಸಿದ್ದಾರೆ. ವಿಶೇಷ ಎಂದರೆ ಈ ಸ್ವಯಂವರ ಕಾರ್ಯಕ್ರಮದಲ್ಲಿ ಇತರ ಸ್ಪರ್ಧಿಗಳೂ ಇದ್ದರು. ಆದರೆ, ವರ ಯಾರು ಎಂಬುದು ಮೊದಲೇ ನಿಗದಿಯಾಗಿತ್ತು.

ಸೀತಾಸ್ವಯಂವರ ರಾಮಾಯಣದ ಪ್ರಮುಖ ಭಾಗವಾಗಿದೆ. ಅದರಂತೆ ಈ ವಿವಾಹ ಕಾರ್ಯಕ್ರಮವನ್ನು ನಡೆಸಲಾಗಿದೆ. ರಾಮಾಯಣದಲ್ಲಿ ಸೀತೆಯ ವಿವಾಹಕ್ಕೆ ಸ್ವಯಂವರ ಸಮಾರಂಭವನ್ನು ಆಕೆಯ ತಂದೆ ಜನಕ ಮಹಾರಾಜ ಆಯೋಜಿಸುತ್ತಾನೆ. ಅದರಲ್ಲಿ ವರನು ಧನಸ್ಸು ಎತ್ತಿ ಹುಡುಗಿಯನ್ನು ವರಿಸಬೇಕಿರುತ್ತದೆ.

ರಾಮಾಯಣದ ಆ ಕಾರ್ಯಕ್ರಮಕ್ಕೆ ರಾವಣನೂ ಬಂದಿರುತ್ತಾನೆ. ಆದರೆ, ಧನಸ್ಸು ಬಹಳ ಭಾರವಾಗಿ ಇದ್ದದ್ದರಿಂದ ಯಾರಿಗೂ ಅದನ್ನು ಎತ್ತಲು ಆಗಿರುವುದಿಲ್ಲ. ಬಂದ ಎಲ್ಲಾ ರಾಜ ಮಹಾರಾಜರೂ ಬಿಲ್ಲು ಹೆದೆ ಏರಿಸಲು ಆಗದೆ ಇದ್ದಾಗ ರಾಮ‌ ಆ ಕಾರ್ಯ ಸಾಧನೆ ಮಾಡುತ್ತಾನೆ. ಹೀಗೆ ರಾಮ, ಸೀತೆಯನ್ನು ವರಿಸುತ್ತಾನೆ.

ಈ ಕಾರ್ಯಕ್ರಮದಲ್ಲೂ ಅದರಂತೆ ಮಾಡಲಾಗಿದೆ. ಮದುವೆ ಹುಡುಗಿ ವೇದಿಕೆಗೆ ಬರುತ್ತಿದ್ದಂತೆ ಆಕೆಯ ಮೇಲೆ ಹೂಮಳೆ ಸುರಿಸಲಾಗಿದೆ. ಉಳಿದಂತೆ ಮದುವೆ ಸಂಪ್ರದಾಯಗಳನ್ನೂ ಮಾಡಲಾಗಿದೆ. ಕೊರೊನಾ ಕಾಲದಲ್ಲೂ ಇಂತಹ ವಿಶೇಷ ಮದುವೆಯೊಂದು ಸುದ್ದಿಯಾಗಿದೆ. ಆದರೆ, ವಿವಾಹ ಸಮಾರಂಭದಲ್ಲಿ ಯಾರೂ ಕೊವಿಡ್ ನಿಯಮ ಪಾಲಿಸಿಲ್ಲ ಎಂಬುದು ವಿಷಾದನೀಯ ವಿಚಾರವಾಗಿದೆ.

ಇದನ್ನೂ ಓದಿ: ಕೈಗಳಿಲ್ಲದ ಯುವಕ ಕಾಲಿನಲ್ಲಿಯೇ ಕೇರಂ ಆಟ ಆಡ್ತಾರೆ! ನೆಟ್ಟಿಗರ ಹೃದಯ ಗೆದ್ದ ವಿಡಿಯೋ ವೈರಲ್

ಸಿಇಓ ಜತೆ ಆನ್​ಲೈನ್​ ಮೀಟಿಂಗ್​ ನಡೆಸುವಾಗ ಪೇಚಿಗೆ ಸಿಲುಕಿದ ಮಹಿಳಾ ಉದ್ಯೋಗಿ; ವೈರಲ್ ಆಯ್ತು ವಿಡಿಯೋ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ